ತೃಪ್ತಿ ದೇಸಾಯಿ 
ದೇಶ

ಪೂಜಾರಿಗಳಿಗಿಲ್ಲದ ಸುಸಂಸ್ಕೃತ ಉಡುಗೆ ಕೇವಲ ಭಕ್ತರಿಗೆ ಮಾತ್ರ ಏಕೆ? ತೃಪ್ತಿ ದೇಸಾಯಿ

ಸುಸಂಸ್ಕೃತ ರೀತಿಯಲ್ಲಿ ವಸ್ತ್ರ ಧರಿಸಿ ಬರಬೇಕೆಂದು ಶಿರಡಿ ಸಾಯಿಬಾಬಾ ದೇವಾಲಯ ಟ್ರಸ್ಟ್ ಬೋರ್ಡ್ ಹಾಕಿರುವ ಹಿನ್ನೆಲೆಯಲ್ಲಿ ಸಾಮಾಜಿಕ ಕಾರ್ಯಕರ್ತೆ ತೃಪ್ತಿ ದೇಸಾಯಿ ಆಕ್ರೋಶ ವ್ಯಕ್ತ ಪಡಿಸಿದ್ದಾರೆ.

ಪುಣೆ: ಸುಸಂಸ್ಕೃತ ರೀತಿಯಲ್ಲಿ ವಸ್ತ್ರ ಧರಿಸಿ ಬರಬೇಕೆಂದು ಶಿರಡಿ ಸಾಯಿಬಾಬಾ ದೇವಾಲಯ ಟ್ರಸ್ಟ್ ಬೋರ್ಡ್ ಹಾಕಿರುವ ಹಿನ್ನೆಲೆಯಲ್ಲಿ ಸಾಮಾಜಿಕ ಕಾರ್ಯಕರ್ತೆ ತೃಪ್ತಿ ದೇಸಾಯಿ ಆಕ್ರೋಶ ವ್ಯಕ್ತ ಪಡಿಸಿದ್ದಾರೆ.

ಶಿರಡಿ ದೇವಾಲಯ ಇಂತಹ ಬೋರ್ಡ್ ಗಳನ್ನು ಹಾಕುವ ಮೂಲಕ ಭಕ್ತರ ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಧಕ್ಕೆ ತಂದಿದೆ ಎಂದು  ತೃಪ್ತಿ ಅಸಮಾಧಾನ ಹೊರಹಾಕಿದ್ದಾರೆ, ಈ ಸಂಬಂಧ ವಿಡಿಯೋ ಸಂದೇಶ ರವಾನಿಸಿರುವ ಅವರು. ಶಿರಡಿ ದೇವಾಲಯದಲ್ಲಿ ಸುಸಂಸ್ಕೃತ ರೀತಿಯಲ್ಲಿ ಉಡುಗೆ ಧರಿಸಿ ಬರಬೇಕೆಂದು ಫಲಕಗಳನ್ನು ಹಾಕಲಾಗಿದೆ, ದೇವಾಲಯ ಟ್ರಸ್ಟ್ ಈ ಫಲಕಗಳನ್ನು ತೆಗೆಯದಿದ್ದರೇ ನಾವೇ ಶಿರಡಿಗೆ ಹೋಗಿ ಫಲಕಗಳನ್ನು ತೆಗೆದು ಹಾಕುವುದಾಗಿ ತಿಳಿಸಿದ್ದಾರೆ.

ದೇವಾಲಯಗಳ ಅರ್ಚಕರು ಮತ್ತು ಪೂಜಾರಿಗಳು ಅರ್ಧ ಬಟ್ಟೆ ಧರಿಸಿರುತ್ತಾರೆ, ಅವರಿಗಿಲ್ಲದ ವಸ್ತ್ರ ಸಂಹಿತೆ ಕೇವಲ ಭಕ್ತರಿಗೆ ಮಾತ್ರ ಏಕೆ ಎಂದು ಪ್ರಶ್ನಿಸಿದ್ದಾರೆ.ಇನ್ನೂ ಈ ಸಂಬಂಧ ಪ್ರತಿಕ್ರಿಯಿಸಿರುವ ಶಿರಡಿ ಸಾಯಿಬಾಬಾ ಸಂಸ್ಥಾನ ಟ್ರಸ್ಟ್ ನ ಸಿಇಓ, ಇದೊಂದು ಮನವಿ ಅಷ್ಟೇ, ದೇವಾಲಯಕ್ಕೆ ಬರುವವರಿಗೆ ಯಾವುದೇ ವಸ್ತ್ರ ಸಂಹಿತೆ ನಿಗದಿ ಪಡಿಸಿಲ್ಲ ಎಂದು ಸ್ಪಷ್ಟ ಪಡಿಸಿದ್ದಾರೆ.

ಭಾರತದ ಸಂವಿಧಾನ ಪ್ರತಿಯೊಬ್ಬ ನಾಗರಿಕನಿಗೂ ಅವನಿಗಿಷ್ಟವಾದ ವಸ್ತ್ರ ಧರಿಸುವ ಹಕ್ಕು ನೀಡಿದೆ ಎಂದು ತೃಪ್ತಿ ದೇಸಾಯಿ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ; ಡಿಕೆಶಿ ಸವಾಲು

ಮೈಸೂರು ಪೊಲೀಸರಿಗೆ CM ಪುತ್ರನ ಕಾಟ: ಯಾವುದೇ ವರ್ಗಾವಣೆಯಾಗಬೇಕಾದರೂ ಯತೀಂದ್ರಗೆ ಟ್ಯಾಕ್ಸ್ ಕಟ್ಟಬೇಕು; ಪ್ರತಾಪ್ ಸಿಂಹ

ಬಾಂಬೆ ಮಾದರಿಯಲ್ಲಿ ಕೊಳಗೇರಿ ಪುನಶ್ಚೇತನಕ್ಕೆ ಸಮಿತಿ ರಚನೆ: GBA ವ್ಯಾಪ್ತಿಗೆ ಆನೇಕಲ್ ಸೇರಿಸುವುದು ಕಷ್ಟ; ಡಿಕೆ ಶಿವಕುಮಾರ್

SCROLL FOR NEXT