ಸಾಂದರ್ಭಿಕ ಚಿತ್ರ 
ದೇಶ

ರಾಜಕೋಟ್ ಕೋವಿಡ್-19 ಆಸ್ಪತ್ರೆಯಲ್ಲಿ ಬೆಂಕಿ ಅವಘಡ: ಮೂವರು ಹಿರಿಯ ಅಧಿಕಾರಿಗಳ ಬಂಧನ

ಗುಜರಾತ್ ನ ರಾಜಕೋಟ್ ಜಿಲ್ಲೆಯ ಕೋವಿಡ್-19 ಆಸ್ಪತ್ರೆಯಲ್ಲಿ ಬೆಂಕಿ ಅವಘಡವಾಗಿ 5 ಮಂದಿ ರೋಗಿಗಳು ಮೃತಪಟ್ಟ ಘಟನೆಗೆ ಸಂಬಂಧಪಟ್ಟಂತೆ ಪೊಲೀಸರು ಕಂಪೆನಿಯ ಮೂವರು ಹಿರಿಯ ಅಧಿಕಾರಿಗಳನ್ನು ಬಂಧಿಸಿದ್ದಾರೆ.

ಅಹ್ಮದಾಬಾದ್: ಗುಜರಾತ್ ನ ರಾಜಕೋಟ್ ಜಿಲ್ಲೆಯ ಕೋವಿಡ್-19 ಆಸ್ಪತ್ರೆಯಲ್ಲಿ ಬೆಂಕಿ ಅವಘಡವಾಗಿ 5 ಮಂದಿ ರೋಗಿಗಳು ಮೃತಪಟ್ಟ ಘಟನೆಗೆ ಸಂಬಂಧಪಟ್ಟಂತೆ ಪೊಲೀಸರು ಕಂಪೆನಿಯ ಮೂವರು ಹಿರಿಯ ಅಧಿಕಾರಿಗಳನ್ನು ಬಂಧಿಸಿದ್ದಾರೆ.

ಕಳೆದ ಶುಕ್ರವಾರ ಮಧ್ಯರಾತ್ರಿ 12.30ರ ಸುಮಾರಿಗೆ ಈ ದುರ್ಘಟನೆ ಸಂಭವಿಸಿದ್ದು, ರಾಜಕೋಟ್ ನ ಉದಯ್ ಶಿವಾನಂದ್ ಆಸ್ಪತ್ರೆಯಲ್ಲಿ ಕೋವಿಡ್-19 ರೋಗಿಗಳು ಚಿಕಿತ್ಸೆ ಪಡೆಯುತ್ತಿರುವ ಐಸಿಯುನಲ್ಲಿ ಬೆಂಕಿ ಅವಘಡವುಂಟಾಗಿ ಐವರು ರೋಗಿಗಳು ಮೃತಪಟ್ಟಿದ್ದರು. ನಂತರ ಅಗ್ನಿಶಾಮಕ ಸಿಬ್ಬಂದಿ ಬಂದು 28 ರೋಗಿಗಳನ್ನು ಕಾಪಾಡಿದ್ದರು.

ಕಳೆದ ಭಾನುವಾರ ಪೊಲೀಸರು ಗೋಕುಲ್ ಹೆಲ್ತ್ ಕೇರ್ ಪ್ರೈವೆಟ್ ಲಿಮಿಟೆಡ್ ನ ಐವರು ಅಧಿಕಾರಿಗಳ ವಿರುದ್ಧ ಎಫ್ಐಆರ್ ದಾಖಲಿಸಿದ್ದರು. ಈ ಖಾಸಗಿ ಕಂಪೆನಿ ಆಸ್ಪತ್ರೆಯನ್ನು ನಿರ್ವಹಿಸುತ್ತಿದ್ದು ನಿರ್ಲಕ್ಷ್ಯತನ ಮತ್ತು ಬೇಜವಾಬ್ದಾರಿ ಆರೋಪದಡಿ ಭಾರತೀಯ ದಂಡ ಸಂಹಿತೆ ಸೆಕ್ಷನ್ 304-ಎ ಅಡಿ ಕೇಸು ದಾಖಲಿಸಿದ್ದಾರೆ.

ಈ ಬೆಳವಣಿಗೆ ನಂತರ ಪೊಲೀಸರು ಕಂಪೆನಿಯ ಅಧ್ಯಕ್ಷ ಡಾ ಪ್ರಕಾಶ್ ಮೊದ, ಅವರ ಪುತ್ರ ಮತ್ತು ಕಾರ್ಯಕಾರಿ ನಿರ್ದೇಶಕ ಡಾ ವಿಶಾಲ್ ಮೊದ, ನಿರ್ದೇಶಕ ಡಾ ತೇಜಸ್ ಕರಮ್ತ ಅವರನ್ನು ಕಳೆದ ರಾತ್ರಿ ಕೋವಿಡ್ ಪರೀಕ್ಷೆ ಮಾಡಿಸಿಕೊಂಡು ಬಂಧಿಸಲಾಗಿದೆ ಎಂದು ರಾಜಕೋಟ್ ಮಾಲ್ವಿಯ ನಗರ ಪೊಲೀಸರು ತಿಳಿಸಿದ್ದಾರೆ.

ಈ ಮೂವರು ಹಾಗೂ ಮತ್ತಿಬ್ಬರು ಸೇರಿದಂತೆ 5 ಮಂದಿ ವಿರುದ್ಧ ಭಾರತೀಯ ದಂಡ ಸಂಹಿತೆ ಅಡಿಯಲ್ಲಿ ಕೇಸು ದಾಖಲಿಸಲಾಗಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ವಿಶ್ವಕಪ್ ವಿಜೇತ ಕರ್ನಾಟಕದ ಅಂಧ ಕ್ರಿಕೆಟ್ ಆಟಗಾರ್ತಿಯರಿಗೆ ತಲಾ 10 ಲಕ್ಷ ರೂ ನಗದು, ಸರ್ಕಾರಿ ಉದ್ಯೋಗ: ಸಿಎಂ ಸಿದ್ದರಾಮಯ್ಯ ಘೋಷಣೆ

ನಾಯಕತ್ವ ಬದಲಾವಣೆ ಬಗ್ಗೆ ಸಾರ್ವಜನಿಕವಾಗಿ ಚರ್ಚಿಸಲು ಸಾಧ್ಯವಿಲ್ಲ: ಮಲ್ಲಿಕಾರ್ಜುನ ಖರ್ಗೆ

ಸ್ಮೃತಿ ಮಂಧಾನ ಮದುವೆ ಮುಂದೂಡಿಕೆಗೆ ಅಸಲಿ ಕಾರಣ? ಮತ್ತೊಂದು ಹೆಣ್ಣಿನೊಂದಿಗೆ ಮೋಹ, ನಂಬಿಕೆ ದ್ರೋಹ; ಬಯಲಾಯ್ತು ಪಲಾಶ್'ನ ಅಸಲಿ ರಂಗಿನಾಟ!

ಅಯೋಧ್ಯ ಧ್ವಜಾರೋಹಣ ನೆರವೇರಿಸಿದ್ದು ಹೇಗೆ?: ಸ್ವಿಚ್ ಅಥವಾ ಹಗ್ಗ ಬಳಸದ ಪ್ರಧಾನಿ; ಈ ಅದ್ಭುತ Video ನೋಡಿ..

SCROLL FOR NEXT