ಪಂಜಾಬ್ ಮುಖ್ಯಮಂತ್ರಿ ಅಮರೀಂದರ್ 
ದೇಶ

ಇಂದು ರೈತರ ಜತೆ ಕೇಂದ್ರದ ಮಹತ್ವದ ಮಾತುಕತೆ ಹಿನ್ನೆಲೆ, ಶಾ ಭೇಟಿಯಾಗಲಿರುವ ಅಮರೀಂದರ್ ಸಿಂಗ್

ನೂತನ ಕೃಷಿ ಕಾನೂನುಗಳನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿರುವ ರೈತ ಮುಖಂಡರು ಹಾಗೂ ಕೇಂದ್ರ ಸರ್ಕಾರದ ನಡುವಣ ಮಾತುಕತೆಯ ಹಿನ್ನೆಲೆಯಲ್ಲಿ ಪಂಜಾಬ್ ಮುಖ್ಯಮಂತ್ರಿ ಅಮರೀಂದರ್ ಸಿಂಗ್ ಇಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಲಿದ್ದಾರೆ. 

ನವದೆಹಲಿ: ನೂತನ ಕೃಷಿ ಕಾನೂನುಗಳನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿರುವ ರೈತ ಮುಖಂಡರು ಹಾಗೂ ಕೇಂದ್ರ ಸರ್ಕಾರದ ನಡುವಣ ಮಾತುಕತೆಯ ಹಿನ್ನೆಲೆಯಲ್ಲಿ ಪಂಜಾಬ್ ಮುಖ್ಯಮಂತ್ರಿ ಅಮರೀಂದರ್ ಸಿಂಗ್ ಇಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಲಿದ್ದಾರೆ.

ಇಂದು ಬೆಳಗ್ಗೆ ಶಾ ಅವರ ನಿವಾಸದಲ್ಲಿ ಮಾತುಕತೆ ನಡೆಸಲಿರುವ ಅಮರೀಂದರ್ ಸಿಂಗ್, ಸೌಹಾರ್ದಯುತವಾಗಿ ಸಮಸ್ಯೆ ಪರಿಹರಿಸುವ ಪ್ರಯತ್ನ ನಡೆಸಲಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ.

ಪಂಜಾಬ್ ಮುಖ್ಯಮಂತ್ರಿ ರೈತರ ಪ್ರತಿಭಟನೆಗೆ ಬೆಂಬಲ ವ್ಯಕ್ತಪಡಿಸಿದ್ದಾರೆ. ಅಲ್ಲದೇ, ಕೇಂದ್ರದ ಕೃಷಿ ಶಾಸನಗಳನ್ನು ತಿರಸ್ಕರಿಸುವ ನಿರ್ಣಯವನ್ನು ವಿಧಾನಸಭೆಯಲ್ಲಿ ಅಂಗೀಕರಿಸಲಾಗಿದೆ.

ಎಲ್ಲರ ಸಾಮೂಹಿಕ ಹಿತಾಸಕ್ತಿಯಿಂದ ಕೇಂದ್ರ ಸರ್ಕಾರ ಮತ್ತು ರೈತರ ನಡುವಣ ಮಧ್ಯಸ್ಥಿಕೆಗೆ ತಾವು ಹಾಗೂ ಅವರ ಸರ್ಕಾರ ಬದ್ಧವಾಗಿರುವುದಾಗಿ ಸಿಂಗ್ ಹೇಳಿದ್ದಾರೆ.  ಪ್ರತಿಭಟನೆ ನಡೆಸುತ್ತಿರುವ ರೈತರಲ್ಲಿ ಹೆಚ್ಚಿನವರು ಪಂಜಾಬ್ ರಾಜ್ಯದವರಾಗಿದ್ದಾರೆ.  ರಾಷ್ಟ್ರ ರಾಜಧಾನಿಯ ಗಡಿಯಲ್ಲಿ ಏಳುದಿನಗಳಿಂದ ಅವರು ಪ್ರತಿಭಟನೆಗೆ ಕುಳಿತಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಸಂಘರ್ಷಕ್ಕೆ ಮಾನವೀಯತೆ ಬಲಿಯಾಗಬಾರದು': ಗಾಜಾ ಶಾಂತಿ ಯೋಜನೆಗೆ ಪ್ರಧಾನಿ ಮೋದಿ ಬೆಂಬಲ

AI, ಕೃಷಿ, ಸೈಬರ್ ಭದ್ರತೆ, UPI ಸೇರಿದಂತೆ ಸರಣಿ ಒಪ್ಪಂದಗಳಿಗೆ ಭಾರತ ಮತ್ತು ಇಸ್ರೇಲ್ ಸಹಿ

ಹೆಲಿಪ್ಯಾಡ್, ಸ್ವಿಮ್ಮಿಂಗ್ ಪೂಲ್, ಜಿಮ್: ಅನಿಲ್ ಅಂಬಾನಿಯ 3,716 ಕೋಟಿ ರೂ. ಬೆಲೆಬಾಳುವ 17 ಅಂತಸ್ತಿನ ಕಟ್ಟಡ 'Abode ಇಡಿ ವಶಕ್ಕೆ!

T20 World Cup 2026: ವೆಸ್ಟ್ ಇಂಡೀಸ್ ವಿರುದ್ಧ ದಕ್ಷಿಣ ಆಫ್ರಿಕಾಕ್ಕೆ ಭರ್ಜರಿ ಜಯ; ಈ ಗೆಲುವಿಗಾಗಿ ಪರಿತಪಿಸುತ್ತಿತ್ತು ಭಾರತ!

ಕನ್ನಡ ಸಿನಿಮಾ ನಿರ್ದೇಶಕನ ಅಪಹರಿಸಿ, ಹಲ್ಲೆ: ನಟಿ ಸೇರಿದಂತೆ 11 ಜನರ ಬಂಧನ

SCROLL FOR NEXT