ಕಾರ್ತಿ ಚಿದಂಬರಂ ಚಿತ್ರ 
ದೇಶ

ಕಾರ್ತಿ ಚಿದಂಬರಂ ದಂಪತಿ ವಿರುದ್ಧ ಆದಾಯ ತೆರಿಕೆ ಇಲಾಖೆ ಕ್ರಮಕ್ಕೆ ಹೈಕೋರ್ಟ್ ತಡೆ

ಸಂಸದ ಕಾರ್ತಿ ಚಿದಂಬರಂ ದಂಪತಿ ವಿರುದ್ಧ ಆದಾಯ ತೆರಿಗೆ ಇಲಾಖೆ ಜರುಗಿಸಬೇಕಿದ್ದ ಕ್ರಮಗಳಿಗೆ ಮದ್ರಾಸ್ ಹೈಕೋರ್ಟ್ ತಡೆ ನೀಡಿದೆ. 

ಸಂಸದ ಕಾರ್ತಿ ಚಿದಂಬರಂ ದಂಪತಿ ವಿರುದ್ಧ ಆದಾಯ ತೆರಿಗೆ ಇಲಾಖೆ ಜರುಗಿಸಬೇಕಿದ್ದ ಕ್ರಮಗಳಿಗೆ ಮದ್ರಾಸ್ ಹೈಕೋರ್ಟ್ ತಡೆ ನೀಡಿದೆ. 

ಚೆನ್ನೈ ಬಳಿ ಇದ್ದ ಆಸ್ತಿಯ ಮಾರಾಟಕ್ಕೆ ಸಂಬಂಧಿಸಿದ 7 ಕೋಟಿ ಮೌಲ್ಯದ ಹಣಕಾಸು ವಹಿವಾಟನ್ನು ಮರೆ ಮಾಚಿ ಆದಾಯ ತೆರಿಗೆ ಪಾವತಿ ಮಾಡಿಲ್ಲ ಎಂದು ಆದಾಯ ತೆರಿಗೆ ಇಲಾಖೆ ಕಾರ್ತಿ ದಂಪತಿ ವಿರುದ್ಧ ಕ್ರಮ ಜರುಗಿಸಲು ಮುಂದಾಗಿತ್ತು.

ಇದನ್ನು ಪ್ರಶ್ನಿಸಿ ಕೋರ್ಟ್ ಮೊರೆ ಹೋಗಿದ್ದ ಕಾರ್ತಿ ಚಿದಂಬರಂ ದಂಪತಿಗೆ ತಾತ್ಕಾಲಿಕ ರಿಲೀಫ್ ನೀಡಿರುವ ಮದ್ರಾಸ್ ಹೈಕೋರ್ಟ್, ಈಗಲೇ ಕ್ರಮ ಜರುಗಿಸುವುದು ಸೂಕ್ತವಲ್ಲ, ಅಕಾಲಿಕವಾದ ಕ್ರಮವಾಗಿದ್ದು, ಸಂಬಂಧಪಟ್ಟ ಅಧಿಕಾರಿಗಳು ಸರಿಯಾದ ಮೌಲ್ಯಮಾಪನ ಮಾಡಿದ ಬಳಿಕವೂ ಕ್ರಮ ಜರುಗಿಸುವುದು ಅಗತ್ಯವಾದಲ್ಲಿ ಕ್ರಮ ಕೈಗೊಳ್ಳಬಹುದು ಎಂದು ಹೇಳಿದೆ. 

ತಮ್ಮ ವಿರುದ್ಧ ಐಟಿ-ಇಲಾಖೆ ಜರುಗಿಸಿದ್ದ ಕ್ರಮವನ್ನು ರದ್ದುಗೊಳಿಸಬೇಕೆಂದು ಕಾರ್ತಿ ಚಿದಂಬರಂ ದಂಪತಿ ಕೋರ್ಟ್ ಮೆಟ್ಟಿಲೇರಿದ್ದರು. ಆದಾಯ ತೆರಿಗೆ ಕಾಯ್ದೆಯಡಿ ಮೌಲ್ಯಮಾಪನ ಮಾಡುವ ಅಧಿಕಾರಿ ಕೈಗೊಳ್ಳುವ ಕ್ರಮಗಳು ಸಿವಿಲ್ ಕೋರ್ಟ್ ಕೈಗೊಳ್ಳುವ ಕ್ರಮಗಳಿಗೆ ಸಮನಾಗಿದೆ.  ಆದ್ದರಿಂದ ಕಾರ್ತಿ ಚಿದಂಬರಂ ದಂಪತಿ ವಿರುದ್ಧ ಆ ಅಧಿಕಾರಿಯೇ ಕ್ರಮ ಜರುಗಿಸಬೇಕಿತ್ತು. ಆದರೆ ಈ ಪ್ರಕರಣದಲ್ಲಿ ತನಿಖೆಯ ಉಪನಿರ್ದೇಶಕ ಕಾನೂನು ಕ್ರಮ ಜರುಗಿಸಿದ್ದಾರೆ. ಇದು ಸೂಕ್ತವಲ್ಲ ಎಂದು ಕಾರ್ತಿ ಚಿದಂಬರಂ ವಾದಿಸಿದ್ದರು. ಕೋರ್ಟ್ ಇದನ್ನು ಮಾನ್ಯ ಮಾಡಿದ್ದು ಕಾನೂನು ಪ್ರಕಾರವೇ ಕಾನೂನು ಕ್ರಮಗಳನ್ನು ಕೈಗೊಳ್ಳಬೇಕೆಂದು ಹೇಳಿದೆ.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಉಕ್ರೇನ್ ವಿರುದ್ಧ ರಷ್ಯಾದ ದೀರ್ಘ ಸಂಘರ್ಷಕ್ಕೆ ಭಾರತವೇ ಕಾರಣ, ಇದು 'ಮೋದಿ ಯುದ್ಧ': White House ವ್ಯಾಪಾರ ಸಲಹೆಗಾರ ಪೀಟರ್ ನವರೊ

ಅಮೆರಿಕದ ಸುಂಕ: ಜವಳಿ ವಲಯದ ಒತ್ತಡ ಕಡಿಮೆ ಮಾಡಲು 40 ಪ್ರಮುಖ ಆಮದು ದೇಶ ಗುರುತು

ಭೀಕರ ಮಳೆಗೆ ಜಮ್ಮು-ಕಾಶ್ಮೀರ ತತ್ತರ: ಸಾವಿನ ಸಂಖ್ಯೆ 41ಕ್ಕೆ ಏರಿಕೆ; ಕೇಂದ್ರದಿಂದ ನೆರವಿನ ಭರವಸೆ; ಮುಂದುವರೆದ ರಕ್ಷಣಾ ಕಾರ್ಯಾಚರಣೆ

ಭಾರತದ ಮೇಲೆ ಅಮೆರಿಕಾ ಸುಂಕಾಸ್ತ್ರ: ದೇಶ ರಕ್ಷಿಸುವಲ್ಲಿ ಪ್ರಧಾನಿ ಮೋದಿ ವಿಫಲ; AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ

ಜಮ್ಮು-ಕಾಶ್ಮೀರದ ಬಂಡಿಪೋರಾದಲ್ಲಿ ಗುಂಡಿನ ಚಕಮಕಿ: ಇಬ್ಬರು ಉಗ್ರರ ಹತ್ಯೆ

SCROLL FOR NEXT