ತಮಿಳುನಾಡು ಸಿಎಂ ಪಳನಿ ಸ್ವಾಮಿ 
ದೇಶ

ತಮಿಳುನಾಡಿನಲ್ಲಿ ಲಾಕ್ ಡೌನ್ ಸೆ.30 ವರೆಗೆ ಮುಂದುವರೆಕೆ, ಆದರೆ ನಿರ್ಬಂಧ ಸಡಿಲಿಕೆ

ತಮಿಳುನಾಡು ಸರ್ಕಾರ ಲಾಕ್ ಡೌನ್ ನ್ನು ಸೆ.30 ವರೆಗೆ ವಿಸ್ತರಣೆ ಮಾಡಿದ್ದು, ನಿರ್ಬಂಧಗಳನ್ನು ಮತ್ತಷ್ಟು ಸಡಿಲತಮಿಳುನಾಡು ಸರ್ಕಾರ ಲಾಕ್ ಡೌನ್ ನ್ನು ಸೆ.30 ವರೆಗೆ ವಿಸ್ತರಣೆ ಮಾಡಿದ್ದು, ನಿರ್ಬಂಧಗಳನ್ನು ಮತ್ತಷ್ಟು ಸಡಿಲಗೊಳಿಸಿದೆ. ಗೊಳಿಸಿದೆ. 

ಚೆನ್ನೈ: ತಮಿಳುನಾಡು ಸರ್ಕಾರ ಲಾಕ್ ಡೌನ್ ನ್ನು ಸೆ.30 ವರೆಗೆ ವಿಸ್ತರಣೆ ಮಾಡಿದ್ದು, ನಿರ್ಬಂಧಗಳನ್ನು ಮತ್ತಷ್ಟು ಸಡಿಲಗೊಳಿಸಿದೆ. 

ಸಡಿಲಗೊಳಿಸಿದ ನಿರ್ಬಂಧಗಳ ಪೈಕಿ ಸಾರ್ವಜನಿಕರಿಗೆ ದೇವಾಲಯ ಪ್ರವೇಶವನ್ನು ಮುಕ್ತಗೊಳಿಸಲಾಗುತ್ತದೆ. ಚೆನ್ನೈ ನಲ್ಲಿ ಎಂಟಿಸಿ ಬಸ್ ಗಳ ಸಂಚಾರ ಸೆ.1 ರಿಂದ, ಸೆ.07 ರಿಂದ ಮೆಟ್ರೋ ಸಂಚಾರ ಪ್ರಾರಂಭವಾಗಲಿದೆ. 

ಶಾಪಿಂಗ್ ಮಾಲ್ ಗಳು, ಶೋ ರೂಮ್ ಗಳು, ದೊಡ್ಡ ಸ್ಟೋರ್ ಗಳು ಶೇ.100 ರಷ್ಟು ನೌಕರರೊಂದಿಗೆ ಕಾರ್ಯನಿರ್ವಹಣೆ ಮಾಡಬಹುದಾಗಿದ್ದು ರಾತ್ರಿ 8 ರವರೆಗೆ ತೆರೆಯಲು ಅನುಮತಿ ನೀಡಲಾಗಿದೆ. ಐಟಿ ಸಂಸ್ಥೆಗಳಿಗೂ ಸಹ ಶೇ.100 ರಷ್ಟು ಉದ್ಯೋಗಿಗಳೊಂದಿಗೆ ಕಾರ್ಯನಿರ್ವಹಣೆ ಮಾಡುವುದಕ್ಕೆ ಅನುಮತಿ ನೀಡಲಾಗಿದೆ. 

ಹೊಟೆಲ್, ರೆಸಾರ್ಟ್, ರಿಕ್ರಿಯೇಷನ್ ಕ್ಲಬ್, ಪಾರ್ಕ್, ಪ್ಲೇ ಗ್ರೌಂಡ್ ಗಳ ಕಾರ್ಯನಿರ್ವಹಣೆಗೆ ಅನುಮತಿ, ಸರ್ಕಾರಿ ಕಚೇರಿಗಳಲ್ಲಿ ಶೇ.100 ರಷ್ಟು ಸಿಬ್ಬಂದಿಗಳೊಂದಿಗೆ ಕಾರ್ಯನಿರ್ವಹಣೆ ಮಾಡಲು ಸೆ.30 ರಿಂದ ಅನುಮತಿ ನೀಡಲಾಗುತ್ತದೆ. ತಮಿಳುನಾಡು ಸರ್ಕಾರದ ಮೂಲಗಳ ಪ್ರಕಾರ ಸೆ.1 ರಿಂದ ಭಾನುವಾರದಂದು ಸಂಪೂರ್ಣ ಲಾಕ್ ಡೌನ್ ನ್ನು ತೆಗೆದುಹಾಕಲಾಗುತ್ತದೆ. 

ಸೆ.30 ವರೆಗೆ ಧಾರ್ಮಿಕ ಸಭೆಗಳು, ಸಾಮಾಜಿಕ, ರಾಜಕೀಯ, ಸಾಂಸ್ಕೃತಿಕ, ಶೈಕ್ಷಣಿಕ ಸಭೆಗಳನ್ನು ನಿರ್ಬಂಧಿಸಲಾಗಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

SCROLL FOR NEXT