ವಿಜ್ಞಾನ ಭವನದಲ್ಲಿ ರೈತ ಮುಖಂಡರು 
ದೇಶ

ಅನ್ನದಾತರ ಎಲ್ಲಾ ಸಮಸ್ಯೆಗಳನ್ನು ಪರಿಹರಿಸಲು ಸಿದ್ಧ: ರೈತ ಸಂಘಟನೆಗಳಿಗೆ ಮೋದಿ ಸರ್ಕಾರ ಭರವಸೆ

ಮೂರು ಕೃಷಿ ಕಾನೂನುಗಳನ್ನು ಹಿಂಪಡೆಯಬೇಕು ಎಂದು ಪಟ್ಟು ಹಿಡಿದು ದೆಹಲಿ ಗಡಿಯಲ್ಲಿ ಉಗ್ರ ಪ್ರತಿಭಟನೆ ನಡೆಸುತ್ತಿರುವ ರೈತ ಸಂಘಟನೆಗಳೊಂದಿಗೆ ಕೇಂದ್ರ ಸರ್ಕಾರ ಶನಿವಾರ ಮತ್ತೊಂದು ಸುತ್ತಿನ ಮಾತುಕತೆ ನಡೆಸಿದ್ದು, ಅನ್ನದಾತರ ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವುದಾಗಿ ಭರವಸೆ ನೀಡಿದೆ.

ನವದೆಹಲಿ: ಮೂರು ಕೃಷಿ ಕಾನೂನುಗಳನ್ನು ಹಿಂಪಡೆಯಬೇಕು ಎಂದು ಪಟ್ಟು ಹಿಡಿದು ದೆಹಲಿ ಗಡಿಯಲ್ಲಿ ಉಗ್ರ ಪ್ರತಿಭಟನೆ ನಡೆಸುತ್ತಿರುವ ರೈತ ಸಂಘಟನೆಗಳೊಂದಿಗೆ ಕೇಂದ್ರ ಸರ್ಕಾರ ಶನಿವಾರ ಮತ್ತೊಂದು ಸುತ್ತಿನ ಮಾತುಕತೆ ನಡೆಸಿದ್ದು, ಅನ್ನದಾತರ ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವುದಾಗಿ ಭರವಸೆ ನೀಡಿದೆ.

ರೈತರ ಪ್ರತಿಭಟನೆ ಇಂದು ಹತ್ತನೇ ದಿನಕ್ಕೆ ಕಾಲಿಟ್ಟಿದ್ದು, ಇಂದು ದೆಹಲಿಯ ವಿಜ್ಞಾನ ಭವನದಲ್ಲಿ ಪ್ರತಿಭಟನಾನಿರತ ರೈತ ಪ್ರತಿನಿಧಿಗಳೊಂದಿಗೆ ಐದನೇ ಸುತ್ತಿನ ಮಾತುಕತೆ ನಡೆಯಿತು.

ಈ ವೇಳೆ ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಅವರು ಸೌಹಾರ್ದಯುತ ಮಾತುಕತೆಗೆ ಸರ್ಕಾರ ಬದ್ಧವಾಗಿದೆ ಮತ್ತು ಹೊಸ ಕೃಷಿ ಕಾನೂನುಗಳ ಬಗ್ಗೆ ಎಲ್ಲಾ ಸಕಾರಾತ್ಮಕ ಸಲಹೆಗಳನ್ನು ಸ್ವಾಗತಿಸುತ್ತದೆ ಎಂದು ರೈತ ಸಂಘಟನೆಗಳ ಪ್ರತಿನಿಧಿಗಳಿಗೆ ಹೇಳಿರುವುದಾಗಿ ಮೂಲಗಳು ತಿಳಿಸಿವೆ.

ನಂತರ ಪಂಜಾಬಿಯಲ್ಲಿ ರೈತರನ್ನು ಉದ್ದೇಶಿಸಿ ಮಾತನಾಡಿದ ವಾಣಿಜ್ಯ ಖಾತೆ ರಾಜ್ಯ ಸಚಿವ ಸೋಮ್ ಪ್ರಕಾಶ್ ಅವರು, "ನಿಮ್ಮ ಎಲ್ಲ ಸಮಸ್ಯೆಗಳನ್ನು ಮುಕ್ತ ಮನಸ್ಸಿನಿಂದ ಪರಿಹರಿಸಲು ನಾವು ಸಿದ್ಧರಿದ್ದೇವೆ" ಎಂದಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಡವರ ಬದುಕಿಗೆ ಬೆಲೆ ಏರಿಕೆ ಬರೆ: ‘ಅಚ್ಛೇ ದಿನ್ ಆಯ್ತು ದುಬಾರಿ ದಿನ್: ಅಗತ್ಯ ವಸ್ತುಗಳ ಬೆಲೆ ಏರಿಕೆ ಬೆನ್ನಲ್ಲೇ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!