ನಿಮ್ಮ ಮಗಳಾಗಿ ಹುಟ್ಟಿದ್ದು ನನ್ನ ಅದೃಷ್ಟ; ಪ್ರಣಬ್ ಪುತ್ರಿ ಭಾವೋದ್ವೇಗದ ಟ್ವೀಟ್ 
ದೇಶ

ನಿಮ್ಮ ಮಗಳಾಗಿ ಹುಟ್ಟಿದ್ದು ನನ್ನ ಅದೃಷ್ಟ; ಪ್ರಣಬ್ ಪುತ್ರಿ ಭಾವೋದ್ವೇಗದ ಟ್ವೀಟ್  

ರಾಷ್ಟ್ರಪತಿ, ಭಾರತ ರತ್ನ ಪ್ರಣಬ್ ಮುಖರ್ಜಿ ಅವರ ನಿಧನದಿಂದಾಗಿ ಇಡೀ ದೇಶ ದುಃಖದಲ್ಲಿ ಮುಳುಗಿ ಹೋಗಿದೆ. 

ನವದೆಹಲಿ: ರಾಷ್ಟ್ರಪತಿ, ಭಾರತ ರತ್ನ ಪ್ರಣಬ್ ಮುಖರ್ಜಿ ಅವರ ನಿಧನದಿಂದಾಗಿ ಇಡೀ ದೇಶ ದುಃಖದಲ್ಲಿ ಮುಳುಗಿ ಹೋಗಿದೆ. 

ಪ್ರಣಬ್ ಮುಖರ್ಜಿ ನಿಧನಕ್ಕೆ ನಾನಾ ವಲಯಗಳ ನಾಯಕರು ಸಂತಾಪ ವ್ಯಕ್ತಪಡಿಸಿದ್ದಾರೆ. ತಂದೆಯ ಮರಣದಿಂದ ಶೋಕಸಾಗರದಲ್ಲಿ ಮುಳುಗಿರುವ ಅವರ ಪುತ್ರಿ ಶರ್ಮಿಷ್ಟ ಮುಖರ್ಜಿ ಭಾವೋದ್ವೇಗದಿಂದ ಟ್ವೀಟ್ ಮಾಡಿದ್ದಾರೆ.

ಎಲ್ಲರಿಗೂ ಧನ್ಯವಾದ ಎಂದು ಟ್ವೀಟ್ ಆರಂಭಿಸಿರುವ ಶರ್ಮಿಷ್ಟ ಅಪ್ಪ ಎಲ್ಲರೂ ನಿಮಗೆ ಅಂತಿಮ ವಿದಾಯ ಸಲ್ಲಿಸಲು ನಿಮ್ಮ ಅಚ್ಚುಮೆಚ್ಚಿನ ಕವಿಯ ಸಾಲುಗಳನ್ನು ಉಲ್ಲೇಖಿಸುವ ಸ್ವತಂತ್ರ ಪಡೆದುಕೊಳ್ಳುತ್ತೇನೆ.

ದೇಶ ಸೇವೆಯಲ್ಲಿ, ಜನರ ಸೇವೆಯಲ್ಲಿ ನೀವು ಸಂಪೂರ್ಣವಾಗಿ ಆರ್ಥಪೂರ್ಣವಾಗಿ ಜೀವನ ನಡೆಸಿದಿರಿ. ನಿಮ್ಮ ಮಗಳಾಗಿ ಜನಿಸಿದ್ದು ನನ್ನ ಅದೃಷ್ಟ ಎಂದು ಭಾವಿಸಿದ್ದೇನೆ ಎಂದು ನುಡಿದಿದ್ದಾರೆ. ಇನ್ನೂ ಆರ್ಮಿ ರೆಫರಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದ ಪ್ರಣಬ್ ಮುಖರ್ಜಿ ಸೋಮವಾರ ಸಂಜೆ ಕೊನೆ ಉಸಿರೆಳೆದರು. ಕೋವಿಡ್ ಸೋಂಕಿನ ಜತೆಗೆ ಇತರ ಅನಾರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದ ಅವರು ಸೇನಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

Indian Stock Market: ಸತತ ಕುಸಿತ, ಬರೊಬ್ಬರಿ ಶೇ.1ರಷ್ಟು ಕುಸಿದ Sensex, Nifty 50, ರೂಪಾಯಿ ಮೌಲ್ಯ ಇಳಿಕೆ!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

Indian Navy ಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ! Video

SCROLL FOR NEXT