ಅಶೋಕ್ ಗೆಹ್ಲೋಟ್ 
ದೇಶ

ಪಂಚಾಯತಿ ಚುನಾವಣೆಯಲ್ಲಿ ಕಾಂಗ್ರೆಸ್ ನಿಂದ ಮೋಸ: ಗೆಹ್ಲೋಟ್ ಸರ್ಕಾರಕ್ಕೆ ನೀಡಿದ್ದ ಬೆಂಬಲ ವಾಪಸ್ ಪಡೆದ ಬಿಟಿಪಿ 

ಪಂಚಾಯಿತಿ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ತಮಗೆ ವಂಚನೆ ಆಗಿದೆ ಎಂದು ಆರೋಪಿಸಿರುವ ಬಿಟಿಪಿ ರಾಜಸ್ಥಾನದಲ್ಲಿ ಸಿಎಂ ಅಶೋಕ್‌ ಗೆಹ್ಲೋಟ್‌ ನೇತೃತ್ವದ ಕಾಂಗ್ರೆಸ್ ಸರ್ಕಾರಕ್ಕೆ ನೀಡಿದ್ದ ಬೆಂಬಲವನ್ನು ಭಾರತೀಯ ಟ್ರಿಬಲ್‌ ಪಕ್ಷ  ಹಿಂಪಡೆದುಕೊಂಡಿದೆ

ಜೈಪುರ: ಪಂಚಾಯಿತಿ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ತಮಗೆ ವಂಚನೆ ಆಗಿದೆ ಎಂದು ಆರೋಪಿಸಿರುವ ಬಿಟಿಪಿ ರಾಜಸ್ಥಾನದಲ್ಲಿ ಸಿಎಂ ಅಶೋಕ್‌ ಗೆಹ್ಲೋಟ್‌ ನೇತೃತ್ವದ ಕಾಂಗ್ರೆಸ್ ಸರ್ಕಾರಕ್ಕೆ ನೀಡಿದ್ದ ಬೆಂಬಲವನ್ನು ಭಾರತೀಯ ಟ್ರಿಬಲ್‌ ಪಕ್ಷ  ಹಿಂಪಡೆದುಕೊಂಡಿದೆ. 

ಇಲ್ಲಿನ ದುಂಗಾರ್‌ಪುರ್‌ನಲ್ಲಿ ಜಿಲ್ಲಾ ಪಂಚಾಯತ್‌ ಚುನಾವಣೆ ವೇಳೆ ಕಾಂಗ್ರೆಸ್‌ ಪಕ್ಷದ ಅಭ್ಯರ್ಥಿಗಳು ಬಿಜೆಪಿಗೆ ಸೇರಿ ಬಿಟಿಪಿ ಪಕ್ಷಕ್ಕೆ ಅಧಿಕಾರ ತಪ್ಪಿಸಿದ್ದರಿಂದ ಬಿಟಿಪಿಯ ವರಿಷ್ಠರು ಕಾಂಗ್ರೆಸ್‌ ಸರ್ಕಾರಕ್ಕೆ ನೀಡಿದ್ದ ಬೆಂಬಲವನ್ನು ವಾಪಸ್ ಪಡೆದಿದ್ದಾರೆ ಎನ್ನಲಾಗಿದೆ.

ಜಿಲ್ಲಾ ಮುಖ್ಯಸ್ಥರ ಹುದ್ದೆಗೆ ಸ್ವತಂತ್ರವಾಗಿ ನಾಮಪತ್ರ ಸಲ್ಲಿಸುವ ಮೂಲಕ ಚುನಾವಣೆಯಲ್ಲಿ ಸ್ಪರ್ಧಿಸಿದ ಬಿಜೆಪಿಯ ಸೂರ್ಯ ಅಹಾರಿ, ಕಾಂಗ್ರೆಸ್ ಬೆಂಬಲದೊಂದಿಗೆ ಬಿಟಿಪಿ ಬೆಂಬಲಿತ ಪಾರ್ವತಿಯನ್ನು ಒಂದೇ ಮತದಿಂದ ಸೋಲಿಸಿ ಜಿಲ್ಲಾ ಅಧ್ಯಕ್ಷರ ಹುದ್ದೆಯಲ್ಲಿ ಗೆಲುವು ಸಾಧಿಸಿದರು.

ಗೆಹ್ಲೋಟ್‌ ಸರ್ಕಾರ ಇಕ್ಕಟ್ಟಿನಲ್ಲಿ ಇದ್ದಾಗ ಸಹಾಯ ಮಾಡಿದೆವು. ಆದರೆ ಅವರು ನಮಗೆ ಮೋಸ ಮಾಡಿದರು ಎಂದು ಬಿಟಿಪಿ ಮುಖಂಡರು ಆರೋಪಿಸಿದ್ದಾರೆ.  200 ಸದಸ್ಯ ಬಲದ ರಾಜಸ್ಥಾನ ವಿಧಾನಸಭೆಯಲ್ಲಿ ಕಾಂಗ್ರೆಸ್‌ 105 ಸ್ಥಾನಗಳನ್ನು ಹೊಂದಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ.50 ರಷ್ಟು ಸುಂಕ ನಾಳೆ ಜಾರಿ: ಕರಡು ಸೂಚನೆ ಹೊರಡಿಸಿದ ಅಮೆರಿಕ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

SCROLL FOR NEXT