ಪಿ ಚಿದಂಬರಂ 
ದೇಶ

ಕೊರೋನಾ ಪೂರ್ವ ಅಸಮರ್ಪಕ ಆರ್ಥಿಕತೆಯನ್ನು ದೇವರ ಸಂದೇಶವಾಹಕಿಯಾಗಿ ಹೇಗೆ ವಿವರಿಸುವಿರಿ: ನಿರ್ಮಲಾ ಸೀತಾರಾಮನ್ ಗೆ ಪಿ ಚಿದಂಬರಂ ಪ್ರಶ್ನೆ

ಕೊರೋನಾ ಲಾಕ್ಡೌನ್ ಮತ್ತು ದೇಶದ ಆರ್ಥಿಕತೆ ಕುಸಿಯುತ್ತಿರುವುದು ದೇವರ ಆಟ ಎಂದು ಹೇಳಿಕೆ ನೀಡಿದ್ದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಬಗ್ಗೆ ವ್ಯಂಗ ಮಾಡಿರುವ ಮಾಜಿ ಹಣಕಾಸು ಸಚಿವ ಪಿ ಚಿದಂಬರಂ, ದೇವರ ಸಂದೇಶಗಾರ್ತಿಯಾಗಿ ನಿರ್ಮಲಾ ಸೀತಾರಾಮನ್ ಅವರು ಕೊರೋನಾಕ್ಕಿಂತ ಮೊದಲು ಆರ್ಥಿಕತೆಯ ಅಸಮರ್ಪಕ ನಿರ್ವಹಣೆ ಹೇಗಾಯಿತು ಎಂದು ಹೇಳಬಹುದೇ ಎಂದು ಕೇಳಿದ್ದಾರೆ.

ನವದೆಹಲಿ: ಕೊರೋನಾ ಲಾಕ್ಡೌನ್ ಮತ್ತು ದೇಶದ ಆರ್ಥಿಕತೆ ಕುಸಿಯುತ್ತಿರುವುದು ದೇವರ ಆಟ ಎಂದು ಹೇಳಿಕೆ ನೀಡಿದ್ದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಬಗ್ಗೆ ವ್ಯಂಗ ಮಾಡಿರುವ ಮಾಜಿ ಹಣಕಾಸು ಸಚಿವ ಪಿ ಚಿದಂಬರಂ, ದೇವರ ಸಂದೇಶಗಾರ್ತಿಯಾಗಿ ನಿರ್ಮಲಾ ಸೀತಾರಾಮನ್ ಅವರು ಕೊರೋನಾಕ್ಕಿಂತ ಮೊದಲು ಆರ್ಥಿಕತೆಯ ಅಸಮರ್ಪಕ ನಿರ್ವಹಣೆ ಹೇಗಾಯಿತು ಎಂದು ಹೇಳಬಹುದೇ ಎಂದು ಕೇಳಿದ್ದಾರೆ.

ಕೊರೋನಾ ಸಾಂಕ್ರಾಮಿಕ ದೇವರ ಆಟವಾದರೆ ಸತತ ಮೂರು ವರ್ಷಗಳಿಂದ ಆರ್ಥಿಕತೆ ಕುಸಿಯುತ್ತಾ ಬಂದಿದೆ, ಅದು ಹೇಗಾಯಿತು, ಸಾಂಕ್ರಾಮಿಕ ಹರಡುವುದಕ್ಕಿಂತ ಮೊದಲು ದೇಶಕ್ಕೆ ಏನಾಗಿತ್ತು, ದೇವರ ಸಂದೇಶವಾಹಕರಾಗಿ ಹಣಕಾಸು ಸಚಿವೆ ಇದಕ್ಕೆ ಉತ್ತರಿಸಬಲ್ಲರೇ ಎಂದು ಚಿದಂಬರಂ ಪ್ರಶ್ನಿಸಿದ್ದಾರೆ.

ಜಿಎಸ್ ಟಿ ಬಾಕಿ ಉಳಿಕೆಯಿಂದ ಆಗಿರುವ ನಷ್ಟವನ್ನು ಭರಿಸಲು ರಾಜ್ಯ ಸರ್ಕಾರದ ಬಳಿ ಸಾಲ ಕೇಳುವ ಕೇಂದ್ರ ಸರ್ಕಾರದ ನಡೆಯನ್ನು ಕೂಡ ಚಿದಂಬರಂ ಟೀಕಿಸಿದ್ದಾರೆ. ಹಣಕಾಸು ಜವಾಬ್ದಾರಿಯಿಂದ ಸರ್ಕಾರ ನುಣುಚಿಕೊಳ್ಳಲು ನೋಡುತ್ತಿದೆ. ಇದು ಜನತೆಗೆ ಕೇಂದ್ರ ಸರ್ಕಾರ ಮಾಡುತ್ತಿರುವ ದ್ರೋಹವಾಗಿದ್ದು ಕಾನೂನಿನ ನೇರ ಉಲ್ಲಂಘನೆ ಎಂದು ಆರೋಪಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಪಾಕಿಸ್ತಾನ-ಅಫ್ಘಾನಿಸ್ತಾನ ಯುದ್ಧ: 58 ಪಾಕ್ ಸೈನಿಕರು ಹತ, ತಾಲಿಬಾನ್ ಸರ್ಕಾರದ 'ದೊಡ್ಡ' ಹೇಳಿಕೆ

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

'ಬ್ಲೂ ಸ್ಟಾರ್ ಆಪರೇಷನ್' ಕಾರ್ಯಾಚರಣೆ ತಪ್ಪಿಗೆ ಇಂದಿರಾ ಗಾಂಧಿ ಪ್ರಾಣ ತೆತ್ತರು: ಪಿ ಚಿದಂಬರಂ

ದೇಶದ ಮುಸ್ಲಿಂರನ್ನು ಗುರಿಯಾಗಿಸಿಕೊಳ್ಳುವ ಬಿಜೆಪಿ ಅಫ್ಘಾನಿಸ್ತಾನದ ಜೊತೆ ಸಂಬಂಧ ಬೆಳೆಸುವುದು 'ಬೂಟಾಟಿಕೆ': ಮೆಹಬೂಬಾ ಮುಫ್ತಿ

20 ವರ್ಷ ಸಾಕಿ ಬೆಳೆಸಿದ 'ಅಶ್ವತ್ಥ'ಕ್ಕೆ ಕಿಡಿಗೇಡಿಗಳ ಕೊಡಲಿ ಪೆಟ್ಟು, ಬಿಕ್ಕಿ ಬಿಕ್ಕಿ ಅತ್ತ 'ವೃಕ್ಷಮಾತೆ', ಇಬ್ಬರ ಬಂಧನ, video viral

SCROLL FOR NEXT