ಮಮತಾ ಬ್ಯಾನರ್ಜಿ 
ದೇಶ

ಬಂಗಾಳದಲ್ಲಿ ಎನ್ ಆರ್ ಸಿ, ಎನ್ ಪಿಆರ್ ಜಾರಿಗೆ ಅವಕಾಶ ನೀಡುವುದಿಲ್ಲ: ಮಮತಾ ಬ್ಯಾನರ್ಜಿ

ರಾಜ್ಯದಲ್ಲಿ ಎನ್‌ಆರ್‌ಸಿ ಮತ್ತು ಎನ್‌ಪಿಆರ್ ಜಾರಿಗೆ ಕೇಂದ್ರಕ್ಕೆ ಅವಕಾಶ ನೀಡುವುದಿಲ್ಲ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಬುಧವಾರ ಹೇಳಿದ್ದಾರೆ.

ಕೋಲ್ಕತಾ: ರಾಜ್ಯದಲ್ಲಿ ಎನ್‌ಆರ್‌ಸಿ ಮತ್ತು ಎನ್‌ಪಿಆರ್ ಜಾರಿಗೆ ಕೇಂದ್ರಕ್ಕೆ ಅವಕಾಶ ನೀಡುವುದಿಲ್ಲ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಬುಧವಾರ ಹೇಳಿದ್ದಾರೆ.

"ನಾನು ಬಂಗಾಳವನ್ನು ಗುಜರಾತ್ ಆಗಿ ಪರಿವರ್ತಿಸಲು ಬಿಜೆಪಿಗೆ ಅವಕಾಶ ನೀಡುವುದಿಲ್ಲ. ಅವರು ಜನರನ್ನು ಬಂಗಾಳದಿಂದ ಹೊರಹಾಕಲು ಪ್ರಯತ್ನಿಸುತ್ತಿದ್ದಾರೆ. ನಾನು ರಾಜ್ಯದಲ್ಲಿ ಎನ್ಆರ್ ಸಿ ಮತ್ತು ಎನ್ ಪಿಆರ್ ಅನ್ನು ಅನುಮತಿಸುವುದಿಲ್ಲ. ಯಾರು ಇಲ್ಲಿ ವಾಸಿಸುತ್ತಾರೆ ಎಂಬುದನ್ನು ರಾಜ್ಯ ಸರ್ಕಾರ ನಿರ್ಧರಿಸುತ್ತದೆ" ಎಂದು ಅವರು ಹೇಳಿದರು. 

ಹಿಂದೂ ನಿರಾಶ್ರಿತರ ಸಾಂದ್ರತೆ ಹೆಚ್ಚಿರುವ ಲೋಕಸಭಾ ಕ್ಷೇತ್ರವಾದ ಬೊಂಗಾಂವ್, ಉತ್ತರ 24 ಪರಗಣದಲ್ಲಿ ರ್ಯಾಲಿ ಉದ್ದೇಶಿಸಿ ಮಾತನಾಡಿದ ಮಮತಾ, ಕೇಸರಿ ಪಕ್ಷ "ಚುನಾವಣೆಯಲ್ಲಿ ಬರೀ ಸುಳ್ಳು ಭರವಸೆಗಳನ್ನು ನೀಡುವ ರಾಜಕೀಯ ಪಕ್ಷ" ಎಂದು ವಾಗ್ದಾಳಿ ನಡೆಸಿದರು.

"ನಾನು ಬೊರೊ ಮಾತೆಯರ ಚಿಕಿತ್ಸೆಯ ಎಲ್ಲಾ ಜವಾಬ್ದಾರಿಗಳನ್ನು ವಹಿಸಿಕೊಂಡಿದ್ದೇನೆ. ಮಾಟುವಾಸ್‌ಗಾಗಿ 10 ಕೋಟಿ ರೂ.ಗಳ ನಿಧಿಯೊಂದಿಗೆ ಅಭಿವೃದ್ಧಿ ಮಂಡಳಿಯನ್ನು ಸ್ಥಾಪಿಸಿದ್ದೇನೆ ಮತ್ತು ಪ್ರತ್ಯೇಕವಾಗಿ ವಿಶ್ವವಿದ್ಯಾಲಯವೊಂದು ನಿರ್ಮಾಣ ಮಾಡುತ್ತಿದ್ದೇವೆ'' ಎಂದರು ದೀದಿ ತಿಳಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT