ವಿಜ್ಞಾನ ಭವನದಲ್ಲಿ ರೈತ ಮುಖಂಡರು 
ದೇಶ

ಅನ್ನದಾತರ ಎಲ್ಲಾ ಸಮಸ್ಯೆಗಳನ್ನು ಪರಿಹರಿಸಲು ಸಿದ್ಧ: ರೈತ ಸಂಘಟನೆಗಳಿಗೆ ಮೋದಿ ಸರ್ಕಾರ ಭರವಸೆ

ಮೂರು ಕೃಷಿ ಕಾನೂನುಗಳನ್ನು ಹಿಂಪಡೆಯಬೇಕು ಎಂದು ಪಟ್ಟು ಹಿಡಿದು ದೆಹಲಿ ಗಡಿಯಲ್ಲಿ ಉಗ್ರ ಪ್ರತಿಭಟನೆ ನಡೆಸುತ್ತಿರುವ ರೈತ ಸಂಘಟನೆಗಳೊಂದಿಗೆ ಕೇಂದ್ರ ಸರ್ಕಾರ ಶನಿವಾರ ಮತ್ತೊಂದು ಸುತ್ತಿನ ಮಾತುಕತೆ ನಡೆಸಿದ್ದು, ಅನ್ನದಾತರ ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವುದಾಗಿ ಭರವಸೆ ನೀಡಿದೆ.

ನವದೆಹಲಿ: ಮೂರು ಕೃಷಿ ಕಾನೂನುಗಳನ್ನು ಹಿಂಪಡೆಯಬೇಕು ಎಂದು ಪಟ್ಟು ಹಿಡಿದು ದೆಹಲಿ ಗಡಿಯಲ್ಲಿ ಉಗ್ರ ಪ್ರತಿಭಟನೆ ನಡೆಸುತ್ತಿರುವ ರೈತ ಸಂಘಟನೆಗಳೊಂದಿಗೆ ಕೇಂದ್ರ ಸರ್ಕಾರ ಶನಿವಾರ ಮತ್ತೊಂದು ಸುತ್ತಿನ ಮಾತುಕತೆ ನಡೆಸಿದ್ದು, ಅನ್ನದಾತರ ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವುದಾಗಿ ಭರವಸೆ ನೀಡಿದೆ.

ರೈತರ ಪ್ರತಿಭಟನೆ ಇಂದು ಹತ್ತನೇ ದಿನಕ್ಕೆ ಕಾಲಿಟ್ಟಿದ್ದು, ಇಂದು ದೆಹಲಿಯ ವಿಜ್ಞಾನ ಭವನದಲ್ಲಿ ಪ್ರತಿಭಟನಾನಿರತ ರೈತ ಪ್ರತಿನಿಧಿಗಳೊಂದಿಗೆ ಐದನೇ ಸುತ್ತಿನ ಮಾತುಕತೆ ನಡೆಯಿತು.

ಈ ವೇಳೆ ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಅವರು ಸೌಹಾರ್ದಯುತ ಮಾತುಕತೆಗೆ ಸರ್ಕಾರ ಬದ್ಧವಾಗಿದೆ ಮತ್ತು ಹೊಸ ಕೃಷಿ ಕಾನೂನುಗಳ ಬಗ್ಗೆ ಎಲ್ಲಾ ಸಕಾರಾತ್ಮಕ ಸಲಹೆಗಳನ್ನು ಸ್ವಾಗತಿಸುತ್ತದೆ ಎಂದು ರೈತ ಸಂಘಟನೆಗಳ ಪ್ರತಿನಿಧಿಗಳಿಗೆ ಹೇಳಿರುವುದಾಗಿ ಮೂಲಗಳು ತಿಳಿಸಿವೆ.

ನಂತರ ಪಂಜಾಬಿಯಲ್ಲಿ ರೈತರನ್ನು ಉದ್ದೇಶಿಸಿ ಮಾತನಾಡಿದ ವಾಣಿಜ್ಯ ಖಾತೆ ರಾಜ್ಯ ಸಚಿವ ಸೋಮ್ ಪ್ರಕಾಶ್ ಅವರು, "ನಿಮ್ಮ ಎಲ್ಲ ಸಮಸ್ಯೆಗಳನ್ನು ಮುಕ್ತ ಮನಸ್ಸಿನಿಂದ ಪರಿಹರಿಸಲು ನಾವು ಸಿದ್ಧರಿದ್ದೇವೆ" ಎಂದಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

26/11 ಮುಂಬೈ ದಾಳಿಗೆ 17 ವರ್ಷ: ಕರಾಳ ದಿನ ನೆನೆದ ದೇಶದ ಜನತೆ, ಹುತಾತ್ಮರಿಗೆ ಭಾವಪೂರ್ಣ ಶ್ರದ್ಧಾಂಜಲಿ

ಸಿಎಂ ಹುದ್ದೆ ಗುದ್ದಾಟ: ಸಿದ್ದರಾಮಯ್ಯ-ಡಿ ಕೆ ಶಿವಕುಮಾರ್ ಗೆ ಹೈಕಮಾಂಡ್ ದೆಹಲಿಗೆ ಬುಲಾವ್ ಸಾಧ್ಯತೆ

ನವೆಂಬರ್ 28ರಂದು ಉಡುಪಿಗೆ ಪ್ರಧಾನಿ ಮೋದಿ: ಬನ್ನಂಜೆಯಿಂದ ಕಲ್ಸಂಕ ಜಂಕ್ಷನ್‌ವರೆಗೆ ರೋಡ್ ಶೋ

ವಿದೇಶದಲ್ಲೂ ನಂದಿನಿ ತುಪ್ಪಕ್ಕೆ ಹೆಚ್ಚಿದ ಬೇಡಿಕೆ; ಅಮೆರಿಕಾ ಸೇರಿದಂತೆ ಮೂರು ರಾಷ್ಟ್ರಗಳಿಗೆ ರಫ್ತು..!

CLP ಸಭೆಯಲ್ಲಿ ಸರ್ವಾನುಮತದಿಂದ ಸಿದ್ದರಾಮಯ್ಯ ಅವರನ್ನು ಆಯ್ಕೆ ಮಾಡಲಾಗಿತ್ತು, 50:50 ಒಪ್ಪಂದವಾಗಿಲ್ಲ: ಕೆ.ಜೆ. ಜಾರ್ಜ್ ಸ್ಪಷ್ಟನೆ

SCROLL FOR NEXT