ಊರ್ಮಿಳಾ ಮಾತೋಂಡ್ಕರ್ 
ದೇಶ

ಮಹಾ ಸಿಎಂ ಉದ್ಧವ್ ಠಾಕ್ರೆ ನಿವಾಸದಲ್ಲಿ ಶಿವಸೇನೆ ಸೇರಿದ ಊರ್ಮಿಳಾ ಮಾತೋಂಡ್ಕರ್

ಕಾಂಗ್ರೆಸ್ ತೊರೆದಿದ್ದ ಬಾಲಿವುಡ್ ನಟಿ ಊರ್ಮಿಳಾ ಮಾತೋಂಡ್ಕರ್ ಅವರು ಮಂಗಳವಾರ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರ ನಿವಾಸ ಮಾತೋಶ್ರಿಯಲ್ಲಿ ಶಿವಸೇನೆ ಸೇರ್ಪಡೆಯಾಗಿದ್ದಾರೆ.

ಮುಂಬೈ: ಕಾಂಗ್ರೆಸ್ ತೊರೆದಿದ್ದ ಬಾಲಿವುಡ್ ನಟಿ ಊರ್ಮಿಳಾ ಮಾತೋಂಡ್ಕರ್ ಅವರು ಮಂಗಳವಾರ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರ ನಿವಾಸ ಮಾತೋಶ್ರಿಯಲ್ಲಿ ಶಿವಸೇನೆ ಸೇರ್ಪಡೆಯಾಗಿದ್ದಾರೆ.

ಉದ್ಧವ್ ಠಾಕ್ರೆ ಅವರ ಪತ್ನಿ ರಶ್ಮಿ ಠಾಕ್ರೆ ಅವರು ನಟಿಯ ಕೈಗೆ 'ಶಿವ ಬಂಧನ್' ಎಂಬ ಎಳೆಯನ್ನು ಕಟ್ಟುವ ಮೂಲಕ ಪಕ್ಷಕ್ಕೆ ಬರಮಾಡಿಕೊಂಡರು. ಈ ವೇಳೆ ಮುಂಬೈ ಮೇಯರ್ ಕಿಶೋರಿ ಪೆಡ್ನೆಕರ್ ಮತ್ತು ಇತರ ಹಿರಿಯ ಸೇನಾ ಮುಖಂಡರು ಉಪಸ್ಥಿತರಿದ್ದರು.

ಮಾತೋಂಡ್ಕರ್ ಅವರು ಮಂಗಳವಾರ ಅಧಿಕೃತವಾಗಿ ಶಿವಸೇನೆಗೆ ಸೇರುವ ಮೊದಲು, ನಟಿಯನ್ನು ರಾಜ್ಯಪಾಲರ ಕೋಟಾದಡಿ ವಿಧಾನ ಪರಿಷತ್(ಎಂಎಲ್‌ಸಿ) ಸದಸ್ಯರಾಗಿ ನೇಮಕ ಮಾಡುವಂತೆ ಶಿಫಾರಸು ಮಾಡಲಾಗಿತ್ತು.

ಊರ್ಮಿಳಾ ಅವರು 2019ರ ಲೋಕಸಭಾ ಚುನಾವಣೆಯಲ್ಲಿ ಮುಂಬೈ ದಕ್ಷಿಣ ಕ್ಷೇತ್ರದಲ್ಲಿ ಕಾಂಗ್ರೆಸ್​​ನಿಂದ ಸ್ಪರ್ಧಿಸಿ ಸೋಲು ಅನುಭವಿಸಿದ್ದರು. ಅವರ ವಿರುದ್ಧ ಬಿಜೆಪಿ ಅಭ್ಯರ್ಥಿ ಗೋಪಾಲ್​ ಶೆಟ್ಟಿ ಗೆಲುವು ಸಾಧಿಸಿದ್ದರು. ಇದಾದ ಬಳಿಕ ಊರ್ಮಿಳಾ ಕಳೆದ ಸೆಪ್ಟೆಂಬರ್​ ನಲ್ಲಿ ಕಾಂಗ್ರೆಸ್​ ತೊರೆದಿದ್ದರು. ಇಂದು ಶಿವಸೇನೆ ಸೇರಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT