ಪ್ರತಿಭಟನೆ 
ದೇಶ

ನೀಟ್, ಜೆಇಇ ಪರೀಕ್ಷೆ ಮುಂದೂಡುವಂತೆ ಆಗ್ರಹಿಸಿ ಕಾಂಗ್ರೆಸ್ ದೇಶಾದ್ಯಂತ ಪ್ರತಿಭಟನೆ

ಕೊರೋನಾ ಸಾಂಕ್ರಾಮಿಕ ನಡುವೆ ಮುಂದಿನ ತಿಂಗಳು ನೀಟ್ ಮತ್ತು ಜೆಇಇ ಪರೀಕ್ಷೆ ನಡೆಯಲಿದ್ದು ಇದರ ವಿರುದ್ಧವಾಗಿ ಕಾಂಗ್ರೆಸ್ ಪ್ರತಿಭಟನೆಗಿಳಿದಿದೆ.

ನವದೆಹಲಿ: ಕೊರೋನಾ ಸಾಂಕ್ರಾಮಿಕ ನಡುವೆ ಮುಂದಿನ ತಿಂಗಳು ನೀಟ್ ಮತ್ತು ಜೆಇಇ ಪರೀಕ್ಷೆ ನಡೆಯಲಿದ್ದು ಇದರ ವಿರುದ್ಧವಾಗಿ ಕಾಂಗ್ರೆಸ್ ಪ್ರತಿಭಟನೆಗಿಳಿದಿದೆ.

ಇಂದು ದೇಶಾದ್ಯಂತ ಪ್ರತಿಭಟನೆಗೆ ಚಾಲನೆ ನೀಡಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಜನರು ಪರೀಕ್ಷೆ ನಡೆಸುವುದನ್ನು ವಿರೋಧಿಸಬೇಕೆಂದು ಒತ್ತಾಯಿಸಿದ್ದಾರೆ.

ದೇಶದಲ್ಲಿ ಕೊರೋನಾ ಸಾಂಕ್ರಾಮಿಕ ಮತ್ತು ಪ್ರವಾಹ ಸ್ಥಿತಿಯಂತಹ ಸಂಕಷ್ಟವಿದ್ದು ಈ ಸಂದರ್ಭದಲ್ಲಿ ಸರ್ಕಾರ ಪರೀಕ್ಷೆ ವಿದ್ಯಾರ್ಥಿಗಳ ಜೀವನ ಜತೆ ಚಲ್ಲಾಟವಾಡಬಾರದು. ವಿದ್ಯಾರ್ಥಿಗಳ ಜೊತೆ ನೀವು ಧ್ವನಿಯಾಗಬೇಕು. ವಿದ್ಯಾರ್ಥಿಗಳ ಹಿತದೃಷ್ಟಿಯ ಬಗ್ಗೆ ಮಾತನಾಡಿ, ಸರ್ಕಾರ ವಿದ್ಯಾರ್ಥಿಗಳ ಮಾತನ್ನು ಕೇಳಬೇಕು ಎಂದು ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ.

ಕರ್ನಾಟಕ ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ ಪ್ರತಿಭಟನೆ ನಡೆಯುತ್ತಿದೆ. ಹಲವು ಕಾಂಗ್ರೆಸ್ ನಾಯಕರು ತಮ್ಮ ವಿರೋಧ ವ್ಯಕ್ತಪಡಿಸಿದ್ದಾರೆ.ಹಲವು ವಿದ್ಯಾರ್ಥಿ ಸಂಘಟನೆಗಳು ಕೂಡ ಪ್ರತಿಭಟನೆಯಲ್ಲಿ ತೊಡಗಿವೆ.

ಆದರೆ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಎಲ್ಲಾ ಮುನ್ನೆಚ್ಚರಿಕೆ ತೆಗೆದುಕೊಳ್ಳಲಾಗಿದ್ದು ನಿಗದಿಯಂತೆ ನೀಟ್ ಪರೀಕ್ಷೆ ಸೆಪ್ಟೆಂಬರ್ 13ರಂದು, ಜೆಇಇ ಮುಖ್ಯ ಪರೀಕ್ಷೆ ಸೆಪ್ಟೆಂಬರ್ 1ರಿಂದ 6ರವರೆಗೆ ನಡೆಯಲಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT