ತೃಪ್ತಿ ದೇಸಾಯಿ 
ದೇಶ

ತೃಪ್ತಿ ದೇಸಾಯಿ ಶಿರಡಿ ಪ್ರವೇಶಕ್ಕೆ ಡಿಸೆಂಬರ್ 11ರವರೆಗೆ ನಿರ್ಬಂಧ

ಭಕ್ತರಿಗೆ ಸಾಂಪ್ರದಾಯಿಕ ಉಡುಪು ಧರಿಸುವಂತೆ ಕೋರಿ ದೇವಾಲಯದ ಅಧಿಕಾರಿಗಳು ಹಾಕಿದ ಬೋರ್ಡ್‌ಗಳನ್ನು ತೆಗೆದುಹಾಕುವುದಾಗಿ ಬೆದರಿಕೆ ಹಾಕಿದ್ದಸಾಮಾಜಿಕ ಕಾರ್ಯಕರ್ತೆ ತೃಪ್ತಿ ದೇಸಾಯಿ ಅವರಿಗೆ ಡಿಸೆಂಬರ್ 11 ರವರೆಗೆ ಮಹಾರಾಷ್ಟ್ರದ ಪವಿತ್ರ ಪಟ್ಟಣ ಶಿರಡಿಗೆ ಪ್ರವೇಶಿಸುವುದನ್ನು ನಿರ್ಬಂಧಿಸಲಾಗಿದೆ ಎಂದು ಅಧಿಕಾರಿಯೊಬ್ಬರು ಮಂಗಳವಾರ ತಿಳಿಸಿದ್ದಾರೆ.

ಶಿರಡಿ: ಭಕ್ತರಿಗೆ ಸಾಂಪ್ರದಾಯಿಕ ಉಡುಪು ಧರಿಸುವಂತೆ ಕೋರಿ ದೇವಾಲಯದ ಅಧಿಕಾರಿಗಳು ಹಾಕಿದ ಬೋರ್ಡ್‌ಗಳನ್ನು ತೆಗೆದುಹಾಕುವುದಾಗಿ ಬೆದರಿಕೆ ಹಾಕಿದ್ದಸಾಮಾಜಿಕ ಕಾರ್ಯಕರ್ತೆ ತೃಪ್ತಿ ದೇಸಾಯಿ ಅವರಿಗೆ ಡಿಸೆಂಬರ್ 11 ರವರೆಗೆ ಮಹಾರಾಷ್ಟ್ರದ ಪವಿತ್ರ ಪಟ್ಟಣ ಶಿರಡಿಗೆ ಪ್ರವೇಶಿಸುವುದನ್ನು ನಿರ್ಬಂಧಿಸಲಾಗಿದೆ ಎಂದು ಅಧಿಕಾರಿಯೊಬ್ಬರು ಮಂಗಳವಾರ ತಿಳಿಸಿದ್ದಾರೆ.

ಕಾನೂನು ಸುವ್ಯವಸ್ಥೆ ಸ್ಥಿತಿಯನ್ನು ಉಲ್ಲೇಖಿಸಿ ಉಪವಿಭಾಗೀಯ ಮ್ಯಾಜಿಸ್ಟ್ರೇಟ್ (ಶಿರಡಿ)) ಗೋವಿಂದ್ ಶಿಂಧೆ ದೇಸಾಯಿ ಅವರಿಗೆ ನೋಟಿಸ್ ನೀಡಿದ್ದು, ಡಿಸೆಂಬರ್ 8 ಮಧ್ಯರಾತ್ರಿಯಿಂದ ಡಿಸೆಂಬರ್ 11 ಮಧ್ಯರಾತ್ರಿಯವರೆಗೆ.ಅಹ್ಮದ್‌ನಗರ ಜಿಲ್ಲೆಯಲ್ಲಿರುವ ಶಿರಡಿಗೆ ಪ್ರವೇಶಿಸದಂತೆ ಹೇಳಲಾಗಿದೆ.

ಭಕ್ತರಿಗೆ ಸಾಂಪ್ರದಾಯುಕ ರೀತಿಯಲ್ಲಿ ಉಡುಗೆ ತೊಟ್ಟು ಬರುವಂತೆ ಮನವಿ ಮಾಡಿರುವ ಬಗ್ಗೆ ಶಿರಡಿ ಸಾಯಿಬಾಬಾ ಟೆಂಪಲ್ ಟ್ರಸ್ಟ್‌ಗೆ ಎಚ್ಚರಿಕೆ ನೀಡಿರುವ ತೃಪ್ತಿ ದೇಸಾಯಿ ವಾದಾತ್ಮಕ ಸಂದೇಶವನ್ನು ಹೊತ್ತ ಬೋರ್ಡ್‌ಗಳನ್ನು ತೆಗೆದುಹಾಕದಿದ್ದರೆ ಡಿಸೆಂಬರ್ 10 ರಂದು ತಾನು ಹಾಗೂ ಇತರ ಕಾರ್ಯಕರ್ತರು ಶಿರಡಿಗೆ ಬಂದು ಅದನ್ನು ತೆರವು ಮಾಡುವುದಾಗಿ ಹೇಳಿದ್ದರು. 

"ಕಾನೂನು ಮತ್ತು ಸುವ್ಯವಸ್ಥೆಯ ದೃಷ್ಟಿಯಿಂದ, ದೇಸಾಯಿ ಅವರಿಗೆ ಮಂಗಳವಾರ ಸಿಆರ್‌ಪಿಸಿಯ ಸೆಕ್ಷನ್ 144 ರ ಅಡಿಯಲ್ಲಿ ನೋಟಿಸ್ ನೀಡಲಾಗಿದೆ. ಡಿಸೆಂಬರ್ 11 ರವರೆಗೆ ಶಿರಡಿ ಪುರಸಭೆಯ ವ್ಯಾಪ್ತಿಗೆ ಪ್ರವೇಶಿಸುವುದನ್ನು ನಿರ್ಬಂಧಿಸಲಾಗಿದೆ" ಎಂದು ಶಿಂಧೆ ಹೇಳಿದರು.

"ಆಕ್ಷೇಪಾರ್ಹ"ಉಡುಪು ಧರಿಸಿಕೆಲವರು ದೇಗುಲಕ್ಕೆ ಬರುತ್ತಾರೆ ಎಂಬ ದೂರುಗಳ ಹಿನ್ನೆಲೆ ಟ್ರಸ್ಟ್ ದೇವಾಲಯದ ಆವರಣದ ಹೊರಗೆ ಬೋರ್ಡ್‌ಗಳನ್ನು ಹಾಕಿದ್ದು ಭಕ್ತರನ್ನು "ಸುಸಂಸ್ಕೃತ" ರೀತಿಯಲ್ಲಿ ಅಥವಾ "ಭಾರತೀಯ ಸಂಸ್ಕೃತಿಯ" ಪ್ರಕಾರ ಉಡುಪು ಧರಿಸಿ ಬನ್ನಿ ಎಂದು ಮನವಿ ಮಾಡಿತು. ಆದಾಗ್ಯೂ, ಟ್ರಸ್ಟ್‌ನ ಹಿರಿಯ ಅಧಿಕಾರಿಯೊಬ್ಬರು ತಾವು ಯಾವುದೇ ಡ್ರೆಸ್ ಕೋಡ್ ಅನ್ನು ಭಕ್ತರಿಗೆ ವಿಧಿಸಿಲ್ಲ ಅಲ್ಲದೆ ಹಾಕಿರುವ ಸಂದೇಶವು ಕೇವಲ ಮನವಿಯಾಗಿದೆ ಎಂದು ಸ್ಪಷ್ಟಪಡಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕ ನಾಳೆ ಜಾರಿ: ಕರಡು ಸೂಚನೆ ಹೊರಡಿಸಿದ ಅಮೆರಿಕ

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

ಬಾನು ಮುಷ್ತಾಕ್‌ ದಸರಾ ಉದ್ಘಾಟನೆಗೆ ಆಕ್ಷೇಪ; ಮುಸ್ಲಿಂ ದ್ವೇಷ ಮನಸ್ಥಿತಿಯನ್ನು ಬದಿಗಿಟ್ಟು, ಸಂವಿಧಾನದ ಆಶಯ ಅರ್ಥ ಮಾಡಿಕೊಳ್ಳಿ: ಸಚಿವ ಹೆಚ್.ಸಿ.ಮಹದೇವಪ್ಪ

SCROLL FOR NEXT