ದೇಶ

ಗಣರಾಜ್ಯೋತ್ಸವ ದಿನಾಚರಣೆ: ಉತ್ತರ ಪ್ರದೇಶದಿಂದ ಅಯೋಧ್ಯ ರಾಮ ಮಂದಿರದ ಸ್ತಬ್ಧ ಚಿತ್ರ ಪ್ರದರ್ಶನ

Srinivas Rao BV

ಲಖನೌ: ಭಾರತ 72 ನೇ ಗಣರಾಜ್ಯೋತ್ಸವ ದಿನಾಚರಣೆಗೆ ಸಿದ್ಧತೆ ನಡೆಸುತ್ತಿದೆ. ರಾಜ್ಯಗಳಿಂದ ಪ್ರದರ್ಶಿಸಲ್ಪಡುವ ಸ್ತಬ್ಧ ಚಿತ್ರಗಳೂ ತಯಾರಾಗುತ್ತಿದ್ದು, ಉತ್ತರ ಪ್ರದೇಶ ರಾಜ್ಯ ಅಯೋಧ್ಯೆ ಶ್ರೀರಾಮ ಮಂದಿರದ ಸ್ತಬ್ಧ ಚಿತ್ರವನ್ನು ಪ್ರದರ್ಶಿಸಲಿದೆ. 

ಅಯೋಧ್ಯೆಯ ಮಂದಿರವಷ್ಟೇ ಅಲ್ಲದೇ ಅಲ್ಲಿನ ಹಾಗೂ ದೇವಾಲಯದ ಸಂಸ್ಕೃತಿ-ಸಂಪ್ರದಾಯಗಳನ್ನೂ ಸ್ತಬ್ಧ ಚಿತ್ರದಲ್ಲಿ ವಿವರಿಸಲಾಗುತ್ತದೆ.

ಈ ಬಗ್ಗೆ ಸರ್ಕಾರದಿಂದ ಅಧಿಕೃತ ಮಾಹಿತಿ ಲಭ್ಯವಾಗಿದ್ದು, ಅಯೋಧ್ಯ: ಉತ್ತರ ಪ್ರದೇಶದ ಸಾಂಸ್ಕೃತಿಕ ಪರಂಪರೆ ಎಂಬ ಥೀಮ್ ನಡಿಯಲ್ಲಿ ಟ್ಯಾಬ್ಲೋ ಪ್ರದರ್ಶನವಾಗಲಿದೆ. ಅಯೋಧ್ಯೆಯ ದೀಪೋತ್ಸವವೂ ಈ ಸ್ತಬ್ಧ ಚಿತ್ರದಲ್ಲಿ ಕಾಣಬಹುದಾಗಿದೆ. ಗಣಾರಾಜ್ಯೋತ್ಸವದ ಪರೇಡ್ ಗೆ ಸಂಬಂಧಿಸಿದಂತೆ ದೆಹಲಿಯಲ್ಲಿ ನಡೆದ ಸಭೆಯಲ್ಲಿ ಇದಕ್ಕೆ ಅನುಮೋದನೆ ಸಹ ಲಭಿಸಿದೆ.

ಒಡಿಶಾದ ಟ್ಯಾಬ್ಲೋ ಜೊತೆಗೆ ಉತ್ತರ ಪ್ರದೇಶದ ಟ್ಯಾಬ್ಲೋ ಕಾಣಸಿಗಲಿದೆ. 

SCROLL FOR NEXT