ರಾಜ್ಯಪಾಲ ಬಂಡಾರು ದತ್ತಾತ್ರೇಯ ಮತ್ತು ಅವರ ಅಪಘಾತವಾದ ಕಾರು 
ದೇಶ

ಹೈದರಾಬಾದ್ ಬಳಿ ಕಾರು ಅಪಘಾತ: ಹಿಮಾಚಲ ಪ್ರದೇಶ ರಾಜ್ಯಪಾಲ ಅಪಾಯದಿಂದ ಪಾರು

ಹಿಮಾಚಲ ಪ್ರದೇಶದ ರಾಜ್ಯಪಾಲ ಬಂಡಾರು ದತ್ತಾತ್ರೇಯ ಅವರು ಪ್ರಯಾಣಿಸುತ್ತಿದ್ದ ಕಾರು ಸೋಮವಾರ ಹೈದರಾಬಾದ್ ಬಳಿ ಅಪಘಾತಕ್ಕೀಡಾಯಿತು. ಅದೃಷ್ಟವಶಾತ್ ಯಾರಿಗೆ ಯಾವ ಅಪಾಯವಾಗದೆ ಪಾರಾಗಿದ್ದಾರೆ.

ಹೈದರಾಬಾದ್: ಹಿಮಾಚಲ ಪ್ರದೇಶದ ರಾಜ್ಯಪಾಲ ಬಂಡಾರು ದತ್ತಾತ್ರೇಯ ಅವರು ಪ್ರಯಾಣಿಸುತ್ತಿದ್ದ ಕಾರು ಸೋಮವಾರ ಹೈದರಾಬಾದ್ ಬಳಿ ಅಪಘಾತಕ್ಕೀಡಾಯಿತು. ಅದೃಷ್ಟವಶಾತ್ ಯಾರಿಗೆ ಯಾವ ಅಪಾಯವಾಗದೆ ಪಾರಾಗಿದ್ದಾರೆ.

ಕಾರು ಚಾಲಕನು ವಾಹನದ ಮೇಲಿನ ನಿಯಂತ್ರಣವನ್ನು ಕಳೆದುಕೊಂಡ ಪರಿಣಾಮ ಕಾರು ರಸ್ತೆ ಬದಿಯಲ್ಲಿದ್ದ ಮರಕ್ಕೆ ಢಿಕ್ಕಿಯಾಗಿದೆ.

ಹೈದರಾಬಾದ್-ವಿಜಯವಾಡ ಹೆದ್ದಾರಿಯ ಚೌತುಪ್ಪಲ್ ಮಂಡಲದ ಕೈತಪುರಂ ಬಳಿ ಅಪಘಾತ ಸಂಭವಿಸಿದೆ. ಈ ವೇಳೆ ಹಿಮಾಚಲ ಪ್ರದೇಶ ರಾಜ್ಯಪಾಲರು ಹೈದರಾಬಾದ್ ನಿಂದ ನಲ್ಗೊಂಡಕ್ಕೆ ತೆರಳುತ್ತಿದ್ದರು.

ಅಪಘಾತದಿಂದ ಕಾರು ಜಖಂ ಆಗಿದ್ದು ಆ ಘಟನಾ ನಂತರ ರಾಜ್ಯಪಾಲರು ಮತ್ತೊಂದು ವಾಹನದಲ್ಲಿ ನಲ್ಗೊಂಡಕ್ಕೆ ತೆರಳಿದ್ದಾರೆ ಎಂದು ರಾಜ್ಯಪಾಲರ ಸಹಾಯಕ ಕೈಲಾಶ್ ನಾಗೇಶ್ ಐಎಎನ್‌ಎಸ್‌ಗೆ ತಿಳಿಸಿದ್ದಾರೆ.

ರಾಜ್ಯ ಸರ್ಕಾರ ಒದಗಿಸಿದ ವಾಹನ ಸುಸ್ಥಿತಿಯಲ್ಲಿರಲಿಲ್ಲ ಎಂದು ನಾಗೇಶ್ ಹೇಳಿದರು. ಹೈದರಾಬಾದ್ ಮೂಲದವರಾದ ರಾಜ್ಯಪಾಲ ಬಂಡಾರು ದತ್ತಾತ್ರೇಯ ನಲ್ಗೊಂಡದಲ್ಲಿ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಳ್ಳಲು ಅಲ್ಲಿಗೆ ತೆರಳುತ್ತಿದ್ದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Iran ನಲ್ಲಿ ಕೊನೆಗೂ ಆಡಳಿತ ಬದಲಾವಣೆ! ಅಮೆರಿಕ, ಇಸ್ರೇಲ್ ಬಯಸಿದ್ದೇ ಒಂದು, ಆಗಿದ್ದು ಇನ್ನೊಂದು!

Op Sindoor: ವಿಶ್ವಭೂಪಟದಿಂದ ಪಾಕ್ ನಿರ್ನಾಮಕ್ಕೆ ಕೆಲವೇ ನಿಮಿಷಗಳ ಅಂತರದಲ್ಲಿದ್ದೆವು, ಆದ್ರೆ ಅವರು ತಡೆದರು...: ಅಡ್ಮಿರಲ್ ದಿನೇಶ್ ಕೆ. ತ್ರಿಪಾಠಿ

IPL 2026: ಸಮೀರ್ ರಿಜ್ವಿ ಸ್ಫೋಟಕ ಬ್ಯಾಟಿಂಗ್; ಲಕ್ನೋ ವಿರುದ್ಧ ಗೆದ್ದು ಬೀಗಿದ ಡೆಲ್ಲಿ

IPL 2026: ಯಾರ್ ಮೇಲಾದ್ರೂ 5 ಸಾವಿರ ಹೂಡಿಕೆ ಮಾಡಿ ನೋಡಿ: LSG ಮಾಲೀಕರ ಕುರಿತು Mohammed Shami ಹೇಳಿಕೆ ವೈರಲ್!

ದೇಶದಲ್ಲೇ ಮೊದಲ ಬಾರಿಗೆ ಡ್ರಗ್ಸ್, ಸಾಮಾಜಿಕ–ಆರ್ಥಿಕ ಜನಗಣತಿ ಆರಂಭಿಸಿದ ಪಂಜಾಬ್: ನಿರೀಕ್ಷೆಗೂ ಮೀರಿದ ಪ್ರತಿಕ್ರಿಯೆ

SCROLL FOR NEXT