ಅರ್ನಬ್ ಗೋಸ್ವಾಮಿ 
ದೇಶ

ವಿನ್ಯಾಸಗಾರ ಅನ್ವಯ್ ನಾಯಕ್ ಆತ್ಮಹತ್ಯೆ ಬೆದರಿಕೆಯನ್ನು ಆರೋಪಿಗಳು ನಿರ್ಲಕ್ಷಿಸಿದ್ದರು: ಚಾರ್ಜ್‌ಶೀಟ್

ರಿಪಬ್ಲಿಕ್ ಟಿವಿ ಪ್ರಧಾನ ಸಂಪಾದಕ ಅರ್ನಾಬ್ ಗೋಸ್ವಾಮಿ ಮತ್ತು ಇತರ ಇಬ್ಬರು ವಿರುದ್ಧ 2018ರ ಆತ್ಮಹತ್ಯೆ ಪ್ರಕರಣದಲ್ಲಿ ದಾಖಲಾದ ಚಾರ್ಜ್‌ಶೀಟ್‌ನಲ್ಲಿ ಮೃತ ಅನ್ವಾಯ್ ನಾಯಕ್ ಅವರು ಬಾಕಿ ಹಣ ನೀಡದಿದ್ದರೆ ತಾವು ಜೀವನವನ್ನು ಅಂತ್ಯಗೊಳಿಸಿಕೊಳ್ಳುವ ಬೆದರಿಕೆ ಹಾಕಿದ್ದಾಗ ಅದನ್ನು ಆರೋಪಿಗಳು ನಿರ್ಲಕ್ಷಿಸಿದ್ದರು ಎಂದು ಹೇಳಲಾಗಿದೆ.

ಮುಂಬೈ: ರಿಪಬ್ಲಿಕ್ ಟಿವಿ ಪ್ರಧಾನ ಸಂಪಾದಕ ಅರ್ನಾಬ್ ಗೋಸ್ವಾಮಿ ಮತ್ತು ಇತರ ಇಬ್ಬರು ವಿರುದ್ಧ 2018ರ ಆತ್ಮಹತ್ಯೆ ಪ್ರಕರಣದಲ್ಲಿ ದಾಖಲಾದ ಚಾರ್ಜ್‌ಶೀಟ್‌ನಲ್ಲಿ ಮೃತ ಅನ್ವಾಯ್ ನಾಯಕ್ ಅವರು ಬಾಕಿ ಹಣ ನೀಡದಿದ್ದರೆ ತಾವು ಜೀವನವನ್ನು ಅಂತ್ಯಗೊಳಿಸಿಕೊಳ್ಳುವ ಬೆದರಿಕೆ ಹಾಕಿದ್ದಾಗ ಅದನ್ನು ಆರೋಪಿಗಳು ನಿರ್ಲಕ್ಷಿಸಿದ್ದರು ಎಂದು ಹೇಳಲಾಗಿದೆ. 

ಆರೋಪಿಯು ಬಾಕಿ ಹಣ ಪಾವತಿಸದ ಕಾರಣ ಮಾನಸಿಕ ಒತ್ತಡದಲ್ಲಿದ್ದ ಅನ್ವಯ್ ನಾಯಕ್, ಮೊದಲು ತನ್ನ ತಾಯಿ ಕುಮುದಾ ಅವರ  ಕತ್ತು ಹಿಸುಕಿ ಕೊಂದಿದ್ದಾನೆ. ನಂತರ ಆತ್ಮಹತ್ಯೆ ಪತ್ರ ಬರೆದು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಚಾರ್ಜ್‌ಶೀಟ್‌ನಲ್ಲಿ ನಮೂದಿಸಲಾಗಿದೆ.

ಒಳಾಂಗಣ ವಿನ್ಯಾಸಗಾರ ಅನ್ವಯ್ ನಾಯಕ್ ಮತ್ತು ಅವರ ತಾಯಿಯ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ನೆರೆಯ ರಾಯಗಡ್ ಜಿಲ್ಲೆಯ ಅಲಿಬಾಗ್ ನ್ಯಾಯಾಲಯದಲ್ಲಿ ನಿನ್ನೆ ಚಾರ್ಜ್ ಶೀಟ್ ಸಲ್ಲಿಸಿದ್ದರು.

ಚಾರ್ಜ್‌ಶೀಟ್‌ನಲ್ಲಿ ಅರ್ನಬ್ ಗೋಸ್ವಾಮಿ ಸೇರಿ ಇತರ ಇಬ್ಬರು ಆರೋಪಿಗಳಾದ ಫಿರೋಜ್ ಶೇಖ್ ಮತ್ತು ನಿತೀಶ್ ಸರ್ದಾ ಅವರ ಹೆಸರನ್ನು ಸೇರಿಸಲಾಗಿದೆ. ಇನ್ನು 65 ಮಂದಿಯ ಹೆಸರನ್ನು ಸಾಕ್ಷಿಯನ್ನಾಗಿ ನಮೂದಿಸಲಾಗಿದೆ.

"ಬಾಕಿ ಹಣ ಪಾವತಿಸದಿದ್ದರೆ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಅನ್ವಯ್ ಹೇಳಿದ್ದರೂ ಆರೋಪಿಗಳು ಅವರ ಬೆದರಿಕೆಯನ್ನು ನಿರ್ಲಕ್ಷಿಸಿ ನಿನಗೆ ಏನು ಬೇಕೋ ಅದನ್ನು ಮಾಡಿಕೋ ಎಂದು ಹೇಳಿದ್ದರು ಎಂದು ಚಾರ್ಜ್‌ಶೀಟ್‌ನಲ್ಲಿ ತಿಳಿಸಲಾಗಿದೆ.

ಆರೋಪಿ ಮೂವರ ಮೇಲೆ ಐಪಿಸಿ ಸೆಕ್ಷನ್‌ಗಳು 306 (ಆತ್ಮಹತ್ಯೆಗೆ ಪ್ರಚೋದನೆ), 109 (ಅಪರಾಧಕ್ಕೆ ಶಿಕ್ಷೆ) ಮತ್ತು 34 (ಸಾಮಾನ್ಯ ಉದ್ದೇಶ) ಅಡಿಯಲ್ಲಿ ಆರೋಪ ಹೊರಿಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ವೆನೆಜುವೆಲಾ ಪರಿಸ್ಥಿತಿ ನಿಮಗೂ ಬರಬಹುದು.. ತಡ ಮಾಡದೇ ನಮ್ ಜೊತೆ ಒಪ್ಪಂದ ಮಾಡ್ಕೊಳ್ಳಿ': ಕ್ಯೂಬಾಗೂ Donald Trump ಎಚ್ಚರಿಕೆ!

ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ತ್ರಿಪುರದಲ್ಲಿ ಎರಡು ಸಮುದಾಯಗಳ ನಡುವೆ ಘರ್ಷಣೆ: ಉನಕೋಟಿಯಲ್ಲಿ ಮಸೀದಿ-ಮುಸ್ಲಿಂ ಅಂಗಡಿಗಳಿಗೆ ಬೆಂಕಿ

ಒಂದು ವಾರದ ಚಿಕಿತ್ಸೆ ಬಳಿಕ ಆಸ್ಪತ್ರೆಯಿಂದ ಸೋನಿಯಾ ಗಾಂಧಿ ಡಿಸ್ಚಾರ್ಜ್!

Tubelight in his head: ಹಿಮಂತಾ ಬಿಸ್ವಾ ಶರ್ಮಾ ವಿರುದ್ಧ AIMIM ಮುಖ್ಯಸ್ಥ ಓವೈಸಿ ಕಿಡಿ! ಏನಿದು ವಿವಾದ?

SCROLL FOR NEXT