ಮಾಜಿ ಐಪಿಎಸ್ ಅಧಿಕಾರಿ ಕೆ. ಅಣ್ಣಾಮಲೈ 
ದೇಶ

ಬಿಜೆಪಿ ಸೇರಿದ್ಧ ಅಣ್ಣಾಮಲೈ ವಿರುದ್ಧ ಕೊಯಂಬತ್ತೂರಿನಲ್ಲಿ ಪ್ರಕರಣ ದಾಖಲು

ಕಾನೂನುಬಾಹಿರ ಸಭೆ ನಡೆಸಿದ ಕಾರಣದಿಂದ ಮೂರು ದಿನಗಳ  ಹಿಂದಷ್ಟೇ ಬಿಜೆಪಿಗೆ ಸೇರಿದ್ದ ಕರ್ನಾಟಕ ಕೇಡರ್‌ನ ಮಾಜಿ ಐಪಿಎಸ್‌ ಅಧಿಕಾರಿ ಕೆ.ಅಣ್ಣಾಮಲೈ ಹಾಗೂ ಕೆಲ ಪಕ್ಷದ ಕಾರ್ಯಕರ್ತರ ವಿರುದ್ಧ ಕೊಯಂಬತ್ತೂರು ನಗರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. 

ಕೊಯಂಬತ್ತೂರು: ಕಾನೂನುಬಾಹಿರ ಸಭೆ ನಡೆಸಿದ ಕಾರಣದಿಂದ ಮೂರು ದಿನಗಳ  ಹಿಂದಷ್ಟೇ ಬಿಜೆಪಿಗೆ ಸೇರಿದ್ದ ಕರ್ನಾಟಕ ಕೇಡರ್‌ನ ಮಾಜಿ ಐಪಿಎಸ್‌ ಅಧಿಕಾರಿ ಕೆ.ಅಣ್ಣಾಮಲೈ ಹಾಗೂ ಕೆಲ ಪಕ್ಷದ ಕಾರ್ಯಕರ್ತರ ವಿರುದ್ಧ ಕೊಯಂಬತ್ತೂರು ನಗರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. 

 ಕೊಯಂಬತ್ತೂರಿನ  ವಿಕೆಕೆ ಮೆನನ್ ರಸ್ತೆಯಲ್ಲಿರುವ ಬಿಜೆಪಿ ಕಚೇರಿಗೆ ಗುರುವಾರ ಅಣ್ಣಾಮಲೈ ಭೇಟಿ ನೀಡಿದ ಸಂದರ್ಭದಲ್ಲಿ  ಪಕ್ಷದ ಕಾರ್ಯಕರ್ತರು ಅದ್ದೂರಿಯಿಂದ  ಸ್ವಾಗತಿಸಿದ್ದರು. ಆದರೆ, ಕೊರೊನಾ ವೈರಸ್‌ ನಿಯಂತ್ರಣಕ್ಕಾಗಿ ಹೇರಿದ್ದ ಲಾಕ್‌ಡೌನ್‌ ನಿಯಮಗಳನ್ನು ಉಲ್ಲಂಘಿಸಿ ಪಕ್ಷದ ಕಚೇರಿಯಲ್ಲಿ ಬಹಳಷ್ಟು ಕಾರ್ಯಕರ್ತರು ಸೇರಿರುವುದು ಕಂಡುಬಂದಿತ್ತು.

ಅಲ್ಲದೇ, ಕಾರ್ಯಕರ್ತರು ಪಟಾಕಿ ಸಿಡಿಸಿ ಸಂಭ್ರಮಿಸಿದ್ದರು.  ಕೆ.ಅಣ್ಣಾಮಲೈ  ವಾಹನವೊಂದರಿಂದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ್ದರು. ಇದರ ಆಧಾರದ ಮೇಲೆ  ಸಬ್‌ ಇನ್ಸ್‌ಪೆಕ್ಟರ್ ಸುಗನ್ಯಾ  ನೀಡಿದ ದೂರಿನ ಆಧಾರದ ಮೇಲೆ, ಕತ್ತೂರು ಪೊಲೀಸರು ಕೆ.ಅಣ್ಣಾಮಲೈ, ಬಿಜೆಪಿ ಜಿಲ್ಲಾಧ್ಯಕ್ಷ ಆರ್.ನಂದಕುಮಾರ್, ಬಿಜೆಪಿ ರಾಜ್ಯ ಮಟ್ಟದ ನಾಯಕರಾದ ಜಿಕೆಎಸ್ ಸೆಲ್ವಕುಮಾರ್, ಎಸ್.ಆರ್.ಸೇಕರ್ ಮತ್ತು ಕನಗಸಬಪತಿ ಮತ್ತು ಇತರ ಕೆಲವು ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ಕೆ.ಅಣ್ಣಾಮಲೈ ಹಾಗೂ ಇತರ ಬಿಜೆಪಿ ಕಾರ್ಯಕರ್ತರ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 143, 269, 270, 285, 341 ಹಾಗೂ ಸಾಂಕ್ರಾಮಿಕ ರೋಗಗಳ ಕಾಯ್ದೆಯ ಸೆಕ್ಷನ್ 3ರ ಅನ್ವಯ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT