ದೇವೇಂದ್ರ ಫಡ್ನವೀಸ್ 
ದೇಶ

ಮಹಾ ವಿಕಾಸ ಅಘಾಡಿಯ ಒಗ್ಗಟ್ಟಿನ ಸಾಮರ್ಥ್ಯ ನಿರ್ಣಯಿಸುವಲ್ಲಿ ಬಿಜೆಪಿ ವಿಫಲ: ಫಡ್ನವಿಸ್

ಮಹಾರಾಷ್ಟ್ರ ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ತೀವ್ರ ಹಿನ್ನಡೆ ಅನುಭವಿಸಿದ್ದು, ಶಿವಸೇನಾ ನೇತೃತ್ವದ ಮಹಾ ವಿಕಾಸ ಅಘಾಡಿ(ಎಂವಿಎ)ಯ ಒಗ್ಗಟ್ಟಿನ ಸಾಮರ್ಥ್ಯ ನಿರ್ಣಯಿಸುವಲ್ಲಿ ಪಕ್ಷ ವಿಫಲವಾಗಿದೆ.

ಮುಂಬೈ: ಮಹಾರಾಷ್ಟ್ರ ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ತೀವ್ರ ಹಿನ್ನಡೆ ಅನುಭವಿಸಿದ್ದು, ಶಿವಸೇನಾ ನೇತೃತ್ವದ ಮಹಾ ವಿಕಾಸ ಅಘಾಡಿ(ಎಂವಿಎ)ಯ ಒಗ್ಗಟ್ಟಿನ ಸಾಮರ್ಥ್ಯ ನಿರ್ಣಯಿಸುವಲ್ಲಿ ಪಕ್ಷ ವಿಫಲವಾಗಿದೆ ಎಂದು ಮಹಾರಾಷ್ಟ್ರ ಪ್ರತಿಪಕ್ಷ ನಾಯಕ ದೇವೇಂದ್ರ ಫಡ್ನವಿಸ್ ಅವರು ಶುಕ್ರವಾರ ಹೇಳಿದ್ದಾರೆ.

ಎಂವಿಎ ಅಭ್ಯರ್ಥಿಗಳು ಈವರೆಗೆ ಐದು ಕ್ಷೇತ್ರಗಳಲ್ಲಿ ಮೂರು ಸ್ಥಾನಗಳನ್ನು ಗೆದ್ದಿದ್ದಾರೆ - ಮೂರು ಪದವೀಧರರು ಮತ್ತು ಎರಡು ಶಿಕ್ಷಕ ಕ್ಷೇತ್ರಗಳಿಗೆ ಡಿಸೆಂಬರ್ 1 ರಂದು ಚುನಾವಣೆ ನಡೆದಿತ್ತು.

ಈ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ಫಡ್ನವಿಸ್ ಅವರು, ಪಕ್ಷ ಚುನಾವಣೆ ಫಲಿತಾಂಶದ ಬಗ್ಗೆ ಅವಲೋಕನ ನಡೆಸುತ್ತೆ ಮತ್ತು ಮುಂದಿನ ಚುನಾವಣೆಗೆ ಉತ್ತಮ ರೀತಿಯಲ್ಲಿ ತಯಾರಿ ಮಾಡುತ್ತದೆ ಎಂದಿದ್ದಾರೆ.

"ಈ ಚುನಾವಣೆಯಲ್ಲಿ ಶಿವಸೇನೆ, ಎನ್‌ಸಿಪಿ ಮತ್ತು ಕಾಂಗ್ರೆಸ್ ಒಟ್ಟು ಸಾಮರ್ಥ್ಯವನ್ನು ನಿರ್ಣಯಿಸಲು ನಮಗೆ ಸಾಧ್ಯವಾಗಲಿಲ್ಲ. ಅವರು ಎಷ್ಟು ದೊಡ್ಡ ಹೋರಾಟವನ್ನು ಒಟ್ಟಾಗಿ ನಡೆಸಬಹುದು ಎಂಬುದು ಈಗ ನಮಗೆ ಅರ್ಥವಾಗಿದೆ. ಮುಂದಿನ ಚುನಾವಣೆಗೆ ನಾವು ಉತ್ತಮವಾಗಿ ತಯಾರಿ ನಡೆಸುತ್ತೇವೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT