ನಿನ್ನೆ ಸಿಂಘು ಗಡಿಯಲ್ಲಿ ಮಾಧ್ಯಮ ಪ್ರತಿನಿಧಿಗಳನ್ನುದ್ದೇಶಿಸಿ ಮಾತನಾಡಿದ ರೈತ ಸಂಘಟನೆ ಮುಖಂಡರು 
ದೇಶ

ಸಂಘಟನೆಗಳ ಮಧ್ಯೆ ಭಿನ್ನಾಭಿಪ್ರಾಯವಿಲ್ಲ, ಎಲ್ಲರೂ ಒಮ್ಮತದಿಂದ ತೀರ್ಮಾನ ಕೈಗೊಳ್ಳುತ್ತೇವೆ: ರೈತ ಮುಖಂಡರು

ನಾವು ರೈತ ಸಂಘಟನೆಯವರೆಲ್ಲರೂ ಅವಿರೋಧವಾಗಿ ತೀರ್ಮಾನ ತೆಗೆದುಕೊಳ್ಳುತ್ತೇವೆ. ಇಲ್ಲಿ ಎಲ್ಲರದ್ದೂ ಸಹಮತ ಮುಖ್ಯವಾಗುತ್ತದೆಯೇ ಹೊರತು ಬಹುಮತವಲ್ಲ ಎಂದು ರೈತ ಮುಖಂಡ ಶಿವಕುಮಾರ್ ಕಕ್ಕ ಹೇಳಿದ್ದಾರೆ. 

ನವದೆಹಲಿ: ನಾವು ರೈತ ಸಂಘಟನೆಯವರೆಲ್ಲರೂ ಅವಿರೋಧವಾಗಿ ತೀರ್ಮಾನ ತೆಗೆದುಕೊಳ್ಳುತ್ತೇವೆ. ಇಲ್ಲಿ ಎಲ್ಲರದ್ದೂ ಸಹಮತ ಮುಖ್ಯವಾಗುತ್ತದೆಯೇ ಹೊರತು ಬಹುಮತವಲ್ಲ ಎಂದು ರೈತ ಮುಖಂಡ ಶಿವಕುಮಾರ್ ಕಕ್ಕ ಹೇಳಿದ್ದಾರೆ. 

ಕೇಂದ್ರ ಸರ್ಕಾರದ ಸುಧಾರಿತ ಮೂರು ಕೃಷಿ ಮಸೂದೆಗಳನ್ನು ರೈತ ಸಂಘಟನೆಗಳು ಸಂಪೂರ್ಣವಾಗಿ ತಿರಸ್ಕರಿಸಿರುವುದರ ಕುರಿತು ಮತ್ತು ರೈತ ಸಂಘಟನೆಗಳ ಮಧ್ಯೆ ಭಿನ್ನಾಭಿಪ್ರಾಯಗಳಿವೆ ಎಂಬ ವದಂತಿ ಕುರಿತು ಈ ಸ್ಪಷ್ಟನೆ ನೀಡಿದ್ದಾರೆ.

ದೆಹಲಿಯಲ್ಲಿ ಸುದ್ದಿಗಾರರ ಮುಂದೆ ಮಾತನಾಡಿದ ಅವರು, ರೈತ ಸಂಘಟನೆಗಳ ಮಧ್ಯೆ ಕೆಲವು ಮಾಧ್ಯಮಗಳಲ್ಲಿ ವರದಿಯಾಗಿರುವಂತೆ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ ಎಂದಿದ್ದಾರೆ. ನಿನ್ನೆ ಅಪರಾಹ್ನ ಎಲ್ಲಾ ರೈತ ಪ್ರತಿನಿಧಿಗಳು ನಡೆಸಿದ ಸಭೆಯಲ್ಲಿ ಮೂರು ಸುಧಾರಿತ ಕೃಷಿ ಮಸೂದೆಗಳನ್ನು ಸರ್ಕಾರ ಹಿಂಪಡೆದು ಕನಿಷ್ಠ ಬೆಂಬಲ ಬೆಲೆಯ ಬಗ್ಗೆ ನಿರ್ದಿಷ್ಟ ಕಾನೂನನ್ನು ಜಾರಿಗೆ ತರಬೇಕೆಂದು ಸರ್ಕಾರವನ್ನು ಒತ್ತಾಯಿಸಲು ತೀರ್ಮಾನಿಸಲಾಯಿತು.

ನಾವೆಲ್ಲರೂ ಅವಿರೋಧವಾಗಿ ತೀರ್ಮಾನ ಕೈಗೊಳ್ಳುತ್ತೇವೆ. ಇದು ಸಹಮತದ ವಿಷಯವೇ ಹೊರತು ಇಲ್ಲಿ ಬಹುಮತ ಬರುವುದಿಲ್ಲ. ಕೆಲವರು ಮಾತ್ರ ಇದಕ್ಕೆ ಒಪ್ಪುವುದು, ಇನ್ನು ಕೆಲವರು ಒಪ್ಪುವುದಿಲ್ಲ ಎಂಬ ಪ್ರಶ್ನೆ ಇಲ್ಲಿಲ್ಲ. ಎಲ್ಲಾ ಸಂಘಟನೆಗಳು ಮಸೂದೆಗಳನ್ನು ಹಿಂಪಡೆಯಬೇಕೆಂದು ಸರ್ಕಾರವನ್ನು ಒತ್ತಾಯಿಸಲು ತೀರ್ಮಾನಿಸಿದರೆ ಅದುವೇ ನಮ್ಮ ಕೊನೆಯ ನಿರ್ಧಾರವಾಗುತ್ತದೆ. ಇಲ್ಲಿ ವೈಯಕ್ತಿಕ ಅಭಿಪ್ರಾಯವಿಲ್ಲ ಎಂದು ಕಕ್ಕ ಹೇಳಿದರು.

ಕಳೆದ 5 ಸುತ್ತಿನ ಸರ್ಕಾರ ಮತ್ತು ರೈತ ಸಂಘಟನೆಗಳ ಮಧ್ಯೆ ನಡೆದ ಸಭೆಯಲ್ಲಿ ಒಂದೇ ವಿಷಯವನ್ನು ಸರ್ಕಾರ ನಮ್ಮ ಮುಂದಿಟ್ಟಿದ್ದು, ಕೊನೆಗೆ ನಾವು ಯಸ್ ಅಥವಾ ನೋ ಎಂದು ಹೇಳುತ್ತೀರೋ ಎಂದು ಕೇಳಿದವು. ಅದು ಮೂರು ಮಸೂದೆಗಳನ್ನು ಹಿಂಪಡೆದು, ಕನಿಷ್ಠ ಬೆಂಬಲ ಬೆಲೆ ನಿಗದಿಪಡಿಸುವುದೋ ಅಥವಾ ಅಲ್ಲವೋ ಎಂದು ಕೇಳಿದೆವು ಎಂದು ಕಕ್ಕ ಸರ್ಕಾರದ ಪ್ರತಿನಿಧಿಗಳ ಜೊತೆ ಇಷ್ಟರವರೆಗೆ ನಡೆದ ಸಭೆಯ ಬಗ್ಗೆ ತಿಳಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT