ಪಂಜಾಬ್ ಮುಖ್ಯಮಂತ್ರಿ ಅಮರೀಂದರ್ 
ದೇಶ

ಇಂದು ರೈತರ ಜತೆ ಕೇಂದ್ರದ ಮಹತ್ವದ ಮಾತುಕತೆ ಹಿನ್ನೆಲೆ, ಶಾ ಭೇಟಿಯಾಗಲಿರುವ ಅಮರೀಂದರ್ ಸಿಂಗ್

ನೂತನ ಕೃಷಿ ಕಾನೂನುಗಳನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿರುವ ರೈತ ಮುಖಂಡರು ಹಾಗೂ ಕೇಂದ್ರ ಸರ್ಕಾರದ ನಡುವಣ ಮಾತುಕತೆಯ ಹಿನ್ನೆಲೆಯಲ್ಲಿ ಪಂಜಾಬ್ ಮುಖ್ಯಮಂತ್ರಿ ಅಮರೀಂದರ್ ಸಿಂಗ್ ಇಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಲಿದ್ದಾರೆ. 

ನವದೆಹಲಿ: ನೂತನ ಕೃಷಿ ಕಾನೂನುಗಳನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿರುವ ರೈತ ಮುಖಂಡರು ಹಾಗೂ ಕೇಂದ್ರ ಸರ್ಕಾರದ ನಡುವಣ ಮಾತುಕತೆಯ ಹಿನ್ನೆಲೆಯಲ್ಲಿ ಪಂಜಾಬ್ ಮುಖ್ಯಮಂತ್ರಿ ಅಮರೀಂದರ್ ಸಿಂಗ್ ಇಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಲಿದ್ದಾರೆ.

ಇಂದು ಬೆಳಗ್ಗೆ ಶಾ ಅವರ ನಿವಾಸದಲ್ಲಿ ಮಾತುಕತೆ ನಡೆಸಲಿರುವ ಅಮರೀಂದರ್ ಸಿಂಗ್, ಸೌಹಾರ್ದಯುತವಾಗಿ ಸಮಸ್ಯೆ ಪರಿಹರಿಸುವ ಪ್ರಯತ್ನ ನಡೆಸಲಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ.

ಪಂಜಾಬ್ ಮುಖ್ಯಮಂತ್ರಿ ರೈತರ ಪ್ರತಿಭಟನೆಗೆ ಬೆಂಬಲ ವ್ಯಕ್ತಪಡಿಸಿದ್ದಾರೆ. ಅಲ್ಲದೇ, ಕೇಂದ್ರದ ಕೃಷಿ ಶಾಸನಗಳನ್ನು ತಿರಸ್ಕರಿಸುವ ನಿರ್ಣಯವನ್ನು ವಿಧಾನಸಭೆಯಲ್ಲಿ ಅಂಗೀಕರಿಸಲಾಗಿದೆ.

ಎಲ್ಲರ ಸಾಮೂಹಿಕ ಹಿತಾಸಕ್ತಿಯಿಂದ ಕೇಂದ್ರ ಸರ್ಕಾರ ಮತ್ತು ರೈತರ ನಡುವಣ ಮಧ್ಯಸ್ಥಿಕೆಗೆ ತಾವು ಹಾಗೂ ಅವರ ಸರ್ಕಾರ ಬದ್ಧವಾಗಿರುವುದಾಗಿ ಸಿಂಗ್ ಹೇಳಿದ್ದಾರೆ.  ಪ್ರತಿಭಟನೆ ನಡೆಸುತ್ತಿರುವ ರೈತರಲ್ಲಿ ಹೆಚ್ಚಿನವರು ಪಂಜಾಬ್ ರಾಜ್ಯದವರಾಗಿದ್ದಾರೆ.  ರಾಷ್ಟ್ರ ರಾಜಧಾನಿಯ ಗಡಿಯಲ್ಲಿ ಏಳುದಿನಗಳಿಂದ ಅವರು ಪ್ರತಿಭಟನೆಗೆ ಕುಳಿತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ