ರೈತರೊಂದಿಗೆ ದೆಹಲಿ ಸಿಎಂ 
ದೇಶ

ಹೊಸ ಕೃಷಿ ಕಾನೂನುಗಳು 'ರೈತ ವಿರೋಧಿ', ಬಂಡವಾಳಶಾಹಿಗಳಿಗೆ ಲಾಭವಾಗುತ್ತದೆ: ಅರವಿಂದ್ ಕೇಜ್ರಿವಾಲ್

ಕೇಂದ್ರ ಸರ್ಕಾರದ ಹೊಸ ಕೃಷಿ ಕಾನೂನುಗಳು 'ರೈತ ವಿರೋಧಿ'ಯಾಗಿದ್ದು, ಅಪಾರ ಪ್ರಮಾಣದ ಹಣದುಬ್ಬರಕ್ಕೆ ಕಾರಣವಾಗುತ್ತದೆ ಮತ್ತು ಬಂಡವಾಳಶಾಹಿಗಳಿಗೆ ಲಾಭವಾಗುತ್ತದೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಸೋಮವಾರ ಹೇಳಿದ್ದಾರೆ.

ನವದೆಹಲಿ: ಕೇಂದ್ರ ಸರ್ಕಾರದ ಹೊಸ ಕೃಷಿ ಕಾನೂನುಗಳು 'ರೈತ ವಿರೋಧಿ'ಯಾಗಿದ್ದು, ಅಪಾರ ಪ್ರಮಾಣದ ಹಣದುಬ್ಬರಕ್ಕೆ ಕಾರಣವಾಗುತ್ತದೆ ಮತ್ತು ಬಂಡವಾಳಶಾಹಿಗಳಿಗೆ ಲಾಭವಾಗುತ್ತದೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಸೋಮವಾರ ಹೇಳಿದ್ದಾರೆ.

ಪ್ರತಿಭಟನಾ ನಿರತ ರೈತರಿಗೆ ಬೆಂಬಲವಾಗಿ ಇಂದು ಎಎಪಿ ಶಾಸಕರು ಮತ್ತು ಕಾರ್ಯಕರ್ತರೊಂದಿಗೆ ಪಕ್ಷದ ಕಚೇರಿಯಲ್ಲಿ ಇಂದು ಒಂದು ದಿನದ ಉಪವಾಸ ಸತ್ಯಾಗ್ರಹ ನಡೆಸಿದ ದೆಹಲಿ ಸಿಎಂ, ಹೊಸ ಕೃಷಿ ಕಾನೂನುಗಳು ಹಣದುಬ್ಬರಕ್ಕೆ ಪರವಾನಗಿ ನೀಡುತ್ತವೆ ಎಂದರು.

ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಕೇಜ್ರಿವಾಲ್ ಅವರು, ಜನರು ಬಯಸಿದಷ್ಟು ಸಂಗ್ರಹಿಸಬಹುದು ಎಂದು ಈ ಕಾನೂನು ಹೇಳುತ್ತದೆ. ಹೀಗಾಗಿ ರೈತರ ವಿಷಯದ ಬಗ್ಗೆ ಕೊಳಕು ರಾಜಕೀಯ ಮಾಡುವುದನ್ನು ನಿಲ್ಲಿಸುವಂತೆ ನಾನು ರಾಜಕೀಯ ಪಕ್ಷಗಳಿಗೆ ಮನವಿ ಮಾಡುತ್ತೇನೆ. ಈ ಕಾನೂನುಗಳು ರೈತ ವಿರೋಧಿ ಮತ್ತು ಜನ ಸಾಮಾನ್ಯರ ವಿರೋಧಿಯಾಗಿವೆ. ಇದರಿಂದ ಕೆಲವು ಬಂಡವಾಳಶಾಹಿಗಳಿಗೆ ಮಾತ್ರ ಅನುಕೂಲವಾಗುತ್ತದೆ. ಈ ಕಾನೂನುಗಳಿಂದ ಅಪಾರ ಹಣದುಬ್ಬರಕ್ಕೆ ಕಾರಣವಾಗುತ್ತದೆ ಎಂದು ಆರೋಪಿಸಿದರು.

ಈ ಕಾನೂನುಗಳಿಂದಾಗಿ, ಮುಂದಿನ ವರ್ಷಗಳಲ್ಲಿ ಗೋಧಿ ಬೆಲೆ ನಾಲ್ಕು ಪಟ್ಟು ಹೆಚ್ಚು ದುಬಾರಿಯಾಗಲಿದೆ ಎಂದು ದೆಹಲಿ ಸಿಎಂ ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

Ragigudda Metro ನಿಲ್ದಾಣದಲ್ಲಿ ತಪ್ಪಿದ ದುರಂತ, ಆಯತಪ್ಪಿ ಹಳಿ ಮೇಲೆ ಬಿದ್ದ ಸಿಬ್ಬಂದಿ!... ಮುಂದೇನಾಯ್ತು? Video

ಸೌರಭ್ ಭಾರದ್ವಾಜ್ ಮನೆ ಮೇಲೆ ಇಡಿ ದಾಳಿ; ಮೋದಿ ನಕಲಿ ಪದವಿ ಕುರಿತ ಗಮನ ಬೇರೆಡೆ ಸೆಳೆಯಲು ಯತ್ನ ಎಂದ AAP

SCROLL FOR NEXT