ವಿಜಯ್ ಮಲ್ಯ 
ದೇಶ

ಮಲ್ಯ ಸಲ್ಲಿಸಿದ್ದ 'ಅಪರಾಧಿ ಅಲ್ಲ' ಮೇಲ್ಮನವಿ ಅರ್ಜಿ: ತೀರ್ಪು ಕಾಯ್ದಿರಿಸಿದ ಸುಪ್ರೀಂಕೋರ್ಟ್ 

ಆರ್ಥಿಕ ಅಪರಾಧದ ಆರೋಪ ಹೊತ್ತ ಮದ್ಯದ ದೊರೆ, ಉದ್ಯಮಿ ವಿಜಯ್ ಮಲ್ಯ 2017 ಮೇ ತಿಂಗಳಲ್ಲಿ ನೀಡಿರುವ ತೀರ್ಪಿನ ವಿರುದ್ಧ ಸಲ್ಲಿಸಿರುವ  ಮೇಲ್ಮನವಿ ಅರ್ಜಿಯ ತೀರ್ಪನ್ನು ಸುಪ್ರೀಂಕೋರ್ಟ್ ಕಾಯ್ದಿರಿಸಿದೆ.

ನವದೆಹಲಿ: ಆರ್ಥಿಕ ಅಪರಾಧದ ಆರೋಪ ಹೊತ್ತ ಮದ್ಯದ ದೊರೆ, ಉದ್ಯಮಿ ವಿಜಯ್ ಮಲ್ಯ 2017 ಮೇ ತಿಂಗಳಲ್ಲಿ ನೀಡಿರುವ ತೀರ್ಪಿನ ವಿರುದ್ಧ ಸಲ್ಲಿಸಿರುವ  ಮೇಲ್ಮನವಿ ಅರ್ಜಿಯ ತೀರ್ಪನ್ನು ಸುಪ್ರೀಂಕೋರ್ಟ್ ಕಾಯ್ದಿರಿಸಿದೆ.

ನ್ಯಾಯಾಲಯದ ಆದೇಶ ಉಲ್ಲಂಘಿಸಿ ಮಕ್ಕಳಿಗೆ 40 ಮಿಲಿಯನ್ ಡಾಲರ್  ಹಣ ವರ್ಗಾವಣೆ ನ್ಯಾಯಾಂಗ ನಿಂದನೆಯ ಪ್ರಯತ್ನವಾಗಿದ್ದು,ವಿಜಯ್ ಮಲ್ಯ ತಪಿತಸ್ಥನೆಂದು ಕೋರ್ಟ್ ತೀರ್ಪು ನೀಡಿತ್ತು.

ಈ ಪ್ರಕರಣ ಸಂಬಂಧ ವಾದ ವಿವಾದ ಆಲಿಸಿದ ನ್ಯಾಯಾಧೀಶರಾದ ಯುಯು ಲಲಿತ್ ಮತ್ತು ಅಶೋಕ್ ಭೂಷಣ್ ಅವರನ್ನೊಳಗೊಂಡ ದ್ವಿಸದಸ್ಯ ಪೀಠ ತೀರ್ಪನ್ನು ಕಾಯ್ದಿರಿಸಿದೆ. ಮಲ್ಯರ ವಿರುದ್ಧ ಎರಡು ಆರೋಪಿಗಳಿದ್ದು, ಆಸ್ತಿ ವಿವರ ಹಾಗೂ ಹೊರಗಿನ ಹಣದ ಬಗ್ಗೆ ಮಾಹಿತಿಯನ್ನು ನೀಡುವಲ್ಲಿ ವಿಫಲರಾಗಿದ್ದಾರೆ ಎಂದು ನ್ಯಾಯಪೀಠ ಹೇಳಿದೆ.

ಕಿಂಗ್ ಫಿಶರ್ ಏರ್ ಲೈನ್ಸ್ ಗೆ ಸಂಬಂಧಿಸಿದಂತೆ ವಿಜಯ್ ಮಲ್ಯ ವಿವಿಧ ಬ್ಯಾಂಕ್ ಗಳಿಂದ 9 ಸಾವಿರ ಕೋಟಿ ರೂಪಾಯಿಯನ್ನು ಸಾಲ ಪಡೆದು ಮರುಪಾವತಿಸದೆ ಪ್ರಸ್ತುತ ಇಂಗ್ಲೆಂಡ್ ನಲ್ಲಿ ತಲೆ ಮರೆಸಿಕೊಂಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಮೂವರು ಸಾವು; ಕೊಚ್ಚಿ ಹೋದ ಸೇತುವೆ

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

SCROLL FOR NEXT