ಮಮತಾ ಬ್ಯಾನರ್ಜಿ 
ದೇಶ

ನಮಗೆ ಟಿಎಂಸಿಯ 'ಸಹಜ ಅವನತಿ' ಬೇಕು, ಬಂಗಾಳದಲ್ಲಿ ರಾಷ್ಟ್ರಪತಿ ಆಡಳಿತ ಜಾರಿ ಬಯಸಲ್ಲ: ಬಿಜೆಪಿ

ಆಡಳಿತಾರೂಢ ತೃಣಮೂಲ ಕಾಂಗ್ರೆಸ್(ಟಿಎಂಸಿ) ಪಕ್ಷದ ಸಹಜ ಅವನತಿ ಬೇಕೆ ಹೊರತು ರಾಜ್ಯದಲ್ಲಿ ರಾಷ್ಟ್ರಪತಿ ಆಡಳಿತ ಜಾರಿಯನ್ನು ಬಯಸುವುದಿಲ್ಲ ಎಂದು ಭಾರತೀಯ ಜನತಾ ಪಕ್ಷದ(ಬಿಜೆಪಿ) ನಾಯಕ ಸಮಿಕ್ ಭಟ್ಟಾಚಾರ್ಯ ಅವರು ಹೇಳಿದ್ದಾರೆ. 

ಕೋಲ್ಕತಾ: ಆಡಳಿತಾರೂಢ ತೃಣಮೂಲ ಕಾಂಗ್ರೆಸ್(ಟಿಎಂಸಿ) ಪಕ್ಷದ ಸಹಜ ಅವನತಿ ಬೇಕೆ ಹೊರತು ರಾಜ್ಯದಲ್ಲಿ ರಾಷ್ಟ್ರಪತಿ ಆಡಳಿತ ಜಾರಿಯನ್ನು ಬಯಸುವುದಿಲ್ಲ ಎಂದು ಭಾರತೀಯ ಜನತಾ ಪಕ್ಷದ(ಬಿಜೆಪಿ) ನಾಯಕ ಸಮಿಕ್ ಭಟ್ಟಾಚಾರ್ಯ ಅವರು ಹೇಳಿದ್ದಾರೆ. 

"ಪಶ್ಚಿಮ ಬಂಗಾಳದಲ್ಲಿ ಆರ್ಟಿಕಲ್ 356(ರಾಷ್ಟ್ರಪತಿ ಆಡಳಿತ) ನಮಗೆ ಬೇಡ. 356ನೇ ವಿಧಿಯನ್ನು ಬೇಕು ಅನ್ನುತ್ತಿರುವುದು ಮಮತಾ ಬ್ಯಾನರ್ಜಿ ಮತ್ತು ಅವರ ಪಕ್ಷ. ನಾವು ಟಿಎಂಸಿಯ ಸ್ವಾಭಾವಿಕ ಅವನತಿಯನ್ನು ಬಯಸುತ್ತೇವೆ. 2021ರಲ್ಲಿ ಬಂಗಾಳದ ಜನರು ತೀವ್ರವಾಗಿ ಬಿಜೆಪಿಯನ್ನು ಬೆಂಬಲಿಸಲಿದ್ದಾರೆ ಎಂದು ಭಟ್ಟಾಚಾರ್ಯ ಹೇಳಿದರು.

ಈ ಹಿಂದೆ ಬಿಜೆಪಿ ಸಂಸದ ಸೌಮಿತ್ರಾ ಖಾನ್, ರಾಜ್ಯ ವಿಧಾನಸಭೆಯಲ್ಲಿ ಬಹುಮತವನ್ನು ಸಾಬೀತುಪಡಿಸಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರನ್ನು ರಾಜ್ಯಪಾಲ ಜಗದೀಪ್ ಧಂಕರ್ ಅವರು ಕೇಳುವ ಸಾಧ್ಯತೆಯಿದೆ ಎಂದು ಹೇಳಿದ್ದರು.

"ರಾಜ್ಯಪಾಲರು ಇದ್ದಕ್ಕಿದ್ದಂತೆ 149 ಸ್ಥಾನಗಳನ್ನು(ಬಹುಮತ) ಸಾಬೀತುಪಡಿಸಿ ಎಂದು ಮುಖ್ಯಮಂತ್ರಿಯನ್ನು ಕೇಳಬಹುದು ಖಾನ್ ನವೆಂಬರ್ 28ರಂದು ಕಾರ್ಯಕ್ರಮವೊಂದರಲ್ಲಿ ಕೇಳಿದ್ದರು. 

ಕೆಳ ತಿಂಗಳುಗಳಿಂದ ಧಂಕರ್ ಹಲವಾರು ವಿಷಯಗಳ ಬಗ್ಗೆ ಬ್ಯಾನರ್ಜಿಯೊಂದಿಗೆ ಭಿನ್ನಾಭಿಪ್ರಾಯ ಹೊಂದಿದ್ದಾರೆ. ಧಂಕರ್ ಅವರು ರಾಜ್ಯದಲ್ಲಿ "ಸಮಾನಾಂತರ ಆಡಳಿತ" ನಡೆಸುತ್ತಿದ್ದಾರೆ ಎಂದು ಬ್ಯಾನರ್ಜಿ ಈ ಹಿಂದೆ ಆರೋಪಿಸಿದ್ದರು.

2019ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ 18 ಸ್ಥಾನಗಳನ್ನು ಗೆದ್ದ ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಆಳವಾಗಿ ಬೇರೂರಿದೆ. 2021ರ ವಿಧಾನಸಭಾ ಚುನಾವಣೆಗೂ ಮುನ್ನ ಹಲವಾರು ಟಿಎಂಸಿ ನಾಯಕರು ಬಿಜೆಪಿಗೆ ಸೇರಿದ್ದಾರೆ ಎಂದಿದ್ದರು.

2016ರಲ್ಲಿ ತೃಣಮೂಲ ಕಾಂಗ್ರೆಸ್ 294 ಸದಸ್ಯರ ರಾಜ್ಯ ವಿಧಾನಸಭೆಯಲ್ಲಿ ಒಟ್ಟು 211 ಸ್ಥಾನಗಳನ್ನು ಗಳಿಸಿದ್ದರೆ, ಬಿಜೆಪಿಗೆ ಕೇವಲ ಮೂರು ಸ್ಥಾನಗಳಲ್ಲಿ ಗೆಲವು ಸಾಧಿಸಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel