ಕೋವಿಡ್-19 ಸಮಯದ ಬಳಕೆ: ಮಹಾಭಾರತವನ್ನು ಅನುವಾದ ಮಾಡಿದ 12 ವರ್ಷದ ಬಾಲಕ 
ದೇಶ

ಕೋವಿಡ್-19 ಸಮಯದ ಬಳಕೆ: ಮಹಾಭಾರತವನ್ನು ಅನುವಾದ ಮಾಡಿದ 12 ವರ್ಷದ ಬಾಲಕ 

ಕೋವಿಡ್-19 ಅವಧಿಯನ್ನು ಹಲವರು ಉತ್ತಮವಾಗಿ ಬಳಕೆ ಮಾಡಿಕೊಳ್ಳುತ್ತಿದ್ದಾರೆ.

ಜಾಜ್ಪುರ: ಕೋವಿಡ್-19 ಅವಧಿಯನ್ನು ಹಲವರು ಉತ್ತಮವಾಗಿ ಬಳಕೆ ಮಾಡಿಕೊಳ್ಳುತ್ತಿದ್ದಾರೆ. 12 ವರ್ಷದ ಬಾಲಕನೋರ್ವ ಮಹಾಭಾರತವನ್ನು ಅನುವಾದ ಮಾಡಿ ಕೋವಿಡ್-19 ರ ಲಾಕ್ ಡೌನ್ ಅವಧಿಯನ್ನು ಅತ್ಯುತ್ತಮವಾಗಿ ಬಳಕೆ ಮಾಡಿಕೊಂಡಿದ್ದಾನೆ. 

ಜಾಜ್ಪುರದಲ್ಲಿರುವ ಉದಯ ಕುಮಾರ್ ಬಾಲಕ ಒಡಿಯಾ ಭಾಷೆಗೆ ಮಹಾಭಾರತವನ್ನು ಭಾಷಾಂತರ ಮಾಡಿದ್ದಾನೆ. ಶಾಲೆಗಳು ಮುಚ್ಚಲ್ಪಟ್ಟಿರುವುದರಿಂದ ಈ ಅವಧಿಯನ್ನು ಸದ್ಬಳಕೆ ಮಾಡಿಕೊಂಡಿದ್ದಾನೆ. 

ಜಯಂತಿ ಸಾಹೋ ಚಂದ್ರಕಾಂತ್ ಸಾಹೋ ಅವರ ಪುತ್ರ ಉದಯ್ ಕುಮಾರ್ ಸಾಹೋ ಖರ್ಮಾಂಗಿ ಗ್ರಾಮದವರಾಗಿದ್ದು, 250 ಪೇಜ್ ಗಳ ಹಿಂದಿಯಿಂದ  ಮಹಾಭಾರತವನ್ನು ಒಡಿಯಾಗೆ ಭಾಷಾಂತರ ಮಾಡಿದ್ದಾರೆ. 

ಮಾರ್ಚ್ ನಲ್ಲಿ ಲಾಕ್ ಡೌನ್ ಘೋಷಣೆಯಾದ ಬೆನ್ನಲ್ಲೇ ಉದಯ್ ಕುಮಾರ್ ಮಹಾಭಾರತವನ್ನು ಭಾಷಾಂತರ ಮಾಡುವ ನಿರ್ಧಾರ ಕೈಗೊಂಡಿದ್ದರು. 

ಲಾಕ್ ಡೌನ್ ಘೋಷಣೆಯಾದ ಬಳಿಕ ಆನ್ ಲೈನ್ ತರಗತಿಗಳು, ಹೋಮ್ ವರ್ಕ್ ಸೇರಿದಂತೆ ಶಾಲೆಗೆ ಸಂಬಂಧಿಸಿದ ಎಲ್ಲವೂ ಮುಗಿದ ಮೇಲೆಯೂ ನನ್ನಲ್ಲಿ ಸಮಯವಿರುತ್ತಿತ್ತು. ಅದನ್ನು ಮಹಾಭಾರತ ಅನುವಾದ ಮಾಡಲು ಉಪಯೋಗಿಸಿಕೊಂಡೆ, ಅದೇ ಅವಧಿಯಲ್ಲಿ ನನ್ನ ವಯಸ್ಸಿನ ಯುವಕನೋರ್ವ 56 ಪುಟಗಳಷ್ಟು ಇದ್ದ ರಾಮಾಯಣವನ್ನು ಅನುವಾದ ಮಾಡಿದ್ದನ್ನು ಕೇಳಿದ್ದೆ. ಆಗಲೇ ನನಗೂ ಮಹಾಭಾರತವನ್ನು ಅನುವಾದ ಮಾಡಬೇಕೆಂಬ ಆಸಕ್ತಿ ಮೂಡಿ ನಿರ್ಧಾರ ಕೈಗೊಂಡೆ ಎಂದು  ಶ್ರೀ ಅರಬಿಂದಾ ನೋಡಲ್ ಶಾಲೆಯಲ್ಲಿ 7 ನೇ ತರಗತಿಯಲ್ಲಿ ಓದುತ್ತಿರುವ ಉದಯ್ ಕುಮಾರ್ ಹೇಳಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT