ಗುರುವಾಯೂರ್ ದೇವಾಲಯ 
ದೇಶ

ಕೋವಿಡ್ ಹಿನ್ನೆಲೆ: 2 ವಾರಗಳ ಕಾಲ ಗುರುವಾಯೂರ್ ಕೃಷ್ಣನ ದರ್ಶನಕ್ಕೆ ಬ್ರೇಕ್

ವಿಶ್ವ ಪ್ರಸಿದ್ಧ ಗುರುವಾಯೂರ್ ಶ್ರೀಕೃಷ್ಣ ದೇವಾಲಯಕ್ಕೆ ಶನಿವಾರದಿಂದ ಎರಡು ವಾರಗಳವರೆಗೆ ಭಕ್ತರಿಗೆ ನಿರ್ಬಂಧ ಹೇರಲಾಗುತ್ತಿದೆ. ಏಕೆಂದರೆ ದೇವಾಲಯದ ಸುತ್ತಮುತ್ತಲಿನ ಪ್ರದೇಶವನ್ನು ತ್ರಿಶೂರ್ ಜಿಲ್ಲಾಡಳಿತವು ಕೋವಿಡ್-19 ಬಾಧಿತ ವಲಯವೆಂದು ಘೋಷಿಸಿದೆ.

ತ್ರಿಶೂರ್: ವಿಶ್ವ ಪ್ರಸಿದ್ಧ ಗುರುವಾಯೂರ್ ಶ್ರೀಕೃಷ್ಣ ದೇವಾಲಯಕ್ಕೆ ಶನಿವಾರದಿಂದ ಎರಡು ವಾರಗಳವರೆಗೆ ಭಕ್ತರಿಗೆ ನಿರ್ಬಂಧ ಹೇರಲಾಗುತ್ತಿದೆ. ಏಕೆಂದರೆ ದೇವಾಲಯದ ಸುತ್ತಮುತ್ತಲಿನ ಪ್ರದೇಶವನ್ನು ತ್ರಿಶೂರ್ ಜಿಲ್ಲಾಡಳಿತವು ಕೋವಿಡ್-19 ಬಾಧಿತ ವಲಯವೆಂದು ಘೋಷಿಸಿದೆ.

ಶುಕ್ರವಾರ ನಡೆದ ಗುರುವಾಯೂರ್ ದೇವಸ್ವಂ ಆಡಳಿತ ಸಮಿತಿಯ ತುರ್ತು ಸಭೆಯಲ್ಲಿ ಶನಿವಾರದಿಂದ ಎರಡು ವಾರ ಕಾಲ ದೇವಾಲಯಕ್ಕೆ ಭಕ್ತರ ಪ್ರವೇಶ ನಿರ್ಬಂಧಕ್ಕೆ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ದೇವಾಲಯದ ಮೂಲಗಳ ಪ್ರಕಾರ, ಆಲಯದ 22 ಉದ್ಯೋಗಿಗಳು ಶುಕ್ರವಾರ ಸೋಂಕಿಗೆ ಪಾಸಿಟಿವ್ ವರದಿ ಪಡೆದಿದ್ದಾರೆ.

ಗುರುವಾಯೂರ್ ಇರುವ ತ್ರಿಶೂರ್ ಜಿಲ್ಲೆಯಲ್ಲಿ ಶುಕ್ರವಾರ 272 ಹೊಸ ಕೋವಿಡ್ ಪ್ರಕರಣಗಳು ವರದಿಯಾಗಿದ್ದು ಗುರುವಾರ 393 ಪ್ರಕರಣಗಳು ವರದಿಯಾಗಿವೆ.

ಸಾರ್ವಜನಿಕ ದರ್ಶನ ನಿರ್ಬಂಧಿಸುವ ನಿರ್ಧಾರವನ್ನು ಪ್ರಕಟಿಸಿದ ದೇವಸ್ವಂ ಪತ್ರಿಕಾ ಪ್ರಕಟಣೆಯಲ್ಲಿ ಎಂದಿನಂತೆ ದೇವಾಲಯ ಸಂಕೀರ್ಣದಲ್ಲಿ ಎಲ್ಲಾ ನಿಯಮಿತ ಪೂಜೆಗಳು ಮತ್ತು ಮೂಲ ವಿಧಿಗಳನ್ನು ನೆರವೇರಿಸಲಾಗುವುದು. ಡಿಸೆಂಬರ್ 12 ರಿಂದ ವರ್ಚುವಲ್ ಕ್ಯೂ ಮತ್ತು ನೇರ ದರ್ಶನ ಮತ್ತು ಸಮೀಪದ ದೀಪಸ್ಥಂಭ ದರ್ಶನ, ತುಲಾಭಾರ ಹಾಗೂ ಇನ್ನಿತರೆ ಸೇವೆಗಳನ್ನು ರದ್ದುಪಡಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಶನಿವಾರ ನಿಗದಿಯಾಗಿರುವ ಮದುವೆಗಾಗಿ ಈಗಾಗಲೇ ದೇವಸ್ಥಾನವನ್ನು ತಲುಪಿದ ಕುಟುಂಬದವರಿಗೆ ಕಟ್ಟುನಿಟ್ಟಾದ ಕೋವಿಡ್ ಪ್ರೊಟೋಕಾಲ್‌ಗೆ ಅನುಸಾರವಾಗಿ ಸಮಾರಂಭವನ್ನು ನಡೆಸಲು ಅವಕಾಶ ನೀಡಲಾಗುವುದು. ಆದರೆ, ಶನಿವಾರದ ನಂತರ, ಎರಡು ವಾರಗಳವರೆಗೆ ಯಾವುದೇ ಮದುವೆಗೆ ಅವಕಾಶ ನೀಡುವುದಿಲ್ಲ ಎಂದು ದೇವಾಲಯದ ಅಧಿಕಾರಿಗಳು ತಿಳಿಸಿದ್ದಾರೆ.

ಮುಂದಿನ ಮೂರು ದಿನಗಳಲ್ಲಿ ಎಲ್ಲಾ ದೇವಸ್ವಂ ಅಧಿಕಾರಿಗಳನ್ನು ಪ್ರತಿಜನಕ ಅಥವಾ ಆರ್‌ಟಿ-ಪಿಸಿಆರ್ ಪರೀಕ್ಷೆಗೆ ಒಳಪಡಿಸಲು ಸಭೆಯಲ್ಲಿ ತೀರ್ಮಾನಿಸಲಾಗಿದೆ. ಆ ನಂತರದಲ್ಲಿ ಇಂತಹಾ ಪರೀಕ್ಷೆಗಳು ತಿಂಗಳಿಗೊಮ್ಮೆ ನಡೆಯಲಿದೆ. ಗುರುವಾಯೂರ್ ದೇವಸ್ವಂನ ಒಟ್ಟು 153 ಉದ್ಯೋಗಿಗಳು ಶುಕ್ರವಾರ ಪ್ರತಿಜನಕ ಪರೀಕ್ಷೆಯನ್ನು ತೆಗೆದುಕೊಂಡರು ಮತ್ತು ಅವರಲ್ಲಿ 22 ಮಂದಿ ವೈರಲ್ ಸೋಂಕಿಗೆ ಪಾಸಿಟಿವ್ ವರದಿ ಪಡೆದಿದ್ದಾರೆ ಎಂದು ದೇವಾಲಯದ ಮೂಲಗಳು ತಿಳಿಸಿವೆ.

ರಾಜ್ಯ ಹಾಗೂ ಹೊರರಾಜ್ಯಗಳಿಂದ ಭಕ್ತರನ್ನು ಆಕರ್ಷಿಸುವ ಭಗವಾನ್ ಕೃಷ್ಣ ದೇವಸ್ಥಾನವನ್ನು ಈ ಹಿಂದೆ ರಾಷ್ಟ್ರವ್ಯಾಪಿ ಲಾಕ್ ಡೌನ್ ಆದಾಗ ಮಾರ್ಚ್ 24 ರಂದು ಮೊದಲ ಬಾರಿಗೆ ಮುಚ್ಚಲಾಗಿತ್ತು. ಇದನ್ನು ಜೂನ್‌ನಲ್ಲಿ ಐದು ದಿನಗಳವರೆಗೆ ಪುನಃ ತೆರೆಯಲಾಯಿತು ಆದರೆ ಆಗ ತ್ರಿಶೂರ್ ನಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಾದ ಕಾರಣ ಮತ್ತೆ ಮುಚ್ಚಲಾಯಿತು. ದರ್ಶನಕ್ಕಾಗಿ ಆನ್‌ಲೈನ್ ನೋಂದಣಿಯ ನಂತರ ಸೆಪ್ಟೆಂಬರ್ 10 ರಿಂದ ಕಟ್ಟುನಿಟ್ಟಾದ ಕೋವಿಡ್ -19 ಪ್ರೋಟೋಕಾಲ್‌ನೊಂದಿಗೆ ಭಕ್ತರಿಗೆ ಅವಕಾಶ ನೀಡಲಾಗುತ್ತಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

IPL 2026: ಬರೊಬ್ಬರಿ 40 ಮಿಲಿಯನ್ ಫಾಲೋವರ್ಸ್ ಇದ್ದ Insta ಖಾತೆ ಡಿಲೀಟ್ ಮಾಡಿದ Hardik Pandya

IPL 2026 Eliminator: ವಿಶ್ವದಾಖಲೆಯ ಹೊಸ್ತಿಲಲ್ಲಿ ಎಡವಿದ Vaibhav Suryavanshi, ಮತ್ತೊಂದು ರೆಕಾರ್ಡ್ ಜಸ್ಟ್ ಮಿಸ್!

SCROLL FOR NEXT