ಉಮರ್ ಖಾಲಿದ್ 
ದೇಶ

ಉಮರ್ ಖಾಲಿದ್ ನ್ಯಾಯಾಂಗ ಬಂಧನ ಅವಧಿ ಡಿಸೆಂಬರ್ 16ರ ವರೆಗೆ ವಿಸ್ತರಣೆ

ಈಶಾನ್ಯ ದೆಹಲಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ಜವಾಹರ್‌ಲಾಲ್‌ ನೆಹರೂ ವಿಶ್ವವಿದ್ಯಾಲಯ(ಜೆಎನ್‌ಯು)ದ ಮಾಜಿ ವಿದ್ಯಾರ್ಥಿ ಮುಖಂಡ ಉಮರ್ ಖಾಲಿದ್ ಅವರ ನ್ಯಾಯಾಂಗ ಬಂಧನ ಅವಧಿಯನ್ನು ಡಿಸೆಂಬರ್ 16 ವರೆಗೆ ವಿಸ್ತರಿಸಲಾಗಿದೆ.

ನವದೆಹಲಿ: ಈಶಾನ್ಯ ದೆಹಲಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ಜವಾಹರ್‌ಲಾಲ್‌ ನೆಹರೂ ವಿಶ್ವವಿದ್ಯಾಲಯ(ಜೆಎನ್‌ಯು)ದ ಮಾಜಿ ವಿದ್ಯಾರ್ಥಿ ಮುಖಂಡ ಉಮರ್ ಖಾಲಿದ್ ಅವರ ನ್ಯಾಯಾಂಗ ಬಂಧನ ಅವಧಿಯನ್ನು ಡಿಸೆಂಬರ್ 16 ವರೆಗೆ ವಿಸ್ತರಿಸಲಾಗಿದೆ.

ಆರೋಪಿಯ ನ್ಯಾಯಾಂಗ ಬಂಧನ ಅವಧಿ ಇಂದಿಗೆ ಅಂತ್ಯಗೊಂಡ ಹಿನ್ನೆಲೆಯಲ್ಲಿ ವಿಡಿಯೋ ಕಾನ್ಫೆರೆನ್ಸ್ ಮೂಲಕ ವಿಚಾರಣೆಗೆ ಹಾಜರುಪಡಿಸಲಾಯಿತು. ಆರೋಪಿಗಳ ವಿಚಾರಣೆ ನಡೆಸಿದ ಚೀಫ್ ಮೆಟ್ರೋಪೊಲಿಟನ್ ಮ್ಯಾಜಿಸ್ಟ್ರೇಟ್ ದಿನೇಶ್ ಕುಮಾರ್ ಅವರು, ನ್ಯಾಯಾಂಗ ಬಂಧನ ಅವಧಿಯನ್ನು ಮತ್ತೆ 14 ದಿನ ವಿಸ್ತರಿಸಿದ್ದಾರೆ.

ಆರೋಪಿಗೆ ಹೆಚ್ಚಿನ ಕಸ್ಟಡಿಯ ಅಗತ್ಯವಿಲ್ಲ. ಹೀಗಾಗಿ ಆರೋಪಿಯ ವಕೀಲರು ಜಾಮೀನು  ಕೋರಿ ಅರ್ಜಿ ಸಲ್ಲಿಸಬಹುದು. ನಂತರ ಆರೋಪಿಗಳ ವಿಚಾರಣೆ ನಡೆಸಲಾಗುವುದು ಎಂದು ಕೋರ್ಟ್ ಹೇಳಿದೆ.

ಈ ವರ್ಷದ ಫೆಬ್ರವರಿಯಲ್ಲಿ ಭುಗಿಲೆದ್ದ ಈಶಾನ್ಯ ದೆಹಲಿ ಗಲಭೆಗೆ ಸಂಬಂಧಿಸಿದಂತೆ, ದೆಹಲಿ ಪೊಲೀಸರು ಕಾನೂನುಬಾಹಿರ ಚಟುವಟಿಕೆಗಳು(ತಡೆಗಟ್ಟುವಿಕೆ) ಕಾಯ್ದೆಯಡಿ ಉಮರ್ ಖಾಲಿದ್ ಅವರನ್ನು ಬಂಧಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

ಬಾನು ಮುಷ್ತಾಕ್‌ ದಸರಾ ಉದ್ಘಾಟನೆಗೆ ಆಕ್ಷೇಪ; ಮುಸ್ಲಿಂ ದ್ವೇಷ ಮನಸ್ಥಿತಿಯನ್ನು ಬದಿಗಿಟ್ಟು, ಸಂವಿಧಾನದ ಆಶಯ ಅರ್ಥ ಮಾಡಿಕೊಳ್ಳಿ: ಸಚಿವ ಹೆಚ್.ಸಿ.ಮಹದೇವಪ್ಪ

ಚಾಮುಂಡೇಶ್ವರಿ ದೇವಿ ಬಗ್ಗೆ ಗೌರವವಿದ್ದು, ಧಾರ್ಮಿಕ ಭಾವನೆಗಳ ಗೌರವಿಸುತ್ತೇನೆ; ಬಾನು ಮುಷ್ತಾಕ್

JC ರಸ್ತೆಯಲ್ಲಿ White-topping ಕಾಮಗಾರಿ: ಆ.30ರವರೆಗೆ ಭಾರಿ ಗಾತ್ರದ ವಾಹನಗಳ ಸಂಚಾರಕ್ಕೆ ನಿರ್ಬಂಧ

SCROLL FOR NEXT