ರೈತರೊಂದಿಗೆ ದೆಹಲಿ ಸಿಎಂ 
ದೇಶ

ಹೊಸ ಕೃಷಿ ಕಾನೂನುಗಳು 'ರೈತ ವಿರೋಧಿ', ಬಂಡವಾಳಶಾಹಿಗಳಿಗೆ ಲಾಭವಾಗುತ್ತದೆ: ಅರವಿಂದ್ ಕೇಜ್ರಿವಾಲ್

ಕೇಂದ್ರ ಸರ್ಕಾರದ ಹೊಸ ಕೃಷಿ ಕಾನೂನುಗಳು 'ರೈತ ವಿರೋಧಿ'ಯಾಗಿದ್ದು, ಅಪಾರ ಪ್ರಮಾಣದ ಹಣದುಬ್ಬರಕ್ಕೆ ಕಾರಣವಾಗುತ್ತದೆ ಮತ್ತು ಬಂಡವಾಳಶಾಹಿಗಳಿಗೆ ಲಾಭವಾಗುತ್ತದೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಸೋಮವಾರ ಹೇಳಿದ್ದಾರೆ.

ನವದೆಹಲಿ: ಕೇಂದ್ರ ಸರ್ಕಾರದ ಹೊಸ ಕೃಷಿ ಕಾನೂನುಗಳು 'ರೈತ ವಿರೋಧಿ'ಯಾಗಿದ್ದು, ಅಪಾರ ಪ್ರಮಾಣದ ಹಣದುಬ್ಬರಕ್ಕೆ ಕಾರಣವಾಗುತ್ತದೆ ಮತ್ತು ಬಂಡವಾಳಶಾಹಿಗಳಿಗೆ ಲಾಭವಾಗುತ್ತದೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಸೋಮವಾರ ಹೇಳಿದ್ದಾರೆ.

ಪ್ರತಿಭಟನಾ ನಿರತ ರೈತರಿಗೆ ಬೆಂಬಲವಾಗಿ ಇಂದು ಎಎಪಿ ಶಾಸಕರು ಮತ್ತು ಕಾರ್ಯಕರ್ತರೊಂದಿಗೆ ಪಕ್ಷದ ಕಚೇರಿಯಲ್ಲಿ ಇಂದು ಒಂದು ದಿನದ ಉಪವಾಸ ಸತ್ಯಾಗ್ರಹ ನಡೆಸಿದ ದೆಹಲಿ ಸಿಎಂ, ಹೊಸ ಕೃಷಿ ಕಾನೂನುಗಳು ಹಣದುಬ್ಬರಕ್ಕೆ ಪರವಾನಗಿ ನೀಡುತ್ತವೆ ಎಂದರು.

ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಕೇಜ್ರಿವಾಲ್ ಅವರು, ಜನರು ಬಯಸಿದಷ್ಟು ಸಂಗ್ರಹಿಸಬಹುದು ಎಂದು ಈ ಕಾನೂನು ಹೇಳುತ್ತದೆ. ಹೀಗಾಗಿ ರೈತರ ವಿಷಯದ ಬಗ್ಗೆ ಕೊಳಕು ರಾಜಕೀಯ ಮಾಡುವುದನ್ನು ನಿಲ್ಲಿಸುವಂತೆ ನಾನು ರಾಜಕೀಯ ಪಕ್ಷಗಳಿಗೆ ಮನವಿ ಮಾಡುತ್ತೇನೆ. ಈ ಕಾನೂನುಗಳು ರೈತ ವಿರೋಧಿ ಮತ್ತು ಜನ ಸಾಮಾನ್ಯರ ವಿರೋಧಿಯಾಗಿವೆ. ಇದರಿಂದ ಕೆಲವು ಬಂಡವಾಳಶಾಹಿಗಳಿಗೆ ಮಾತ್ರ ಅನುಕೂಲವಾಗುತ್ತದೆ. ಈ ಕಾನೂನುಗಳಿಂದ ಅಪಾರ ಹಣದುಬ್ಬರಕ್ಕೆ ಕಾರಣವಾಗುತ್ತದೆ ಎಂದು ಆರೋಪಿಸಿದರು.

ಈ ಕಾನೂನುಗಳಿಂದಾಗಿ, ಮುಂದಿನ ವರ್ಷಗಳಲ್ಲಿ ಗೋಧಿ ಬೆಲೆ ನಾಲ್ಕು ಪಟ್ಟು ಹೆಚ್ಚು ದುಬಾರಿಯಾಗಲಿದೆ ಎಂದು ದೆಹಲಿ ಸಿಎಂ ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

AI- ಚಾಲಿತ ಡಿಜಿಟಲೀಕರಣ, SIR ಕುರಿತು CECಗೆ ಐದನೇ ಪತ್ರ ಬರೆದ ಮಮತಾ ಬ್ಯಾನರ್ಜಿ

Vijay Hazare Trophy: ಸೆಮಿಫೈನಲ್‌ಗೆ ಲಗ್ಗೆ ಇಟ್ಟ ಕರ್ನಾಟಕ

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

UP ದಲಿತ ಮಹಿಳೆ ಕೊಲೆ: ಯೋಗಿ ಸರ್ಕಾರ ಜಾತಿ, ಧರ್ಮದ ಆಧಾರದಲ್ಲಿ ದ್ವೇಷಕ್ಕೆ ಪ್ರಚೋದನೆ- ಕಾಂಗ್ರೆಸ್ ಕಿಡಿ!

Indian Stock Market: 5 ದಿನಗಳ ಸತತ ಕುಸಿತಕ್ಕೆ ಕೊನೆಗೂ ಬ್ರೇಕ್, Sensex 301 ಅಂಕ ಏರಿಕೆ!

SCROLL FOR NEXT