ನರೇಂದ್ರ ಸಿಂಗ್ ತೋಮರ್ 
ದೇಶ

ಮಾತುಕತೆ ವಿಫಲ ನಂತರ ನಿರ್ದಿಷ್ಟ ವಿಷಯಗಳೊಂದಿಗೆ ಚರ್ಚೆಗೆ ಬರುವಂತೆ ರೈತರಿಗೆ ಹೇಳಿದ ಕೇಂದ್ರ ಸಚಿವ ತೋಮರ್

ಪ್ರತಿಭಟನಾ ನಿರತ ರೈತರೊಂದಿಗೆ ಇಂದು ನಡೆದ ಸಭೆಯಲ್ಲಿ ಯಾವುದೇ ಒಮ್ಮತದ ತೀರ್ಮಾನಕ್ಕೆ ಬರುವಲ್ಲಿ ವಿಫಲವಾಗಿದ್ದು, ನಿರ್ದಿಷ್ಟ ವಿಷಯಗಳೊಂದಿಗೆ ಬರುವಂತೆ ರೈತರಿಗೆ ಹೇಳಿದ್ದು, ಅವರ ಸಮಸ್ಯೆಗಳನ್ನು ಚರ್ಚಿಸಲು ಕೇಂದ್ರ ಸರ್ಕಾರ ಸಿದ್ಧವಿದೆ  ಎಂದು ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಹೇಳಿದ್ದಾರೆ.

ನವದೆಹಲಿ: ಪ್ರತಿಭಟನಾ ನಿರತ ರೈತರೊಂದಿಗೆ ಇಂದು ನಡೆದ ಸಭೆಯಲ್ಲಿ ಯಾವುದೇ ಒಮ್ಮತದ ತೀರ್ಮಾನಕ್ಕೆ ಬರುವಲ್ಲಿ ವಿಫಲವಾಗಿದ್ದು, ನಿರ್ದಿಷ್ಟ ವಿಷಯಗಳೊಂದಿಗೆ ಬರುವಂತೆ ರೈತರಿಗೆ ಹೇಳಿದ್ದು, ಅವರ ಸಮಸ್ಯೆಗಳನ್ನು ಚರ್ಚಿಸಲು ಕೇಂದ್ರ ಸರ್ಕಾರ ಸಿದ್ಧವಿದೆ  ಎಂದು ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಹೇಳಿದ್ದಾರೆ.

ರಾಷ್ಟ್ರ ರಾಜಧಾನಿಯಲ್ಲಿ ವಿವಿಧ ರೈತ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿರುವಂತೆಯೇ ಇಂದು ವಿಜ್ಞಾನ ಭವನದಲ್ಲಿ 35 ರೈತ ಸಂಘಟನೆಗಳ ಪ್ರತಿನಿಧಿಯೊಂದಿಗೆ ಸಮಗ್ರವಾಗಿ ಚರ್ಚೆ ನಡೆಸಲಾಗಿದೆ. ಮತ್ತೆ ಡಿಸೆಂಬರ್ 3 ರಂದು ಸಭೆ ನಡೆಯಲಿದೆ.ಚಿಕ್ಕ ಸಮಿತಿ ರಚನೆಗೆ ಸಲಹೆ ನೀಡಿದ್ದೇವೆ, ಆದರೆ, ಆ ಸಮಿತಿಯಲ್ಲಿ ತಾವಿರಬೇಕೆಂದು ಅವರು ಹೇಳಿದ್ದು, ಅದಕ್ಕೆ  ಒಪ್ಪಿಕೊಂಡಿರುವುದಾಗಿ ತೋಮರ್ ಸಭೆಯ ಬಳಿಕ ತಿಳಿಸಿರುವುದಾಗಿ ಪಿಟಿಐ ಸುದ್ದಿಸಂಸ್ಥೆ ವರದಿ ಮಾಡಿದೆ.

ಎಲ್ಲಾ ರೈತರೊಂದಿಗೆ ಚರ್ಚಿಸಲು ಸಿದ್ಧವಿರುವುದಾಗಿ ತಿಳಿಸಿದ ಸಚಿವರು, ಪ್ರತಿಭಟನೆ ಯಾವಾಗ ಅಂತ್ಯವಾಗಲಿದೆ ಎಂಬುದನ್ನು ಕಾಲವೇ ನಿರ್ಧರಿಸಲಿದೆ. ರೈತರು ಯಾವುದೇ ನಿರ್ದಿಷ್ಟ ಸಮಸ್ಯೆಗಳೊಂದಿಗೆ ಚರ್ಚಿಸಲು ಬಂದರೆ ಅವುಗಳನ್ನು ಪರಿಶೀಲಿಸುವುದಾಗಿ ನರೇಂದ್ರ ಸಿಂಗ್ ತೋಮರ್ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

Shocking: ಹೆಣ್ಣಿನ ಶವ ಎಳೆದೊಯ್ದು ಶವಾಗಾರದಲ್ಲೇ ಅತ್ಯಾಚಾರ, 25ರ ಯುವಕನಿಂದ ಪೈಶಾಚಿಕ ಕೃತ್ಯ, CCTV Video

Belagavi: ಲವರ್ ಜೊತೆ ಮಗಳು ಪರಾರಿ; ಇಡೀ ಊರಿಗೆ 'ತಿಥಿ' ಊಟ ಹಾಕಿಸಿದ ತಂದೆ!

SCROLL FOR NEXT