ರೈತರ ಪ್ರತಿಭಟನೆ 
ದೇಶ

ದೆಹಲಿ: ರೈತರ ಪ್ರತಿಭಟನೆ ವೇಳೆ ಮತ್ತೋರ್ವ ರೈತನ ಸಾವು, ಹೃದಯಾಘಾತದಿಂದ 57 ವರ್ಷದ ಲಖ್ವೀರ್ ಸಿಂಗ್ ನಿಧನ

ಕೇಂದ್ರ ಸರ್ಕಾರದ ವಿವಾದಿತ ಕೃಷಿ ಮಸೂದೆಯನ್ನು ವಿರೋಧಿಸಿ ರಾಜಧಾನಿ ದೆಹಲಿಯಲ್ಲಿ ನಡೆಯುತ್ತಿರುವ ಪ್ರತಿಭಟನೆ 8ನೇ ದಿನಕ್ಕೆ ಕಾಲಿಟ್ಟಿರುವಂತೆಯೇ ರೈತರ ಸಾವಿನ ಸರಣಿ ಕೂಡ ಮುಂದುವರೆದಿದೆ.

ನವದೆಹಲಿ: ಕೇಂದ್ರ ಸರ್ಕಾರದ ವಿವಾದಿತ ಕೃಷಿ ಮಸೂದೆಯನ್ನು ವಿರೋಧಿಸಿ ರಾಜಧಾನಿ ದೆಹಲಿಯಲ್ಲಿ ನಡೆಯುತ್ತಿರುವ ಪ್ರತಿಭಟನೆ 8ನೇ ದಿನಕ್ಕೆ ಕಾಲಿಟ್ಟಿರುವಂತೆಯೇ ರೈತರ ಸಾವಿನ ಸರಣಿ ಕೂಡ ಮುಂದುವರೆದಿದೆ.

ನಿನ್ನೆಯಷ್ಟೇ ದೆಹಲಿಯಲ್ಲಿ ಪ್ರತಿಭಟನಾ ನಿರತ ರೈತರಿಬ್ಬರು ಸಾವನ್ನಪ್ಪಿದ್ದರು. ಪಂಜಾಬ್ ನ ಮಾನ್ಸಾದ ಬಚೋವಾನಾ ಗ್ರಾಮದ ಗುರ್ಜಂತ್ ಸಿಂಗ್ ದೆಹಲಿಯಲ್ಲಿ ಸಾವನ್ನಪ್ಪಿದ್ದರೆ, ಮೊಗಾ ಜಿಲ್ಲೆಯ ಭಿಂದರ್ ಖುರ್ದ್ ಗ್ರಾಮದ ಗುರ್ಬಚನ್ ಸಿಂಗ್ (80 ವರ್ಷ) ಬುಧವಾರ ಮೊಗಾದಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಹೃದಯಾಘಾತದಿಂದ ಮೃತಪಟ್ಟಿದ್ದರು. ಇದರ ಬೆನ್ನಲ್ಲೇ ಮತ್ತೋರ್ವ ರೈತ ಹೃದಯಾಘಾತದಿಂದ ಸಾವನಪ್ಪಿದ್ದಾರೆ.

ದೆಹಲಿಯ ಟಿಕ್ರಿ ಗಡಿಯಲ್ಲಿ ರೈತರು ಪ್ರತಿಭಟನೆ ನಡೆಸಿದ್ದು, ಈ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ರೈತ ಲಖ್ವೀರ್ ಸಿಂಗ್ ಹೃದಯಾಘಾತಕ್ಕೆ ಒಳಗಾಗಿ ಸಾವನ್ನಪ್ಪಿದ್ದಾರೆ. ಮೃತ ಲಖ್ವೀರ್ ಸಿಂಗ್ ಬತಿಂಡಾ ಗ್ರಾಮ ನಿವಾಸಿಯಾಗಿದ್ದು, ಪ್ರತಿಭಟನೆಯಲ್ಲಿ ಇವರು ಬಿಕೆಯು ಸಂಘಟನೆಯನ್ನು ಪ್ರತಿನಿಧಿಸತ್ತಿದ್ದರು ಎಂದು ತಿಳಿದುಬಂದಿದೆ.

ಇನ್ನು ರಾಷ್ಟ್ರ ರಾಜಧಾನಿಯಲ್ಲಿ ನಡೆಯುತ್ತಿರುವ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ವೇಳೆ ಸಾವನ್ನಪ್ಪಿದವರ ಸಂಖ್ಯೆ 6ಕ್ಕೆ ಏರಿಕೆಯಾಗಿದ್ದು, ಇದಕ್ಕೂ ಮೊದಲು ಅಂದರೆ ನವೆಂಬರ್ 27ರಂದು 45 ವರ್ಷದ ಧನ್ನಾಸಿಂಗ್ ಸಾವನ್ನಪ್ಪಿದ್ದರು. ಪ್ರತಿಭಟನೆ ನಿಮಿತ್ತ ದೆಹಲಿಗೆ ರ್ಯಾಲಿಯಲ್ಲೆ ತೆರಳುತ್ತಿದ್ದ ವೇಳೆ ಸಂಭವಿಸಿದ ಅಪಘಾತದಲ್ಲಿ ಧನ್ನಾಸಿಂಗ್ ಸಾವನ್ನಪ್ಪಿದ್ದರು. ಇದಕ್ಕೂ ಮೊದಲು 55 ವರ್ಷದ ಜನಕ್ ರಾಜ್ ಎಂಬುವರರು ಚಿಕ್ರಿ  ಗಡಿಯಲ್ಲಿ ಕಾರಿನಲ್ಲಿ ಮಲಗಿದ್ದಾಗ ಸಾವನ್ನಪ್ಪಿದ್ದರು. ನಿನ್ನೆ  ಇದೇ ಟಿಕ್ರಿ ಗಡಿಯಲ್ಲಿ ಗಜ್ಜನ್ ಸಿಂಗ್ ಮತ್ತು ಗುರ್ಜಂತ್ ಸಿಂಗ್ ಎಂಬುವವರು ಕೂಡ ಸಾವನ್ನಪ್ಪಿದ್ದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT