ಪ್ರಿಯಾಂಕಾ ಚತುರ್ವೇದಿ 
ದೇಶ

ರೈತರ ಪ್ರತಿಭಟನೆ: ನಮ್ಮ ಆಂತರಿಕ ವಿಚಾರ ರಾಜಕೀಯ ವಸ್ತುವಲ್ಲ; ಕೆನಡಾ ಪ್ರಧಾನಿ ವಿರುದ್ಧ ಶಿವಸೇನೆ ಸಂಸದೆ ಕಿಡಿ!

ಭಾರತದ ಆಂತರಿಕ ಸಮಸ್ಯೆಗಳನ್ನು ಬಳಸಿಕೊಂಡು ರಾಜಕೀಯ ಮಾಡಬೇಡಿ ಎಂದು ಕೆಡನಾ ಪ್ರಧಾನಿ ಜಸ್ಟಿನ್ ಟ್ರುಡೊಗೆ ಶಿವಸೇನೆ ಸಂಸದೆ ಪ್ರಿಯಾಂಕಾ ಚತುರ್ವೇದಿ ಕಿಡಿಕಾರಿದ್ದಾರೆ.

ಮುಂಬೈ: ಭಾರತದ ಆಂತರಿಕ ಸಮಸ್ಯೆಗಳನ್ನು ಬಳಸಿಕೊಂಡು ರಾಜಕೀಯ ಮಾಡಬೇಡಿ ಎಂದು ಕೆಡನಾ ಪ್ರಧಾನಿ ಜಸ್ಟಿನ್ ಟ್ರುಡೊಗೆ ಶಿವಸೇನೆ ಸಂಸದೆ ಪ್ರಿಯಾಂಕಾ ಚತುರ್ವೇದಿ ಕಿಡಿಕಾರಿದ್ದಾರೆ. 

ಕೇಂದ್ರ ಸರ್ಕಾರದ ನೂತನ ಕೃಷಿ ಕಾಯಿದೆಗಳನ್ನು ವಿರೋಧಿಸಿ ಕಳೆದ ಆರು ದಿನಗಳಿಂದ ಬೃಹತ್ ಪ್ರತಿಭಟನೆ ನಡೆಸುತ್ತಿರುವ ರೈತರ ಬಗ್ಗೆ ಕಳವಳ ವ್ಯಕ್ತಪಡಿಸಿದ್ದ ಕೆನಡಾ ಪ್ರಧಾನಿ ಜಸ್ಟೀನ್ ಟ್ರಡೋ ಅವರಿಗೆ ಪ್ರಿಯಾಂಕಾ ಚತುರ್ವೇದಿ ಆತ್ಮೀಯ ಜಸ್ಟಿನ್ ಟ್ರುಡೊ, ನಿಮ್ಮ ಕಾಳಜಿಯು ನಮಗೆ ತಿಳಿದಿದೆ. ಆದರೆ ಭಾರತ ಆಂತರಿಕ ವಿಷಯವು ಬೇರೆ ರಾಷ್ಟ್ರಗಳ ರಾಜಕೀಯಕ್ಕೆ ಮೇವು ಅಲ್ಲ. ನಾವು ನಿಮ್ಮನ್ನು ಗೌರವಿಸುವ ಹಾಗೆ ನಮ್ಮನ್ನು ಗೌರವಿಸಿ ಎಂದು ಟ್ವೀಟಿಸಿದ್ದಾರೆ. 

ಇದೇ ವೇಳೆ, ಇತರ ದೇಶಗಳು ಅಭಿಪ್ರಾಯ ವ್ಯಕ್ತಪಡಿಸುವುದು ಸರಿಯೆಂದು ಕಂಡುಕೊಳ್ಳುವ ಮೊದಲು ಈ ಬಿಕ್ಕಟ್ಟನ್ನು ಪರಿಹರಿಸಲು ಪ್ರಧಾನಿ ನರೇಂದ್ರ ಮೋದಿ ಜೀ ಅವರನ್ನು ವಿನಂತಿಸುತ್ತೇನೆ ಎಂದು ರಾಜ್ಯಸಭೆ ಸದಸ್ಯೆ ಪ್ರಿಯಾಂಕಾ ಚತುರ್ವೇದಿ ತಿಳಿಸಿದ್ದಾರೆ. 

ಗುರು ನಾನಕ್ ಜಯಂತಿಯ ಆಚರಣೆಯ ಭಾಗವಾಗಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಫೇಸ್ ಬುಕ್ ವಿಡಿಯೋ ಮೂಲಕ ಮಾತನಾಡಿದ್ದ ಟ್ರುಡೊ, ಭಾರತದಲ್ಲಿ ರೈತರು ಹೊಸ ಕೃಷಿ ಮಸೂದೆಯನ್ನು ವಿರೋಧಿಸಿ ನಡೆಸುತ್ತಿರುವ ಪ್ರತಿಭಟನೆಯನ್ನು ಗುರುತಿಸದೇ ಮಾತನಾಡಿದಲ್ಲಿ ನಾನು ಅಜಾಗರೂಕನಾಗುತ್ತೇನೆ, ಪರಿಸ್ಥಿತಿ ಆತಂಕಕಾರಿಯಾಗಿದ್ದು, ನಾವು ಸ್ನೇಹಿತರು ಹಾಗೂ ಸಂಬಧಿಕರ ಬಗ್ಗೆ ಚಿಂತಿತರಾಗಿದ್ದೇವೆ ಎಂದು ಹೇಳಿದ್ದಾರೆ.

ಕೆನಡಾ ಶಾಂತಿಯುತ ಪ್ರತಿಭಟನೆಗಳನ್ನು ಎಂದಿಗೂ ಬೆಂಬಲಿಸಲಿದೆ. ಮಾತುಕತೆಯಲ್ಲಿನ ಮಹತ್ವವನ್ನು ನಾವೂ ನಂಬುತ್ತೇವೆ. ನಾವು ನಮ್ಮ ಆತಂಕಗಳನ್ನು ನೇರವಾಗಿ ಹಲವು ವಿಧಾನಗಳ ಮೂಲಕ ಭಾರತೀಯ ಅಧಿಕಾರಿಗಳೊಂದಿಗೆ ಮಾತನಾಡಿದ್ದೇವೆ ಎಂದೂ ಕೆನಡಾ ಪ್ರಧಾನಿ ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಬೆಂಗಳೂರು: ಮಾಜಿ ಪ್ರೇಯಸಿ ಕರೆದಳೆಂದು ಮನೆಗೆ ಹೋದ ಪ್ರಿಯಕರ ದುರಂತ ಸಾವು: ಅಷ್ಟಕ್ಕೂ ಆಗಿದ್ದೇನು?

ತಮಿಳುನಾಡು ಸಿಎಂ ವಿಜಯ್-ಪ್ರಧಾನಿ ಮೋದಿ ಭೇಟಿ: ಎರಡು ದೊಡ್ಡ ಬೇಡಿಕೆ; ಇಲ್ಲಿದೆ ವಿವರ..

'ಬಹುಶಃ ರಾಹುಲ್ ಗಾಂಧಿಗೆ ಈಗ ತೃಪ್ತಿಯಾಗಿರಬಹುದು': ED ದಾಳಿ ಕುರಿತು ಮಾಜಿ ಸಿಎಂ ಪಿಣರಾಯಿ ವಿಜಯನ್ ಕಿಡಿ

ರಾಜೀನಾಮೆ ಬಗ್ಗೆ ಖುದ್ದು ಸುಳಿವು ನೀಡಿದ CM ಸಿದ್ದರಾಮಯ್ಯ; ಸಾಮಾಜಿಕ ಮಾಧ್ಯಮದಲ್ಲಿ ಮಹತ್ವದ ಪೋಸ್ಟ್​!

SCROLL FOR NEXT