ರೈತರ ಪ್ರತಿಭಟನೆ 
ದೇಶ

ಮುಂದಿನ ಮಾತುಕತೆ ದಿನಾಂಕ ನಿಗದಿಗೆ ರೈತರೊಂದಿಗೆ ಸಂಪರ್ಕ: ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್

ಕೇಂದ್ರದ ಮೂರು ಕೃಷಿ ಕಾನೂನುಗಳ ವಿರುದ್ಧ ರೈತ ಒಕ್ಕೂಟಗಳು ತಮ್ಮ ಆಂದೋಲನವನ್ನು ತೀವ್ರಗೊಳಿಸಿವೆ. ಇನ್ನು ಇಂದು ಒಂದು ದಿನದ ಉಪವಾಸ ಸತ್ಯಾಗ್ರಹ ನಡೆಸಿ ಕೇಂದ್ರ ಸರ್ಕಾರಕ್ಕೆ ತಮ್ಮ ಶಕ್ತಿ ಪ್ರದರ್ಶಿಸಿದ್ದವು.

ನವದೆಹಲಿ: ಕೇಂದ್ರದ ಮೂರು ಕೃಷಿ ಕಾನೂನುಗಳ ವಿರುದ್ಧ ರೈತ ಒಕ್ಕೂಟಗಳು ತಮ್ಮ ಆಂದೋಲನವನ್ನು ತೀವ್ರಗೊಳಿಸಿವೆ. ಇನ್ನು ಇಂದು ಒಂದು ದಿನದ ಉಪವಾಸ ಸತ್ಯಾಗ್ರಹ ನಡೆಸಿ ಕೇಂದ್ರ ಸರ್ಕಾರಕ್ಕೆ ತಮ್ಮ ಶಕ್ತಿ ಪ್ರದರ್ಶಿಸಿದ್ದವು.

ಇದರ ನಡುವೆ ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಅವರು, ಮುಂದಿನ ಮಾತುಕತೆಯ ದಿನಾಂಕವನ್ನು ನಿರ್ಧರಿಸಲು ಕೇಂದ್ರ ಸರ್ಕಾರ ರೈತ ಮುಖಂಡರೊಂದಿಗೆ ಸಂಪರ್ಕದಲ್ಲಿರುವುದಾಗಿ ತಿಳಿಸಿದ್ದಾರೆ.

"ಸಭೆ ಖಂಡಿತವಾಗಿಯೂ ನಡೆಯಲಿದೆ. ನಾವು ರೈತರೊಂದಿಗೆ ಸಂಪರ್ಕದಲ್ಲಿದ್ದೇವೆ ಎಂದು ತೋಮರ್ ಹೇಳಿದ್ದಾರೆ. ಸರ್ಕಾರ ಯಾವಾಗ ಬೇಕಾದರೂ ಚರ್ಚೆಗೆ ಸಿದ್ಧವಾಗಿದೆ. ರೈತ ಮುಖಂಡರು ಮುಂದಿನ ಸಭೆಗೆ ಸಿದ್ಧರಾದಾಗ "ನಿರ್ಧರಿಸಿ ತಿಳಿಸಬೇಕು" ಎಂದು ಅವರು ಹೇಳಿದರು.

ಆಹಾರ ಸಚಿವ ಪಿಯೂಷ್ ಗೋಯಲ್ ಮತ್ತು ವಾಣಿಜ್ಯ ಮತ್ತು ಕೈಗಾರಿಕಾ ರಾಜ್ಯ ಸಚಿವ ಸೋಮ್ ಪ್ರಕಾಶ್ ಜೊತೆ ಸೇರಿ ತೋಮರ್ 40 ರೈತ ಸಂಘಗಳೊಂದಿಗೆ ಮಾತುಕತೆ ನಡೆಸುತ್ತಿದ್ದಾರೆ. ಇನ್ನು ಕೇಂದ್ರ ಮತ್ತು 40 ರೈತ ಸಂಘಗಳ ಮುಖಂಡರ ನಡುವಿನ ಐದು ಸುತ್ತಿನ ಮಾತುಕತೆ ಅನಿರ್ದಿಷ್ಟವಾಗಿದೆ.

ಕೇಂದ್ರ ಸರ್ಕಾರವು ಕನಿಷ್ಟ ಬೆಂಬಲ ಬೆಲೆ(ಎಂಎಸ್‌ಪಿ) ವ್ಯವಸ್ಥೆಯನ್ನು ಪರಿಗಣಿಸಿ ಮುಂದುವರೆಸಿರುವುದಾಗಿ ಲಿಖಿತ ಭರವಸೆಯೊಂದಿಗೆ ಕರಡು ಪ್ರಸ್ತಾವನೆಯನ್ನು ಕಳುಹಿಸಿತ್ತು. ಆದರೆ ರೈತ ಸಂಘಗಳು ಅದನ್ನು ತಿರಸ್ಕರಿಸಿದ್ದು ಹೊಸ ಮೂರು ಕೃಷಿ ಕಾಯ್ದೆಯನ್ನು ರದ್ದುಗೊಳಿಸಲೇಬೇಕು ಒತ್ತಾಯಿಸಿವೆ. 

ಆದರೆ ಕೇಂದ್ರ ಸರ್ಕಾರ ಮಾತ್ರ ಕಾಯ್ದೆ ರದ್ದು ಮಾಡುವ ಸಾಧ್ಯತೆಯನ್ನು ತಳ್ಳಿಹಾಕಿದ್ದು, ಸರ್ಕಾರದ ನೀತಿ ಮತ್ತು ಈ ಕಾಯ್ದೆಯ ಹಿಂದಿನ ಉದ್ದೇಶ ಸ್ಪಷ್ಟವಾಗಿದೆ. ಈ ಕಾಯ್ದೆಗಳು ರೈತರ ಜೀವನವನ್ನು ಪರಿವರ್ತಿಸಲು ಉದ್ದೇಶಿಸಿವೆ. ಇದನ್ನು ನಾವು ರೈತರು ಮತ್ತು ರೈತ ಸಂಘಗಳ ಮುಖಂಡರಿಗೆ ಮನವರಿಕೆ ಮಾಡಲು ಪ್ರಯತ್ನಿಸಿದ್ದೇವೆ ಎಂದು ತೋಮರ್ ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Geneva ಸಭೆಯಲ್ಲಿ ಭಾರತದ ವಿರುದ್ಧ ಟೀಕೆ; ‘ರಾಜಕೀಯ ಪ್ರೇರಿತ ಹೇಳಿಕೆಗಳ ಒಪ್ಪಲ್ಲ’ ಎಂದ MEA, ವಿಶ್ವಸಂಸ್ಥೆ ಸಮಿತಿ ವಿರುದ್ಧ ಕಿಡಿ..!

'ವಿರೋಧವಿದ್ದರೂ ಮೋಹನ್ ಭಾಗವತ್ ಅಮೆರಿಕಕ್ಕೆ ಯಾಕೆ ಹೋದ್ರು? ಮಹಾರಾಷ್ಟ್ರ ಕಾಂಗ್ರೆಸ್ ಶಾಸಕ ನಾನಾ ಪಟೋಲೆ ಪ್ರಶ್ನೆ!

US ವಲಸೆ ನೀತಿ ಮತ್ತಷ್ಟು ಕಠಿಣ: ಅರ್ಜಿದಾರರಿಗೆ ಟ್ರಂಪ್‌ ಸರ್ಕಾರ ಶಾಕ್‌: ವಿಶ್ವದಾದ್ಯಂತ VISA ಸಂದರ್ಶನಗಳಿಗೆ ಬ್ರೇಕ್‌!

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಡವರ ಬದುಕಿಗೆ ಬೆಲೆ ಏರಿಕೆ ಬರೆ: ‘ಅಚ್ಛೇ ದಿನ್ ಆಯ್ತು ದುಬಾರಿ ದಿನ್: ಅಗತ್ಯ ವಸ್ತುಗಳ ಬೆಲೆ ಏರಿಕೆ ಬೆನ್ನಲ್ಲೇ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ..!