ಪರೀಕ್ಷೆ ಮುಂದೂಡುವಂತೆ ಪ್ರತಿಭಟನೆ 
ದೇಶ

ನೀಟ್, ಜೆ ಇಇ ಪರೀಕ್ಷೆ ಮೂಂದೂಡಲು ಸುಪ್ರೀಂಗೆ 6 ರಾಜ್ಯಗಳ ಮನವಿ

ನೀಟ್, ಜೆ ಇಇ ಪರೀಕ್ಷೆ ಆಯೋಜನೆ ಕುರಿತ ಕೇಂದ್ರ ಸರ್ಕಾರ ಹಠಮಾರಿ ಧೋರಣೆ ವಿರುದ್ಧ ಬಿಜೆಪಿಯೇತರ ರಾಜ್ಯಗಳು ತಿರುಗಿಬಿದ್ದಿದ್ದು, ಪರೀಕ್ಷೆ ಮೂಂದೂಡುವಂತೆ ಸುಪ್ರೀಂ ಕೋರ್ಟ್ 6 ರಾಜ್ಯ ಸರ್ಕಾರಗಳು ಅರ್ಜಿ ಸಲ್ಲಿಸಿವೆ.

ನವದೆಹಲಿ: ನೀಟ್, ಜೆ ಇಇ ಪರೀಕ್ಷೆ ಆಯೋಜನೆ ಕುರಿತ ಕೇಂದ್ರ ಸರ್ಕಾರ ಹಠಮಾರಿ ಧೋರಣೆ ವಿರುದ್ಧ ಬಿಜೆಪಿಯೇತರ ರಾಜ್ಯಗಳು ತಿರುಗಿಬಿದ್ದಿದ್ದು, ಪರೀಕ್ಷೆ ಮೂಂದೂಡುವಂತೆ ಸುಪ್ರೀಂ ಕೋರ್ಟ್ 6 ರಾಜ್ಯ ಸರ್ಕಾರಗಳು ಅರ್ಜಿ ಸಲ್ಲಿಸಿವೆ.

ಕೊರೊನಾ ಸೋಂಕು ಹರಡುವಿಕೆ, ಮತ್ತು ಕೆಲವು ರಾಜ್ಯಗಳಲ್ಲಿ ಪ್ರವಾಹ ಭೀತಿ, ತೊಂದರೆಯ ಕಾರಣ 2020ನೇ ಸಾಲಿನ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ ನೀಟ್ ಮತ್ತು ಜಂಟಿ ಪ್ರವೇಶ ಪರೀಕ್ಷೆ (ಜೆ ಇಇ) ನಡೆಸಲು ಮುಂದಾಗಿರುವ ಕೇಂದ್ರದ ವಿರುದ್ಧ 6 ಆರು ರಾಜ್ಯಗಳು ಸುಪ್ರೀಂಕೋರ್ಟ್ ಮೊರೆ  ಹೋಗಿವೆ.

ಸಪ್ಟೆಂಬರ್ ತಿಂಗಳಿನಲ್ಲೇ ಇಂಜಿನಿಯರಿಂಗ್ ಮತ್ತು ಮೆಡಿಕಲ್ ವಿದ್ಯಾರ್ಥಿಗಳಿಗೆ ಪ್ರವೇಶ ಪರೀಕ್ಷೆ ನಡೆಸಬಾರದು. ಬದಲಿಗೆ ಈ ದಿನಾಂಕ ಮುಂದೂಡುವಂತೆ ಸರ್ವೋಚ್ಛ ನ್ಯಾಯಾಲಯಕ್ಕೆ ಮರುಪರಿಶೀಲನಾ ಅರ್ಜಿ ಸಲ್ಲಿಸಲಾಗಿದೆ. ಬಿಜೆಪಿ ಸರ್ಕಾರೇತರ ರಾಜ್ಯಗಳಾದ ಪಶ್ಚಿಮ ಬಂಗಾಳ, ರಾಜಸ್ಥಾನ, ಪಂಜಾಬ್,  ಮಹಾರಾಷ್ಟ್ರ, ಛತ್ತೀಸ್ ಗಢ ಮತ್ತು ಜಾರ್ಖಂಡ್ ರಾಜ್ಯಗಳು ಸುಪ್ರೀಂಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿವೆ.

ಇದರ ಜೊತೆಗೆ ದೇಶಾದ್ಯಂತ ಹಲವೆಡೆ ಜೆಇಇ ಮತ್ತು ನೀಟ್ ಪರೀಕ್ಷೆಗಳನ್ನು ವಿರೋಧಿಸಿ ಕಾಂಗ್ರೆಸ್ ಮತ್ತು ಭಾರತದ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟದ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

Afghan-Pak War: 'ಅಲ್ಲಾ ಕಾಪಾಡು' ಅಫ್ಘಾನ್ ಪ್ರತೀಕಾರದ ದಾಳಿ; ಆಗಸದೆತ್ತರಕ್ಕೆ ಚಿಮ್ಮಿದ ಪಾಕ್ ಸೈನಿಕರ ಶವಗಳು, ಗಡಿಯಿಂದ ಕಾಲ್ಕಿತ್ತ ಸೇನೆ, Video

ಯಾವುದೇ ಸಿದ್ಧಾಂತ ಅಥವಾ ಅಜೆಂಡಾವನ್ನು ಪ್ರಚಾರ ಮಾಡುತ್ತಿಲ್ಲ; 'ಕಾಂತಾರ: ಚಾಪ್ಟರ್ 1' ಕುರಿತು ರಿಷಬ್ ಶೆಟ್ಟಿ

'ಆಕೆ ಮಧ್ಯರಾತ್ರಿ 12.30ಕ್ಕೆ ಹೇಗೆ ಹೊರಬಂದಳು?': ಗ್ಯಾಂಗ್ ರೇಪ್ ಕುರಿತು ಮಮತಾ ಬ್ಯಾನರ್ಜಿ ಹೇಳಿಕೆ

ಹಾಸನಾಂಬ ದರ್ಶನಕ್ಕೆ ಭಕ್ತರ ಸಂಖ್ಯೆ ಹೆಚ್ಚಳ: ಎರಡೇ ದಿನಗಳಲ್ಲಿ ರೂ. 2.24 ಕೋಟಿ ಆದಾಯ, ಆರು ಸಿಬ್ಬಂದಿ ಅಮಾನತು!

SCROLL FOR NEXT