ಪ್ರಿಯಾಂಕಾ ಚತುರ್ವೇದಿ 
ದೇಶ

ರೈತರ ಪ್ರತಿಭಟನೆ: ನಮ್ಮ ಆಂತರಿಕ ವಿಚಾರ ರಾಜಕೀಯ ವಸ್ತುವಲ್ಲ; ಕೆನಡಾ ಪ್ರಧಾನಿ ವಿರುದ್ಧ ಶಿವಸೇನೆ ಸಂಸದೆ ಕಿಡಿ!

ಭಾರತದ ಆಂತರಿಕ ಸಮಸ್ಯೆಗಳನ್ನು ಬಳಸಿಕೊಂಡು ರಾಜಕೀಯ ಮಾಡಬೇಡಿ ಎಂದು ಕೆಡನಾ ಪ್ರಧಾನಿ ಜಸ್ಟಿನ್ ಟ್ರುಡೊಗೆ ಶಿವಸೇನೆ ಸಂಸದೆ ಪ್ರಿಯಾಂಕಾ ಚತುರ್ವೇದಿ ಕಿಡಿಕಾರಿದ್ದಾರೆ.

ಮುಂಬೈ: ಭಾರತದ ಆಂತರಿಕ ಸಮಸ್ಯೆಗಳನ್ನು ಬಳಸಿಕೊಂಡು ರಾಜಕೀಯ ಮಾಡಬೇಡಿ ಎಂದು ಕೆಡನಾ ಪ್ರಧಾನಿ ಜಸ್ಟಿನ್ ಟ್ರುಡೊಗೆ ಶಿವಸೇನೆ ಸಂಸದೆ ಪ್ರಿಯಾಂಕಾ ಚತುರ್ವೇದಿ ಕಿಡಿಕಾರಿದ್ದಾರೆ. 

ಕೇಂದ್ರ ಸರ್ಕಾರದ ನೂತನ ಕೃಷಿ ಕಾಯಿದೆಗಳನ್ನು ವಿರೋಧಿಸಿ ಕಳೆದ ಆರು ದಿನಗಳಿಂದ ಬೃಹತ್ ಪ್ರತಿಭಟನೆ ನಡೆಸುತ್ತಿರುವ ರೈತರ ಬಗ್ಗೆ ಕಳವಳ ವ್ಯಕ್ತಪಡಿಸಿದ್ದ ಕೆನಡಾ ಪ್ರಧಾನಿ ಜಸ್ಟೀನ್ ಟ್ರಡೋ ಅವರಿಗೆ ಪ್ರಿಯಾಂಕಾ ಚತುರ್ವೇದಿ ಆತ್ಮೀಯ ಜಸ್ಟಿನ್ ಟ್ರುಡೊ, ನಿಮ್ಮ ಕಾಳಜಿಯು ನಮಗೆ ತಿಳಿದಿದೆ. ಆದರೆ ಭಾರತ ಆಂತರಿಕ ವಿಷಯವು ಬೇರೆ ರಾಷ್ಟ್ರಗಳ ರಾಜಕೀಯಕ್ಕೆ ಮೇವು ಅಲ್ಲ. ನಾವು ನಿಮ್ಮನ್ನು ಗೌರವಿಸುವ ಹಾಗೆ ನಮ್ಮನ್ನು ಗೌರವಿಸಿ ಎಂದು ಟ್ವೀಟಿಸಿದ್ದಾರೆ. 

ಇದೇ ವೇಳೆ, ಇತರ ದೇಶಗಳು ಅಭಿಪ್ರಾಯ ವ್ಯಕ್ತಪಡಿಸುವುದು ಸರಿಯೆಂದು ಕಂಡುಕೊಳ್ಳುವ ಮೊದಲು ಈ ಬಿಕ್ಕಟ್ಟನ್ನು ಪರಿಹರಿಸಲು ಪ್ರಧಾನಿ ನರೇಂದ್ರ ಮೋದಿ ಜೀ ಅವರನ್ನು ವಿನಂತಿಸುತ್ತೇನೆ ಎಂದು ರಾಜ್ಯಸಭೆ ಸದಸ್ಯೆ ಪ್ರಿಯಾಂಕಾ ಚತುರ್ವೇದಿ ತಿಳಿಸಿದ್ದಾರೆ. 

ಗುರು ನಾನಕ್ ಜಯಂತಿಯ ಆಚರಣೆಯ ಭಾಗವಾಗಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಫೇಸ್ ಬುಕ್ ವಿಡಿಯೋ ಮೂಲಕ ಮಾತನಾಡಿದ್ದ ಟ್ರುಡೊ, ಭಾರತದಲ್ಲಿ ರೈತರು ಹೊಸ ಕೃಷಿ ಮಸೂದೆಯನ್ನು ವಿರೋಧಿಸಿ ನಡೆಸುತ್ತಿರುವ ಪ್ರತಿಭಟನೆಯನ್ನು ಗುರುತಿಸದೇ ಮಾತನಾಡಿದಲ್ಲಿ ನಾನು ಅಜಾಗರೂಕನಾಗುತ್ತೇನೆ, ಪರಿಸ್ಥಿತಿ ಆತಂಕಕಾರಿಯಾಗಿದ್ದು, ನಾವು ಸ್ನೇಹಿತರು ಹಾಗೂ ಸಂಬಧಿಕರ ಬಗ್ಗೆ ಚಿಂತಿತರಾಗಿದ್ದೇವೆ ಎಂದು ಹೇಳಿದ್ದಾರೆ.

ಕೆನಡಾ ಶಾಂತಿಯುತ ಪ್ರತಿಭಟನೆಗಳನ್ನು ಎಂದಿಗೂ ಬೆಂಬಲಿಸಲಿದೆ. ಮಾತುಕತೆಯಲ್ಲಿನ ಮಹತ್ವವನ್ನು ನಾವೂ ನಂಬುತ್ತೇವೆ. ನಾವು ನಮ್ಮ ಆತಂಕಗಳನ್ನು ನೇರವಾಗಿ ಹಲವು ವಿಧಾನಗಳ ಮೂಲಕ ಭಾರತೀಯ ಅಧಿಕಾರಿಗಳೊಂದಿಗೆ ಮಾತನಾಡಿದ್ದೇವೆ ಎಂದೂ ಕೆನಡಾ ಪ್ರಧಾನಿ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ