ವಿಜ್ಞಾನ ಭವನದಲ್ಲಿ ರೈತ ಮುಖಂಡರು 
ದೇಶ

ಅನ್ನದಾತರ ಎಲ್ಲಾ ಸಮಸ್ಯೆಗಳನ್ನು ಪರಿಹರಿಸಲು ಸಿದ್ಧ: ರೈತ ಸಂಘಟನೆಗಳಿಗೆ ಮೋದಿ ಸರ್ಕಾರ ಭರವಸೆ

ಮೂರು ಕೃಷಿ ಕಾನೂನುಗಳನ್ನು ಹಿಂಪಡೆಯಬೇಕು ಎಂದು ಪಟ್ಟು ಹಿಡಿದು ದೆಹಲಿ ಗಡಿಯಲ್ಲಿ ಉಗ್ರ ಪ್ರತಿಭಟನೆ ನಡೆಸುತ್ತಿರುವ ರೈತ ಸಂಘಟನೆಗಳೊಂದಿಗೆ ಕೇಂದ್ರ ಸರ್ಕಾರ ಶನಿವಾರ ಮತ್ತೊಂದು ಸುತ್ತಿನ ಮಾತುಕತೆ ನಡೆಸಿದ್ದು, ಅನ್ನದಾತರ ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವುದಾಗಿ ಭರವಸೆ ನೀಡಿದೆ.

ನವದೆಹಲಿ: ಮೂರು ಕೃಷಿ ಕಾನೂನುಗಳನ್ನು ಹಿಂಪಡೆಯಬೇಕು ಎಂದು ಪಟ್ಟು ಹಿಡಿದು ದೆಹಲಿ ಗಡಿಯಲ್ಲಿ ಉಗ್ರ ಪ್ರತಿಭಟನೆ ನಡೆಸುತ್ತಿರುವ ರೈತ ಸಂಘಟನೆಗಳೊಂದಿಗೆ ಕೇಂದ್ರ ಸರ್ಕಾರ ಶನಿವಾರ ಮತ್ತೊಂದು ಸುತ್ತಿನ ಮಾತುಕತೆ ನಡೆಸಿದ್ದು, ಅನ್ನದಾತರ ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವುದಾಗಿ ಭರವಸೆ ನೀಡಿದೆ.

ರೈತರ ಪ್ರತಿಭಟನೆ ಇಂದು ಹತ್ತನೇ ದಿನಕ್ಕೆ ಕಾಲಿಟ್ಟಿದ್ದು, ಇಂದು ದೆಹಲಿಯ ವಿಜ್ಞಾನ ಭವನದಲ್ಲಿ ಪ್ರತಿಭಟನಾನಿರತ ರೈತ ಪ್ರತಿನಿಧಿಗಳೊಂದಿಗೆ ಐದನೇ ಸುತ್ತಿನ ಮಾತುಕತೆ ನಡೆಯಿತು.

ಈ ವೇಳೆ ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಅವರು ಸೌಹಾರ್ದಯುತ ಮಾತುಕತೆಗೆ ಸರ್ಕಾರ ಬದ್ಧವಾಗಿದೆ ಮತ್ತು ಹೊಸ ಕೃಷಿ ಕಾನೂನುಗಳ ಬಗ್ಗೆ ಎಲ್ಲಾ ಸಕಾರಾತ್ಮಕ ಸಲಹೆಗಳನ್ನು ಸ್ವಾಗತಿಸುತ್ತದೆ ಎಂದು ರೈತ ಸಂಘಟನೆಗಳ ಪ್ರತಿನಿಧಿಗಳಿಗೆ ಹೇಳಿರುವುದಾಗಿ ಮೂಲಗಳು ತಿಳಿಸಿವೆ.

ನಂತರ ಪಂಜಾಬಿಯಲ್ಲಿ ರೈತರನ್ನು ಉದ್ದೇಶಿಸಿ ಮಾತನಾಡಿದ ವಾಣಿಜ್ಯ ಖಾತೆ ರಾಜ್ಯ ಸಚಿವ ಸೋಮ್ ಪ್ರಕಾಶ್ ಅವರು, "ನಿಮ್ಮ ಎಲ್ಲ ಸಮಸ್ಯೆಗಳನ್ನು ಮುಕ್ತ ಮನಸ್ಸಿನಿಂದ ಪರಿಹರಿಸಲು ನಾವು ಸಿದ್ಧರಿದ್ದೇವೆ" ಎಂದಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT