ರಾಹುಲ್ ಗಾಂಧಿ 
ದೇಶ

'ಸೂಟು-ಬೂಟು ಸರ್ಕಾರದ ಆಳ್ವಿಕೆಯಲ್ಲಿ ರೈತರ ಆದಾಯ ಅರ್ಧದಷ್ಟಾಗಿದೆ, ಸರ್ಕಾರದ ಸ್ನೇಹಿತರ ವರಮಾನ ದುಪ್ಪಟ್ಟಾಗಿದೆ'

ಕೇಂದ್ರ ಸರ್ಕಾರದ ವಿರುದ್ಧ ಹರಿಹಾಯ್ದಿರುವ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ, ಸೂಟು ಬೂಟು ಸರ್ಕಾರದ ಅಡಿಯಲ್ಲಿ ರೈತರ ಅದಾಯ ಅರ್ಧದಷ್ಟು ಇಳಿಕೆಯಾಗಿದೆ, ಆದರೆ ಸರ್ಕಾರದ ಸ್ನೇಹಿತರ ಆದಾಯ ಮಾತ್ರ ಹೆಚ್ಚುತ್ತಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.

ನವದೆಹಲಿ: ಕೇಂದ್ರ ಸರ್ಕಾರದ ವಿರುದ್ಧ ಹರಿಹಾಯ್ದಿರುವ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ, ಸೂಟು ಬೂಟು ಸರ್ಕಾರದ ಅಡಿಯಲ್ಲಿ ರೈತರ ಅದಾಯ ಅರ್ಧದಷ್ಟು ಇಳಿಕೆಯಾಗಿದೆ, ಆದರೆ ಸರ್ಕಾರದ ಸ್ನೇಹಿತರ ಆದಾಯ ಮಾತ್ರ ಹೆಚ್ಚುತ್ತಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಕೇಂದ್ರದ ಹೊಸ ಕೃಷಿ ಸುಧಾರಣಾ ಕಾನೂನುಗಳ ವಿರುದ್ಧ ಪಂಜಾಬ್ ಮತ್ತು ಹರಿಯಾಣದ ರೈತರು ರಾಷ್ಟ್ರ ರಾಜಧಾನಿಯ ಸಿಂಗು, ಟಿಕ್ರಿ ಮತ್ತು ಗಾಜಿಪುರ ಗಡಿಗಳಲ್ಲಿ ಪ್ರತಿಭಟನೆ ನಡೆಸುತ್ತಿರುವ ಸಮಯದಲ್ಲಿ ಈ ಹೇಳಿಕೆ ನೀಡಿದ್ದಾರೆ.

ರೈತರ ಆದಾಯ ದ್ವಿಗುಣಗೊಳ್ಳಲಿದೆ ಎಂದು ಅವರು ಹೇಳಿದ್ದರು, ಆದರೆ ಅವರ ಅಂದರೆ ಸರ್ಕಾರದ ಸ್ನೇಹಿತರ ಆದಾಯ ದ್ವಿಗುಣಗೊಳ್ಳುತ್ತಿದೆ, ರೈತರ ಆದಾಯ ಅರ್ಧಕ್ಕೆ ಇಳಿದಿದೆ ಎಂದು, ಸೂಟು-ಬೂಟು ಸರ್ಕಾರ ಲೂಟಿ ಮಾಡುತ್ತಿದೆ ಎಂದು ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ.

ರೈತರು ಎದುರಿಸುತ್ತಿರುವ ಸಮಸ್ಯೆಗಳನ್ನು ಪರಿಹರಿಸಲು ಮತ್ತು ಅವರ ಆದಾಯವನ್ನು ದ್ವಿಗುಣಗೊಳಿಸಲು ತಮ್ಮ ಸರ್ಕಾರ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿಯವರ ಭಾಷಣಕ್ಕೆ ಧ್ವನಿಮುದ್ರಣದ ಜೊತೆಗೆ,  ಪ್ರತಿಭಟನಾ ನಿರತ ರೈತರ ವಿರುದ್ಧ ದೌರ್ಜನ್ಯ ಮತ್ತು ಬಲಪ್ರಯೋಗ ನಡೆಸಿದ ವಿಡಿಯೋವನ್ನೂ ರಾಹುಲ್ ಗಾಂಧಿ ಶೇರ್ ಮಾಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT