ನರೇಂದ್ರ ಸಿಂಗ್ ತೋಮರ್ 
ದೇಶ

ಮಾತುಕತೆ ವಿಫಲ ನಂತರ ನಿರ್ದಿಷ್ಟ ವಿಷಯಗಳೊಂದಿಗೆ ಚರ್ಚೆಗೆ ಬರುವಂತೆ ರೈತರಿಗೆ ಹೇಳಿದ ಕೇಂದ್ರ ಸಚಿವ ತೋಮರ್

ಪ್ರತಿಭಟನಾ ನಿರತ ರೈತರೊಂದಿಗೆ ಇಂದು ನಡೆದ ಸಭೆಯಲ್ಲಿ ಯಾವುದೇ ಒಮ್ಮತದ ತೀರ್ಮಾನಕ್ಕೆ ಬರುವಲ್ಲಿ ವಿಫಲವಾಗಿದ್ದು, ನಿರ್ದಿಷ್ಟ ವಿಷಯಗಳೊಂದಿಗೆ ಬರುವಂತೆ ರೈತರಿಗೆ ಹೇಳಿದ್ದು, ಅವರ ಸಮಸ್ಯೆಗಳನ್ನು ಚರ್ಚಿಸಲು ಕೇಂದ್ರ ಸರ್ಕಾರ ಸಿದ್ಧವಿದೆ  ಎಂದು ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಹೇಳಿದ್ದಾರೆ.

ನವದೆಹಲಿ: ಪ್ರತಿಭಟನಾ ನಿರತ ರೈತರೊಂದಿಗೆ ಇಂದು ನಡೆದ ಸಭೆಯಲ್ಲಿ ಯಾವುದೇ ಒಮ್ಮತದ ತೀರ್ಮಾನಕ್ಕೆ ಬರುವಲ್ಲಿ ವಿಫಲವಾಗಿದ್ದು, ನಿರ್ದಿಷ್ಟ ವಿಷಯಗಳೊಂದಿಗೆ ಬರುವಂತೆ ರೈತರಿಗೆ ಹೇಳಿದ್ದು, ಅವರ ಸಮಸ್ಯೆಗಳನ್ನು ಚರ್ಚಿಸಲು ಕೇಂದ್ರ ಸರ್ಕಾರ ಸಿದ್ಧವಿದೆ  ಎಂದು ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಹೇಳಿದ್ದಾರೆ.

ರಾಷ್ಟ್ರ ರಾಜಧಾನಿಯಲ್ಲಿ ವಿವಿಧ ರೈತ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿರುವಂತೆಯೇ ಇಂದು ವಿಜ್ಞಾನ ಭವನದಲ್ಲಿ 35 ರೈತ ಸಂಘಟನೆಗಳ ಪ್ರತಿನಿಧಿಯೊಂದಿಗೆ ಸಮಗ್ರವಾಗಿ ಚರ್ಚೆ ನಡೆಸಲಾಗಿದೆ. ಮತ್ತೆ ಡಿಸೆಂಬರ್ 3 ರಂದು ಸಭೆ ನಡೆಯಲಿದೆ.ಚಿಕ್ಕ ಸಮಿತಿ ರಚನೆಗೆ ಸಲಹೆ ನೀಡಿದ್ದೇವೆ, ಆದರೆ, ಆ ಸಮಿತಿಯಲ್ಲಿ ತಾವಿರಬೇಕೆಂದು ಅವರು ಹೇಳಿದ್ದು, ಅದಕ್ಕೆ  ಒಪ್ಪಿಕೊಂಡಿರುವುದಾಗಿ ತೋಮರ್ ಸಭೆಯ ಬಳಿಕ ತಿಳಿಸಿರುವುದಾಗಿ ಪಿಟಿಐ ಸುದ್ದಿಸಂಸ್ಥೆ ವರದಿ ಮಾಡಿದೆ.

ಎಲ್ಲಾ ರೈತರೊಂದಿಗೆ ಚರ್ಚಿಸಲು ಸಿದ್ಧವಿರುವುದಾಗಿ ತಿಳಿಸಿದ ಸಚಿವರು, ಪ್ರತಿಭಟನೆ ಯಾವಾಗ ಅಂತ್ಯವಾಗಲಿದೆ ಎಂಬುದನ್ನು ಕಾಲವೇ ನಿರ್ಧರಿಸಲಿದೆ. ರೈತರು ಯಾವುದೇ ನಿರ್ದಿಷ್ಟ ಸಮಸ್ಯೆಗಳೊಂದಿಗೆ ಚರ್ಚಿಸಲು ಬಂದರೆ ಅವುಗಳನ್ನು ಪರಿಶೀಲಿಸುವುದಾಗಿ ನರೇಂದ್ರ ಸಿಂಗ್ ತೋಮರ್ ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಎಸ್ ಜಾನಕಿ ಇನ್ನಿಲ್ಲ: ದಕ್ಷಿಣ ಭಾರತದ ಗಾನ ಕೋಗಿಲೆ ಮೈಸೂರಿನಲ್ಲಿ ನಿಧನ!

17 ಭಾಷೆಗಳಲ್ಲಿ 48 ಸಾವಿರ ಹಾಡುಗಳಿಗೆ ಧ್ವನಿ: 2013ರಲ್ಲಿ ಪದ್ಮಭೂಷಣ ತಿರಸ್ಕರಿಸಿದ್ದ ದಿಟ್ಟ ಗಾಯಕಿ ಎಸ್ ಜಾನಕಿ!

ಖಾಸಗಿ ಫೋನ್ ಕಂಪನಿಯ ಉದ್ಯೋಗಸ್ಥರು ವಾರ್ಷಿಕ ಸಭೆಗೆಂದು ವಿಯೆಟ್ನಾಂಗೆ ತೆರಳಿದ್ದಾಗ ದುರಂತ: ಪ್ರಧಾನಿ ಮೋದಿ ಸಂತಾಪ

ಬಾಗಲಕೋಟೆ: ಕಬ್ಬಿನ ಗದ್ದೆಯಲ್ಲಿ ಮಹಿಳೆ ಶವವಾಗಿ ಪತ್ತೆ! ಅಕ್ರಮ ಸಂಬಂಧಕ್ಕೆ ಬಲಿಯಾದ್ಲಾ ವಿವಾಹಿತೆ?

HMT ಆದಾಗ ನಾನು ಹುಟ್ಟಿರ್ಲಿಲ್ಲ, ನೀವೇನು? ಅರಣ್ಯ ಭೂಮಿ ಅಂತ ದಾಖಲೆ ತೋರಿಸಿ ಕುಮಾರಸ್ವಾಮಿಗೆ ಈಶ್ವರ್ ಖಂಡ್ರೆ ಟಾಂಗ್