ನಿಮ್ಮ ಮಗಳಾಗಿ ಹುಟ್ಟಿದ್ದು ನನ್ನ ಅದೃಷ್ಟ; ಪ್ರಣಬ್ ಪುತ್ರಿ ಭಾವೋದ್ವೇಗದ ಟ್ವೀಟ್ 
ದೇಶ

ನಿಮ್ಮ ಮಗಳಾಗಿ ಹುಟ್ಟಿದ್ದು ನನ್ನ ಅದೃಷ್ಟ; ಪ್ರಣಬ್ ಪುತ್ರಿ ಭಾವೋದ್ವೇಗದ ಟ್ವೀಟ್  

ರಾಷ್ಟ್ರಪತಿ, ಭಾರತ ರತ್ನ ಪ್ರಣಬ್ ಮುಖರ್ಜಿ ಅವರ ನಿಧನದಿಂದಾಗಿ ಇಡೀ ದೇಶ ದುಃಖದಲ್ಲಿ ಮುಳುಗಿ ಹೋಗಿದೆ. 

ನವದೆಹಲಿ: ರಾಷ್ಟ್ರಪತಿ, ಭಾರತ ರತ್ನ ಪ್ರಣಬ್ ಮುಖರ್ಜಿ ಅವರ ನಿಧನದಿಂದಾಗಿ ಇಡೀ ದೇಶ ದುಃಖದಲ್ಲಿ ಮುಳುಗಿ ಹೋಗಿದೆ. 

ಪ್ರಣಬ್ ಮುಖರ್ಜಿ ನಿಧನಕ್ಕೆ ನಾನಾ ವಲಯಗಳ ನಾಯಕರು ಸಂತಾಪ ವ್ಯಕ್ತಪಡಿಸಿದ್ದಾರೆ. ತಂದೆಯ ಮರಣದಿಂದ ಶೋಕಸಾಗರದಲ್ಲಿ ಮುಳುಗಿರುವ ಅವರ ಪುತ್ರಿ ಶರ್ಮಿಷ್ಟ ಮುಖರ್ಜಿ ಭಾವೋದ್ವೇಗದಿಂದ ಟ್ವೀಟ್ ಮಾಡಿದ್ದಾರೆ.

ಎಲ್ಲರಿಗೂ ಧನ್ಯವಾದ ಎಂದು ಟ್ವೀಟ್ ಆರಂಭಿಸಿರುವ ಶರ್ಮಿಷ್ಟ ಅಪ್ಪ ಎಲ್ಲರೂ ನಿಮಗೆ ಅಂತಿಮ ವಿದಾಯ ಸಲ್ಲಿಸಲು ನಿಮ್ಮ ಅಚ್ಚುಮೆಚ್ಚಿನ ಕವಿಯ ಸಾಲುಗಳನ್ನು ಉಲ್ಲೇಖಿಸುವ ಸ್ವತಂತ್ರ ಪಡೆದುಕೊಳ್ಳುತ್ತೇನೆ.

ದೇಶ ಸೇವೆಯಲ್ಲಿ, ಜನರ ಸೇವೆಯಲ್ಲಿ ನೀವು ಸಂಪೂರ್ಣವಾಗಿ ಆರ್ಥಪೂರ್ಣವಾಗಿ ಜೀವನ ನಡೆಸಿದಿರಿ. ನಿಮ್ಮ ಮಗಳಾಗಿ ಜನಿಸಿದ್ದು ನನ್ನ ಅದೃಷ್ಟ ಎಂದು ಭಾವಿಸಿದ್ದೇನೆ ಎಂದು ನುಡಿದಿದ್ದಾರೆ. ಇನ್ನೂ ಆರ್ಮಿ ರೆಫರಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದ ಪ್ರಣಬ್ ಮುಖರ್ಜಿ ಸೋಮವಾರ ಸಂಜೆ ಕೊನೆ ಉಸಿರೆಳೆದರು. ಕೋವಿಡ್ ಸೋಂಕಿನ ಜತೆಗೆ ಇತರ ಅನಾರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದ ಅವರು ಸೇನಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕಲಬುರಗಿ: ಕಾರು ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಸಾವು

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ಶಾಂತಿ ಮಾತುಕತೆ ನಡೆಯುತ್ತಿರುವಾಗಲೇ ಉಕ್ರೇನ್‌ ಮೇಲೆ ರಷ್ಯಾ ದಾಳಿ; ಕನಿಷ್ಠ ಏಳು ಜನ ಸಾವು

Punishment: 5 ವರ್ಷದ ಬಾಲಕನನ್ನು ಮರಕ್ಕೆ ನೇತು ಹಾಕಿದ ಶಿಕ್ಷಕಿ!

ವಿಶ್ವಕಪ್ ವಿಜೇತ ಕರ್ನಾಟಕದ ಅಂಧ ಕ್ರಿಕೆಟ್ ಆಟಗಾರ್ತಿಯರಿಗೆ ತಲಾ 10 ಲಕ್ಷ ರೂ ನಗದು, ಸರ್ಕಾರಿ ಉದ್ಯೋಗ: ಸಿಎಂ ಸಿದ್ದರಾಮಯ್ಯ ಘೋಷಣೆ

SCROLL FOR NEXT