ಎನ್'ಸಿಪಿ ಮುಖ್ಯಸ್ಥ ಶರದ್ ಪವಾರ್ 
ದೇಶ

ಕೃಷಿ ಕಾಯ್ದೆ ಪರಿಷ್ಕರಣೆ ಪರವಾಗಿಯೇ ಇದ್ದರಲ್ಲಾ ಈಗ ದ್ವಿಮುಖ ನೀತೀನಾ? ಎಂಬ ಆರೋಪಕ್ಕೆ ಪವಾರ್ ಪ್ರತಿಕ್ರಿಯೆ ಹೀಗಿದೆ...

ಕೇಂದ್ರ ಸರ್ಕಾರ ಕೃಷಿ ಕ್ಷೇತ್ರದಲ್ಲಿ ಜಾರಿಗೆ ತಂದಿರುವ 3 ಕಾನೂನುಗಳ ವಿರುದ್ಧ ರೈತರ ಪ್ರತಿಭಟನೆ ಡಿ.09 ರಂದೂ ಮುಂದುವರೆದಿದ್ದು, ರಾಜಕೀಯ ಆರೋಪ ಪ್ರತ್ಯಾರೋಪಗಳೂ ಮುಂದುವರೆದಿವೆ. 

ನವದೆಹಲಿ: ಕೇಂದ್ರ ಸರ್ಕಾರ ಕೃಷಿ ಕ್ಷೇತ್ರದಲ್ಲಿ ಜಾರಿಗೆ ತಂದಿರುವ 3 ಕಾನೂನುಗಳ ವಿರುದ್ಧ ರೈತರ ಪ್ರತಿಭಟನೆ ಡಿ.09 ರಂದೂ ಮುಂದುವರೆದಿದ್ದು, ರಾಜಕೀಯ ಆರೋಪ ಪ್ರತ್ಯಾರೋಪಗಳೂ ಮುಂದುವರೆದಿವೆ. 

ಇವು ರೈತ ವಿರೋಧಿ ಕಾನೂನು ಎಂದು ವಿಪಕ್ಷಗಳು ಬೊಬ್ಬೆ ಹಾಕುತ್ತಿದ್ದರೆ, ಅರೆ ನೀವು ಅಧಿಕಾರದಲ್ಲಿದ್ದಾಗ ಇದೇ ಕಾನೂನನ್ನು ಜಾರಿಗೊಳಿಸಲು ಉತ್ಸುಕರಾಗಿದ್ರಿ... ಈಗ ವಿರೋಧ ಮಾಡ್ತಿದ್ದೀರ, ಇದು ಕೇವಲ ವಿರೋಧ ಮಾಡುವುದಕ್ಕೋಸ್ಕರವಾಗಿ ವಿರೋಧಿಸುತ್ತಿರೋದು ಎಂಬುದು ಆಡಳಿತಾರೂಢ ಬಿಜೆಪಿಯ ವಾದ. 

ಈ ಕೃಷಿ ಸುಧಾರಣೆಗಳನ್ನು ವಿರೋಧಿಸಿದ್ದ ಮಾಜಿ ಕೇಂದ್ರ ಕೃಷಿ ಸಚಿವ, ಎನ್ ಸಿಪಿ ಅಧ್ಯಕ್ಷ ಶರದ್ ಪವಾರ್ ಅವರಿಗೂ ಬಿಜೆಪಿ ಇದೇ ವಾದವನ್ನು ಮುಂದಿಟ್ಟು ಪ್ರತ್ಯಾರೋಪ ಮಾಡಿದೆ. 

"ರಾಜ್ಯ ಸರ್ಕಾರಗಳಲ್ಲಿನ ಎಪಿಎಂಸಿ ಕಾಯ್ದೆಯಲ್ಲಿ ಬದಲಾವಣೆಗಳಾಗಬೇಕು, ಕೃಷಿಯಲ್ಲಿ ಖಾಸಗಿ ಹೂಡಿಕೆ ಪ್ರಮುಖ ಪಾತ್ರ ವಹಿಸುವಂತಾಗಬೇಕು" ಎಂಬ ಇರಾದೆಯೊಂದಿಗೆ ಅಂದಿನ ಕೃಷಿ ಸಚಿವರಾಗಿದ್ದ ಶರದ್ ಪವಾರ್ ಅವರು ಮಧ್ಯಪ್ರದೇಶದ ಅಂದಿನ ಸಿಎಂ ಶಿವರಾಜ್ ಸಿಂಗ್ ಚೌಹಾಣ್ ಹಾಗೂ ದೆಹಲಿ ಸಿಎಂ ಶೀಲಾ ದೀಕ್ಷಿತ್ ಅವರಿಗೆ ಪತ್ರ ಬರೆದಿದ್ದನ್ನು ಬಿಜೆಪಿ ಈಗ ಉಲ್ಲೇಖಿಸಿ, ಪವಾರ್ ಅವರದ್ದು ದ್ವಿಮುಖ ನಿಲುವು ಎಂದು ಟೀಕಿಸಿದೆ.  

ಈ ಆರೋಪಗಳಿಗೆ ಪ್ರತಿಕ್ರಿಯೆ ನೀಡಿರುವ ಶರದ್ ಪವಾರ್, ಅಂದು ನಾನು ಎಪಿಎಂಸಿ ಕಾಯ್ದೆಯಲ್ಲಿ ಸಣ್ಣ ಪ್ರಮಾಣದ ಬದಲಾವಣೆ ತಂದು ಮುಂದುವರೆಸುವಂತೆ ಹೇಳಿದ್ದೆ. ಆದರೆ ಈಗ ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಕಾನೂನಿನಲ್ಲಿ ಎಪಿಎಂಸಿಯ ಬಗ್ಗೆ ಉಲ್ಲೇಖವೇ ಇಲ್ಲ ಎಂದು ಹೇಳಿದ್ದಾರೆ

ಅಷ್ಟೇ ಅಲ್ಲದೇ ಹಳೆಯ ಪತ್ರಗಳನ್ನಿಟ್ಟುಕೊಂಡು ಬಿಜೆಪಿ ವಿಷಯಾಂತರ ಮಾಡಲು ಯತ್ನಿಸುತ್ತಿದೆ ಎಂದೂ ಶರದ್ ಯಾದವ್ ಆರೋಪಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

ಬಿಗ್ ಬಾಸ್ 12 ಫಿನಾಲೆ ಹೊತ್ತಲ್ಲಿ ಕಿಚ್ಚ ಸುದೀಪ್‌ಗೆ ಸಂಕಷ್ಟ ತಂದ 'ರಣಹದ್ದು'!

CM ಕುರ್ಚಿ ಗುದ್ದಾಟ: ಅಗತ್ಯವಿದ್ದಾಗ ಸಿದ್ದರಾಮಯ್ಯ, ಶಿವಕುಮಾರ್‌ರನ್ನು ಮಾತುಕತೆಗೆ ಕರೆಯಲಾಗುವುದು; ಮಲ್ಲಿಕಾರ್ಜುನ ಖರ್ಗೆ

ಮಹಾತ್ಮ ಗಾಂಧಿ ಸಂದೇಶಗಳು ಹಿಂದೆಂದಿಗಿಂತಲೂ ಈಗ ಹೆಚ್ಚು ಪ್ರಸ್ತುತ: ಸಬರಮತಿ ಆಶ್ರಮದಲ್ಲಿ ಜರ್ಮನ್ ಚಾನ್ಸೆಲರ್!

'sir' ವಿವಾದ ಕೊನೆಗೂ ಅಂತ್ಯ: 'ಸರ್.. ನೀವು ನನ್ನ ಹಿರಿಯರು': ಕಿಚ್ಚಾ ಸುದೀಪ್ ಗೆ ಧನ್ಯವಾದ ಹೇಳಿದ ನಟ ಯಶ್!

SCROLL FOR NEXT