ರೈತ ಮುಖಂಡರು 
ದೇಶ

ಕೇಂದ್ರ ಸರ್ಕಾರದ ಕರಡು ಪ್ರಸ್ತಾವನೆ ತಿರಸ್ಕರಿಸಿದ ರೈತರು, ಪ್ರತಿಭಟನೆ ಮುಂದುವರೆಸಲು ನಿರ್ಧಾರ

ಕೇಂದ್ರ ಸರ್ಕಾರ ಬುಧವಾರ ಕಳುಹಿಸಿದ ಕರಡು ಪ್ರಸ್ತಾವನೆಯನ್ನು ರೈತ ಸಂಘಟನೆಗಳು ತಿರಸ್ಕರಿಸಿದ್ದು, ರಾಷ್ಟ್ರ ರಾಜಧಾನಿ ಗಡಿಯಲ್ಲಿ ಪ್ರತಿಭಟನೆ ಮುಂದುವರೆಸಲು ನಿರ್ಧರಿಸಿವೆ.

ನವದೆಹಲಿ: ಕೇಂದ್ರ ಸರ್ಕಾರ ಬುಧವಾರ ಕಳುಹಿಸಿದ ಕರಡು ಪ್ರಸ್ತಾವನೆಯನ್ನು ರೈತ ಸಂಘಟನೆಗಳು ತಿರಸ್ಕರಿಸಿದ್ದು, ರಾಷ್ಟ್ರ ರಾಜಧಾನಿ ಗಡಿಯಲ್ಲಿ ಪ್ರತಿಭಟನೆ ಮುಂದುವರೆಸಲು ನಿರ್ಧರಿಸಿವೆ.

ಕೇಂದ್ರ ಸರ್ಕಾರ ಕರಡು ಪ್ರಸ್ತಾವನೆಯನ್ನು ತಿರಸ್ಕರಿಸಲಾಗಿದೆ ಎಂದು ಕ್ರಾಂತಿಕಾರಿ ಕಿಸಾನ್ ಯೂನಿಯನ್ ಅಧ್ಯಕ್ಷ ದರ್ಶನ್ ಪಾಲ್ ಅವರು ತಿಳಿಸಿದ್ದಾರೆ.

ಕೃಷಿ ಕಾನೂನುಗಳ ವಿರುದ್ಧದ ನಮ್ಮ ಹೋರಾಟ ಮುಂದುವರೆಯಲಿದ್ದು, ಡಿಸೆಂಬರ್ 12 ರಂದು ದೆಹಲಿ-ಜೈಪುರ ಹೆದ್ದಾರಿಯನ್ನು ಬಂದ್ ಮಾಡುತ್ತೇವೆ. ಡಿಸೆಂಬರ್ 14 ರಂದು ಬಿಜೆಪಿ ಕಚೇರಿಗಳಿಗೆ ಘೆರಾವ್ ಹಾಕುತ್ತೇವೆ. ಕೇಂದ್ರದ ವಿರುದ್ಧ ದೇಶಾದ್ಯಂತ ಪ್ರತಿಭಟನೆಗಳು ನಡೆಯಲಿವೆ. ದೇಶದ ಇತರ ಭಾಗಗಳ ರೈತರಿಗೆ ದೆಹಲಿಗೆ ಬರುವಂತೆ ನಾವು ಕರೆ ನೀಡುತ್ತಿದ್ದೇವೆ" ಎಂದು ರೈತ ಮುಖಂಡರು ಹೇಳಿದ್ದಾರೆ.

ಇಂದು ಸಂಜೆಯ ವೇಳೆಗೆ ಈ ವಿಷಯಗಳ ಬಗ್ಗೆ ಸ್ವಲ್ಪ ಸ್ಪಷ್ಟತೆ ನೀಡುವ ಮೂಲಕ ಗೊಂದಲಗಳನ್ನು ನಿವಾರಿಸುವ ಭರವಸೆ ಇದೆ ಎಂದು ಅವರು ಹೇಳಿದ್ದಾರೆ.

ಕಾರ್ಪೊರೇಟ್ ದೈತ್ಯ ಸಂಸ್ಥೆಗಳಾದ ಅಂಬಾನಿ ಮತ್ತು ಅದಾನಿಯ ಕಂಪನಿಗಳನ್ನು ಬಹಿಷ್ಕರಿಸಲು ರೈತರು ನಿರ್ಧರಿಸಿದ್ದಾರೆ.

ನಿನ್ನೆ ಗೃಹ ಸಚಿವ ಅಮಿತ್ ಶಾ ಅವರೊಂದಿಗೆ ನಡೆದ ಮಾತುಕತೆ ವಿಫಲವಾದ ನಂತರ ರೈತ ಮುಖಂಡರು ಇಂದು 6ನೇ ಸುತ್ತಿನ ಮಾತುಕತೆಯಲ್ಲಿ ಭಾಗಿಯಾಗಲು ನಿರಾಕರಿಸಿದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ವಿಧೇಯಕಕ್ಕೆ ತಿದ್ದುಪಡಿ ಮಾಡಿದ ಕರಡು ಪ್ರಸ್ತಾವನೆಯನ್ನು ಇಂದು ರೈತ ಮುಖಂಡರಿಗೆ ಕಳುಹಿಸಿತ್ತು. ಆದರೆ ರೈತರು ಕರಡು ಪ್ರಸ್ತಾವನೆಯನ್ನು ತಿರಸ್ಕರಿಸಿದ್ದಾರೆ.

ಕೇಂದ್ರ ಸರ್ಕಾರದ ಕರಡು ಪ್ರಸ್ತಾವನೆಗಳು ಹೀಗಿವೆ

  • ಎಂಎಸ್ ಪಿ ವ್ಯವಸ್ಥೆ ಹೀಗೆಯೇ ಮುಂದುವರೆಯಲಿದೆ ಎಂದು ಲಿಖಿತ ಭರವಸೆ ನೀಡುವುದು 
  • ನಿಯಂತ್ರಿತ ಮಂಡಿಗಳ ಹೊರತಾಗಿ ಖಾಸಗಿ ವ್ಯಾಪಾರಸ್ಥರು ಟ್ರೇಡಿಂಗ್ ಗೆ ನೋಂದಣಿ ಮಾಡಲು ರಾಜ್ಯಗಳಿಗೆ ಅವಕಾಶ ನೀಡಲು ಕಾನೂನಿಗೆ ತಿದ್ದುಪಡಿ 
  • ಖಾಸಗಿ ಸಂಸ್ಥೆಗಳು ನೋಂದಣಿ ಮಾಡಿಕೊಂಡಿರುವ ಮಂಡಿಗಳಲ್ಲಿ ಎಪಿಎಂಸಿಗಳಿಗೆ ಅನ್ವಯವಾಗುವಂತೆಯೇ  ಸೆಸ್/ಶುಲ್ಕಗಳನ್ನು ರಾಜ್ಯ ಸರ್ಕಾರ ವಿಧಿಸಲಿದೆ.
  • ವಿವಾದಗಳನ್ನು ಬಗೆಹರಿಸಿಕೊಳ್ಳುವುದಕ್ಕೆ ಸಿವಿಲ್ ನ್ಯಾಯಾಗಳ ಮೊರೆ ಹೋಗಲು ರೈತರಿಗೆ ಆಯ್ಕೆ ನೀಡುವುದಕ್ಕಾಗಿ ಕಾನೂನು ತಿದ್ದುಪಡಿ
  • ಗುತ್ತಿಗೆ ನೀಡಿರುವ ಕೃಷಿ ಭೂಮಿಯಲ್ಲಿ ನಿರ್ಮಾಣ ಮಾಡಿರುವ ಯಾವುದೇ ಕಟ್ಟಡ ನಿರ್ಮಾಣದ ಮೇಲೆ ಸಾಲ ಸಿಗದಂತೆ ಹಾಗೂ ಗುತ್ತಿಗೆ ಅವಧಿ ಮುಕ್ತಾಯಗೊಂಡ ನಂತರ ಗುತ್ತಿಗೆಗೆ ಪಡೆದಿದ್ದವರು ಆ ಕಟ್ಟಡವನ್ನು ಅತಿಕ್ರಮಣ ಮಾಡದಂತೆ ನೋಡಿಕೊಳ್ಳಲಾಗುವುದು ಎಂದು ರೈತರಿಗೆ ಭರವಸೆ

ಭೋಗ್ಯ, ಅಡಮಾನ ಅಥವಾ ಕೃಷಿ ಭೂಮಿ ಮಾರಾಟಕ್ಕೆ ನಿರ್ಬಂಧ ವಿಧಿಸುವುದು, ಸ್ಪಾನ್ಸರ್ ಗಳು ಕೃಷಿ ಭೂಮಿ ಮೇಲಿನ ಒಡೆತನ ಕಸಿದುಕೊಳ್ಳುವುದಕ್ಕೆ ಅಥವಾ ಭೂಮಿಯ ಸ್ವರೂಪ ಬದಲಾವಣೆ ಮಾಡುವುದಕ್ಕೆ ನಿರ್ಬಂಧ ವಿಧಿಸುವುದೇ ಮೊದಲಾದ ಭರವಸೆಗಳನ್ನು ಕೇಂದ್ರ ಸರ್ಕಾರ ರೈತರಿಗೆ ಕಳಿಸಿಕೊಟ್ಟಿರುವ ತನ್ನ ಪ್ರಸ್ತಾವನೆಗಳ ಅಂಶಗಳಲ್ಲಿ ಸೇರಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

26/11 ಮುಂಬೈ ದಾಳಿಗೆ 17 ವರ್ಷ: ಕರಾಳ ದಿನ ನೆನೆದ ದೇಶದ ಜನತೆ, ಹುತಾತ್ಮರಿಗೆ ಭಾವಪೂರ್ಣ ಶ್ರದ್ಧಾಂಜಲಿ

ಸಿಎಂ ಹುದ್ದೆ ಗುದ್ದಾಟ: ಸಿದ್ದರಾಮಯ್ಯ-ಡಿ ಕೆ ಶಿವಕುಮಾರ್ ಗೆ ಹೈಕಮಾಂಡ್ ದೆಹಲಿಗೆ ಬುಲಾವ್ ಸಾಧ್ಯತೆ

ನವೆಂಬರ್ 28ರಂದು ಉಡುಪಿಗೆ ಪ್ರಧಾನಿ ಮೋದಿ: ಬನ್ನಂಜೆಯಿಂದ ಕಲ್ಸಂಕ ಜಂಕ್ಷನ್‌ವರೆಗೆ ರೋಡ್ ಶೋ

ವಿದೇಶದಲ್ಲೂ ನಂದಿನಿ ತುಪ್ಪಕ್ಕೆ ಹೆಚ್ಚಿದ ಬೇಡಿಕೆ; ಅಮೆರಿಕಾ ಸೇರಿದಂತೆ ಮೂರು ರಾಷ್ಟ್ರಗಳಿಗೆ ರಫ್ತು..!

CLP ಸಭೆಯಲ್ಲಿ ಸರ್ವಾನುಮತದಿಂದ ಸಿದ್ದರಾಮಯ್ಯ ಅವರನ್ನು ಆಯ್ಕೆ ಮಾಡಲಾಗಿತ್ತು, 50:50 ಒಪ್ಪಂದವಾಗಿಲ್ಲ: ಕೆ.ಜೆ. ಜಾರ್ಜ್ ಸ್ಪಷ್ಟನೆ

SCROLL FOR NEXT