ಕರ್ನಾಟಕದ ಪುರೋಹಿತರ ನೇತೃತ್ವದಲ್ಲಿ ನೂತನ ಸಂಸತ್ ಭವನದ ಶಿಲಾನ್ಯಾಸ ಕಾರ್ಯಕ್ರಮ 
ದೇಶ

ಕರ್ನಾಟಕದ ಹೆಮ್ಮೆ: ನೂತನ ಸಂಸತ್ ಭವನ ಶಿಲಾನ್ಯಾಸ, ಭೂಮಿ ಪೂಜೆ ನಡೆದಿದ್ದು ಶೃಂಗೇರಿ ಮಠದ ನೇತೃತ್ವದಲ್ಲಿ!

ಡಿ.10 ರಂದು ನೂತನ ಸಂಸತ್ ಭವನಕ್ಕಾಗಿ ಶಿಲಾನ್ಯಾಸ, ಭೂಮಿ ಪೂಜೆಯನ್ನು ಪ್ರಧಾನಿ ನರೇಂದ್ರ ಮೋದಿ ಅವರು ನೆರವೇರಿಸಿದ್ದು, ಕರ್ನಾಟಕ ಹೆಮ್ಮೆ ಪಡುವಂತಹ ಅಂಶ ಇದರಲ್ಲಿದೆ. 

ನವದೆಹಲಿ: ಡಿ.10 ರಂದು ನೂತನ ಸಂಸತ್ ಭವನಕ್ಕಾಗಿ ಶಿಲಾನ್ಯಾಸ, ಭೂಮಿ ಪೂಜೆಯನ್ನು ಪ್ರಧಾನಿ ನರೇಂದ್ರ ಮೋದಿ ಅವರು ನೆರವೇರಿಸಿದ್ದು, ಕರ್ನಾಟಕ ಹೆಮ್ಮೆ ಪಡುವಂತಹ ಅಂಶ ಇದರಲ್ಲಿದೆ. 

ಹೊಸ ಸಂಸತ್ ಭವನಕ್ಕೆ ಭೂಮಿ ಪೂಜೆ ಖಚಿತಗೊಳ್ಳುತ್ತಿದ್ದಂತೆಯೇ ಪ್ರಧಾನಿ ನರೇಂದ್ರ ಮೋದಿ ಅವರು ಇದರ ಸಂಪೂರ್ಣ ಜವಾಬ್ದಾರಿಯನ್ನು ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಷಿ ಅವರಿಗೆ ವಹಿಸಿ, ಶಾಸ್ತ್ರೋಕ್ತವಾಗಿ ಪೂಜೆ ನಡೆಯಬೇಕೆಂಬ ಅಭಿಪ್ರಾಯ ವ್ಯಕ್ತಪಡಿಸಿದ್ದರು. ಅದರಂತೆಯೇ ಪ್ರಹ್ಲಾದ್ ಜೋಷಿ ಅವರು ಶೃಂಗೇರಿಯ ಜಗದ್ಗುರುಗಳಾದ ಭಾರತೀ ತೀರ್ಥ ಸ್ವಾಮಿಗಳ ಬಳಿ ಪ್ರಧಾನಿ ಮೋದಿ ಅವರ ಈ ಇಂಗಿತವನ್ನು ಹೇಳಿದ್ದರು. 

ಶೃಂಗೇರಿ ಶ್ರೀಗಳು ಮಠದ ವಿದ್ವಾಂಸರೂ, ಕಿರಿಯ ಶ್ರೀಗಳಾದ ವಿಧುಶೇಖರ ಭಾರತೀ ಶ್ರೀಗಳಿಗೆ ಪೂರ್ವಾಶ್ರಮದಲ್ಲಿ ಗುರುಗಳೂ ಆಗಿದ್ದ ತಂಗಿರಾಲ ಶಿವಕುಮಾರ ಶರ್ಮ ಅವರೊಂದಿಗೆ ಲಕ್ಷ್ಮಿನಾರಾಯಣ ಸೋಮಯಾಜಿ, ಗಣೇಶ ಸೋಮಯಾಜಿ ಹಾಗೂ ನಾಗರಾಜ ಅಡಿಗ ಅವರನ್ನು ಸಂಸತ್ ಭವನದ ಶಿಲಾನ್ಯಾಸ ಕಾರ್ಯಕ್ರಮವನ್ನು ನಡೆಸುವುದಕ್ಕಾಗಿ ದೆಹಲಿಗೆ ಕಳಿಸಿದ್ದರು.

ದೆಹಲಿಯಲ್ಲಿರುವ ಶೃಂಗೇರಿ ಶಾಖಾ ಮಠದ ಇಬ್ಬರು ಪುರೋಹಿತರೊಂದಿಗೆ ಕರ್ನಾಟಕದಿಂದ ತೆರಳಿದ್ದ ವಿದ್ವಾಂಸರು, ಪುರೋಹಿತರ ನೇತೃತ್ವದಲ್ಲಿ ಡಿ.10 ರಂದು ಶಿಲಾನ್ಯಾಸ ನೆರವೇರಿದೆ.

ನೂತನ ಸಂಸತ್ ಭವನಕ್ಕೆ ಶ್ರೀಮಠದಿಂದ ಶಂಕು-ನವರತ್ನ ಪೀಠ: ಸಂಸತ್ ಭವನದ ಶಿಲಾನ್ಯಾಸ ಹಿನ್ನೆಲೆಯಲ್ಲಿ ಶೃಂಗೇರಿ ಶ್ರೀಗಳು ಶಂಕು, ಮಾಣಿಕ್ಯ, ಹವಳ, ಮುತ್ತು, ಪುಷ್ಯರಾಗ ರತ್ನ, ವಜ್ರ, ಗೋಮೇಧಕ, ಪಚ್ಚೆ, ನೀಲಮಣಿಯಿಂದ ತಯಾರಾದ ನವರತ್ನ ಪೀಠವನ್ನು ಕಳಿಸಿಕೊಟ್ಟಿದ್ದು, ಬೆಳ್ಳಿಯ ಇಟ್ಟಿಗೆಯೊಂದಿಗೆ ಇದನ್ನೂ ಇರಿಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕಾರು ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಸಾವು: ಸಿಎಂ, ಡಿಸಿಎಂ ಸಂತಾಪ

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ರಾಸಾಯನಿಕಗಳು, ಎಲೆಕ್ಟ್ರಾನಿಕ್ ಘಟಕಗಳ ಸುಲಭ ಲಭ್ಯತೆಯಿಂದ ಐಇಡಿ ಅಪಾಯ ಹೆಚ್ಚು: NSG

ಉಚ್ಚಾಟಿತ AIADMK ಹಿರಿಯ ನಾಯಕ ಸೆಂಗೊಟ್ಟೈಯನ್ ನಾಳೆ ವಿಜಯ್ ಭೇಟಿ; TVK ಸೇರುವ ಸಾಧ್ಯತೆ

ಶಾಂತಿ ಮಾತುಕತೆ ನಡೆಯುತ್ತಿರುವಾಗಲೇ ಉಕ್ರೇನ್‌ ಮೇಲೆ ರಷ್ಯಾ ದಾಳಿ; ಕನಿಷ್ಠ ಏಳು ಜನ ಸಾವು

SCROLL FOR NEXT