ಅಸ್ಸಾಂ ಸಂಸದ ಮೌಲಾನಾ ಬದ್ರುದ್ದೀನ್ ಅಜ್ಮಲ್ 
ದೇಶ

ಉಗ್ರ ಗುಂಪಿನೊಂದಿಗೆ ನಂಟಿದ್ದ ವಿದೇಶಿ ಏಜೆನ್ಸಿಗಳಿಂದ ಹಣ ಪಡೆದಿದ್ದಕ್ಕಾಗಿ ಅಜ್ಮಲ್ ಫೌಂಡೇಶನ್ ವಿರುದ್ಧ ಎಫ್ ಐಆರ್ 

ಉಗ್ರರ ಗುಂಪಿನೊಂದಿಗೆ ನಂಟು ಹೊಂದಿದ್ದ ಕೆಲ ವಿದೇಶಿ ಏಜೆನ್ಸಿಗಳಿಂದ ಹಣ ಪಡೆದಿದ್ದಕ್ಕಾಗಿ ಅಸ್ಸಾಂ ಸಂಸದ ಮೌಲಾನಾ ಬದ್ರುದ್ದೀನ್ ಅಜ್ಮಲ್ ನಡೆಸುತ್ತಿದ್ದ ಅಜ್ಮಲ್ ಫೌಂಡೇಷನ್ ವಿರುದ್ಧ ಪೊಲೀಸರು ಎಫ್ ಐಆರ್ ದಾಖಲಿಸಿದ್ದಾರೆ.

ಗುವಾಹಟಿ: ಉಗ್ರರ ಗುಂಪಿನೊಂದಿಗೆ ನಂಟು ಹೊಂದಿದ್ದ ಕೆಲ ವಿದೇಶಿ ಏಜೆನ್ಸಿಗಳಿಂದ ಹಣ ಪಡೆದಿದ್ದಕ್ಕಾಗಿ ಅಸ್ಸಾಂ ಸಂಸದ ಮೌಲಾನಾ ಬದ್ರುದ್ದೀನ್ ಅಜ್ಮಲ್ ನಡೆಸುತ್ತಿದ್ದ ಅಜ್ಮಲ್ ಫೌಂಡೇಷನ್ ವಿರುದ್ಧ ಪೊಲೀಸರು ಎಫ್ ಐಆರ್ ದಾಖಲಿಸಿದ್ದಾರೆ. ಕಾನೂನು ಹಕ್ಕುಗಳ ವೀಕ್ಷಣಾಲಯ ಸ್ವಯಂ ಸೇವಾ ಸಂಸ್ಥೆಯ ವರದಿ ಆಧಾರದ ಮೇಲೆ ಬಲ ಪಂಥೀಯ ಮುಖಂಡ ಸತ್ಯ ರಂಜನ್ ಬೋರಾ ಶುಕ್ರವಾರ ದೂರು ದಾಖಲಿಸಿದ್ದರು.

ಎಐಯುಡಿಎಫ್ ಮುಖ್ಯಸ್ಥ , ಮೌಲಾನಾ ಬದ್ರುದ್ದೀನ್ ಅಜ್ಮಲ್ ನಡೆಸುತ್ತಿರುವ ಅಜ್ಮಲ್ ಫೌಂಡೇಶನ್ ಗೆ  ವಿವಿಧ ಉಗ್ರ ಗುಂಪುಗಳಿಗೆ ಹಣ ಪೂರೈಕೆ ಮಾಡುವ ಕೆಲ ವಿದೇಶಿ ಏಜೆನ್ಸಿಗಳಿಂದ ಭಯೋತ್ಪಾದಕ ಚಟುವಟಿಕೆಗಳಿಗಾಗಿ  ಹಣ ಬರುತ್ತಿರುವುದಾಗಿ ಕಾನೂನು ಹಕ್ಕುಗಳ ವೀಕ್ಷಣಾಲಯ ಸ್ವಯಂ ಸೇವಾ ಸಂಸ್ಥೆ ವರದಿ ಮಾಡಿದೆ.

ವರದಿಯನ್ನು ಪರಿಗಣಿಸಿ, ಕಾನೂನುಬಾಹಿರ ಚಟುವಟಿಕೆಗಳ ತಡೆಗಟ್ಟುವಿಕೆ ಕಾಯ್ದೆಯಡಿ ಸೂಕ್ತ ರೀತಿಯಲ್ಲಿ ತನಿಖೆ ನಡೆಸಬೇಕು,  ಅಜ್ಮಲ್ ಫೌಂಡೇಶನ್ ವಿದೇಶಿ ಹಣವನ್ನು ಹಲವಾರು ರಾಷ್ಟ್ರ ವಿರೋಧಿ ಚಟುವಟಿಕೆಗಳಲ್ಲಿ ದುರುಪಯೋಗಪಡಿಸಿಕೊಂಡಿದೆ" ಎಂದು ಬೋರಾ ಎಫ್ ಐಆರ್ ನಲ್ಲಿ ಆರೋಪಿಸಿದ್ದಾರೆ.

ಅಜ್ಮಲ್ ಫೌಂಡೇಶನ್ ಶಿಕ್ಷಣಕ್ಕಾಗಿ  69.55 ಕೋಟಿ ರೂಪಾಯಿಯನ್ನು ವಿದೇಶಿ ಏಜೆನ್ಸಿಗಳಿಂದ ಪಡೆದಿದೆ. ಅದರಲ್ಲಿ ಕೇವಲ 2.05ಕೋಟಿಯನ್ನು ಅದಕ್ಕೆ ಬಳಸಿದ್ದು, ಉಳಿದಿದ್ದನ್ನು ಎಐಯುಡಿಎಫ್ ಗೆ ಪೂರೈಸಿದೆ ಎಂದು ಎಲ್ ಆರ್ ಒ ಟ್ವೀಟ್ ಮಾಡಿದೆ. ಈ ಪ್ರಕರಣದ ಬಗ್ಗೆ ಕೇಂದ್ರ ಸರ್ಕಾರ ಸೂಕ್ತ ತನಿಖೆ ನಡೆಸುವ ವಿಶ್ವಾಸವಿದೆ ಎಂದು ಅಸ್ಸಾಂ ಸಚಿವ ಹಿಮಾಂತಾ ಬಿಸ್ವಾ ಶರ್ಮಾ ಸುದ್ದಿಗಾರರಿಗೆ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT