ಶಿರೋಮಣಿ ಅಕಾಲಿ ದಳ ಮುಖ್ಯಸ್ಥ ಸುಖ್ಬೀರ್ ಸಿಂಗ್ ಬಾದಲ್ 
ದೇಶ

ಬಿಜೆಪಿ ಸಿಖ್ಖರ ವಿರುದ್ಧ ಹಿಂದೂಗಳನ್ನು ಎತ್ತಿ ಕಟ್ಟುತ್ತಿದೆ, ಕೇಸರಿ ಪಕ್ಷವೇ ನಿಜವಾದ ತುಕ್ಡೆ ತುಕ್ಡೆ ಗ್ಯಾಂಗ್: ಸುಖ್ಬೀರ್ ಬಾದಲ್

ಕೇಂದ್ರ ಸರ್ಕಾರದ ಮೂರು ಕೃಷಿ ಕಾನೂನುಗಳ ವಿರುದ್ಧ ರೈತರ ಪ್ರತಿಭಟನೆಗೆ ಸಂಬಂಧಿಸಿದಂತೆ ಮಂಗಳವಾರ ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಎಸ್‌ಎಡಿ ಮುಖ್ಯಸ್ಥ ಸುಖಬೀರ್ ಸಿಂಗ್ ಬಾದಲ್...

ಚಂಡೀಗಢ: ಕೇಂದ್ರ ಸರ್ಕಾರದ ಮೂರು ಕೃಷಿ ಕಾನೂನುಗಳ ವಿರುದ್ಧ ರೈತರ ಪ್ರತಿಭಟನೆಗೆ ಸಂಬಂಧಿಸಿದಂತೆ ಮಂಗಳವಾರ ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಎಸ್‌ಎಡಿ ಮುಖ್ಯಸ್ಥ ಸುಖಬೀರ್ ಸಿಂಗ್ ಬಾದಲ್ ಅವರು, ಕೇಸರಿ ಪಕ್ಷವೇ "ನಿಜವಾದ ತುಕ್ಡೆ ತುಕ್ಡೆ ಗ್ಯಾಂಗ್" ಎಂದು ಕರೆದಿದ್ದಾರೆ.

ಬಿಜೆಪಿ ಪಂಜಾಬ್‌ನಲ್ಲಿ ಸಿಖ್ಖರ ವಿರುದ್ಧ ಹಿಂದೂಗಳನ್ನು ಎತ್ತಿ ಕಟ್ಟುತ್ತಿದೆ ಎಂದು ಆರೋಪಿಸಿದ ಶಿರೋಮಣಿ ಅಕಾಲಿ ದಳದ ಅಧ್ಯಕ್ಷ, ಬಿಜೆಪಿ ಮೊದಲು ಮುಸ್ಲಿಮರ ವಿರುದ್ಧ ಹಿಂದೂಗಳನ್ನು ಎತ್ತಿಕಟ್ಟಿತು. ಈಗ ಶಾಂತಿ ಪ್ರಿಯ ಪಂಜಾಬಿ ಹಿಂದೂಗಳನ್ನು ನಮ್ಮ ಸಿಖ್ ಸಹೋದರರ ವಿರುದ್ಧ ಎತ್ತಿಕಟ್ಟಲು ಪ್ರಯತ್ನಿಸುತ್ತಿದೆ. ದೇಶಭಕ್ತ ಪಂಜಾಬ್​ನ್ನು ಬಿಜೆಪಿ ಕೋಮು ಜ್ವಾಲೆಗೆ ತಳ್ಳಲು ಪ್ರಯತ್ನಿಸುತ್ತಿದೆ ಎಂದು ಟ್ವೀಟ್ ಮಾಡಿದ್ದಾರೆ.

ಬಿಜೆಪಿ ನೇತೃತ್ವದ ಸರ್ಕಾರ ತನ್ನ 'ಅಹಂ' ಅನ್ನು ಬದಿಗಿಟ್ಟು ಪ್ರತಿಭಟನೆ ನಡೆಸುತ್ತಿರುವ ರೈತರ ಮಾತುಗಳನ್ನು ಕೇಳಬೇಕು ಎಂದು ಪಂಜಾಬ್ ಮಾಜಿ ಮುಖ್ಯಮಂತ್ರಿ ಒತ್ತಾಯಿಸಿದ್ದಾರೆ.

ಯಾರಾದರು ಕೇಂದ್ರ ಸರ್ಕಾರದ ಪರವಾಗಿ ಮಾತನಾಡಿದರೆ ಅವರನ್ನು 'ದೇಶಭಕ್ತ' ಎಂದು ಕರೆಯಲಾಗುತ್ತದೆ ಮತ್ತು ಸರ್ಕಾರದ ವಿರುದ್ಧ ಮಾತನಾಡಿದರೆ ಅವರನ್ನು "ತುಕ್ಡೆ ತುಕ್ಡೆ ಗ್ಯಾಂಗ್" ಎಂದು ಬ್ರಾಂಡ್ ಮಾಡಲಾಗುತ್ತಿದೆ. ಆದರೆ ಬಿಜೆಪಿಯೇ ದೇಶದ ನಿಜವಾದ ತುಕ್ಡೆ ತುಕ್ಡೆ ಗ್ಯಾಂಗ್ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಲ್ಲದೆ ಬಿಜೆಪಿ ರಾಷ್ಟ್ರೀಯ ಐಕ್ಯತೆಯನ್ನು ಒಡೆಯುತ್ತಿದೆ ಎಂದು ಆರೋಪಿಸಿದ್ದಾರೆ.

ಇದೇ ಕೃಷಿ ಕಾನೂನುಗಳ ವಿಚಾರಕ್ಕೆ ಸಂಬಂಧಿಸಿದಂತೆ ಎಸ್‌ಎಡಿ ಎನ್ ಡಿಎ ಮೈತ್ರಿಕೂಟದಿಂದ ಹೊರ ಬಂದಿದ್ದು, ಮೋದಿ ಸಂಪುಟದಲ್ಲಿ ಸಚಿವೆಯಾಗಿದ್ದ ಎಸ್‌ಎಡಿ ನಾಯಕಿ ಹರ್ಸಿಮ್ರತ್ ಕೌರ್ ಬಾದಲ್ ಅವರು ಕೇಂದ್ರ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

ಶಿಬು ಸೊರೇನ್ 'ರಾಜ್ಯದ ಪಿತಾಮಹ' ಎಂದು ಘೋಷಿಸುವಂತೆ ಜೆಎಂಎಂ ಆಗ್ರಹ

SCROLL FOR NEXT