ಕೈಲಾಶ್ ವಿಜಯವರ್ಗಿಯಾ 
ದೇಶ

ಕಮಲ್ ನಾಥ್ ಸರ್ಕಾರ ಉರುಳಿಸುವಲ್ಲಿ ಪ್ರಧಾನಿ ಮೋದಿ ಪ್ರಮುಖ ಪಾತ್ರ ವಹಿಸಿದ್ದಾರೆ: ಬಿಜೆಪಿ ಹಿರಿಯ ನಾಯಕ

2020ರ ಮಾರ್ಚ್‌ನಲ್ಲಿ ಮಧ್ಯ ಪ್ರದೇಶದಲ್ಲಿ ಕಮಲ್ ನಾಥ್ ನೇತೃತ್ವದ ಕಾಂಗ್ರೆಸ್ ಸರ್ಕಾರ ಉರುಳಿಸುವಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಪ್ರಮುಖ ಪಾತ್ರ ವಹಿಸಿದ್ದಾರೆ ಎಂದು ಸ್ವತಃ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಕೈಲಾಶ್ ವಿಜಯವರ್ಗಿಯಾ ಅವರು ಬುಧವಾರ ಬಹಿರಂಗಪಡಿಸಿದ್ದಾರೆ.

ಭೋಪಾಲ್: 2020ರ ಮಾರ್ಚ್‌ನಲ್ಲಿ ಮಧ್ಯ ಪ್ರದೇಶದಲ್ಲಿ ಕಮಲ್ ನಾಥ್ ನೇತೃತ್ವದ ಕಾಂಗ್ರೆಸ್ ಸರ್ಕಾರ ಉರುಳಿಸುವಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಪ್ರಮುಖ ಪಾತ್ರ ವಹಿಸಿದ್ದಾರೆ ಎಂದು ಸ್ವತಃ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಕೈಲಾಶ್ ವಿಜಯವರ್ಗಿಯಾ ಅವರು ಬುಧವಾರ ಬಹಿರಂಗಪಡಿಸಿದ್ದಾರೆ.

ಮಾಜಿ ಸಚಿವ ಹಾಗೂ ಪಶ್ಚಿಮ ಬಂಗಾಳದ ಬಿಜೆಪಿ ಉಸ್ತುವಾರಿ ವಿಜಯವರ್ಗಿಯ ಅವರು ಇಂದು ಇಂದೋರ್‌ನಲ್ಲಿ ಪಕ್ಷದ ಕಿಸಾನ್ ಸಮ್ಮೇಳನ ಉದ್ದೇಶಿಸಿ ಮಾತನಾಡುವಾಗ ಈ ವಿಚಾರ ಬಹಿರಂಗಪಡಿಸಿದ್ದಾರೆ.

ಯಾರಿಗೂ ಹೇಳಬೇಡಿ, ನಾನು ಇದನ್ನು ಇಲ್ಲಿಯವರೆಗೆ ಯಾರಿಗೂ ಹೇಳಿಲ್ಲ. ಈಗ ನಾನು ಅದನ್ನು ಮೊದಲ ಬಾರಿಗೆ ಸಾರ್ವಜನಿಕವಾಗಿ ಹೇಳುತ್ತಿದ್ದೇನೆ. ಕಮಲ್ ನಾಥ್ ಸರ್ಕಾರವನ್ನು ಉರುಳಿಸುವಲ್ಲಿ ಯಾರಾದರೂ ಪ್ರಮುಖ ಪಾತ್ರ ವಹಿಸಿದರೆ, ಅದು ನರೇಂದ್ರ ಮೋದಿ ಮಾತ್ರ, ಧರ್ಮೇಂದ್ರ ಪ್ರಧಾನ್ ಅಲ್ಲ ಎಂದು ವಿಜಯವರ್ಗಿಯಾ ಅವರು ಹೇಳಿದ್ದಾರೆ. ಈ ವೇಳೆ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಮತ್ತು ಮಧ್ಯ ಪ್ರದೇಶ ಗೃಹ ಸಚಿವ ನರೋತ್ತಮ್ ಮಿಶ್ರಾ ಸಹ ವೇದಿಕೆಯಲ್ಲಿದ್ದರು.

ವಿಜಯವರ್ಗಿಯಾ ಅವರ ರೋಚಕ ಹೇಳಿಕೆಯ ವೀಡಿಯೊವನ್ನು ಟ್ವೀಟ್ ಮಾಡಿರುವ ಮಧ್ಯ ಪ್ರದೇಶ ಕಾಂಗ್ರೆಸ್ ವಕ್ತಾರ ನರೇಂದ್ರ ಸಲೂಜಾ ಅವರು, "ಸಂವಿಧಾನಾತ್ಮಕವಾಗಿ ಚುನಾಯಿತವಾದ ಸರ್ಕಾರಗಳನ್ನು ಅಸಂವಿಧಾನಿಕ ರೀತಿಯಲ್ಲಿ ಕೆಳಗಿಳಿಸುವ ಪ್ರಧಾನಿ ನರೇಂದ್ರ ಮೋದಿ ಅವರ ಪಾತ್ರ ಈಗ ಸ್ಪಷ್ಟವಾಗಿದೆ" ಎಂದು ಹೇಳಿದ್ದಾರೆ.

ಮೊದಲ ದಿನದಿಂದಲೂ ಕಾಂಗ್ರೆಸ್ ಇದನ್ನು ಹೇಳುತ್ತಿದೆ, ಆದರೆ ಕಮಲ್ ನಾಥ್ ಸರ್ಕಾರದ ಪತನಕ್ಕೆ ಕಾಂಗ್ರೆಸ್ ಆಂತರಿಕ ಜಗಳ ಕಾರಣ ಎಂದು ಬಿಜೆಪಿ ದೂಷಿಸುತ್ತಿದೆ. ಈಗ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಕೈಲಾಶ್ ವಿಜಯವರ್ಗಿಯಾ ಅವರೇ ಸತ್ಯವನ್ನು ಬಿಚ್ಚಿಟ್ಟಿದ್ದಾರೆ ಎಂದು ಸಲೂಜಾ ಅವರು ವಾಗ್ದಾಳಿ ನಡೆಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

IPL 2026: ಸ್ಯಾಮ್ಸನ್ ಬ್ಯಾಟಿಂಗ್ ಅಬ್ಬರ; DC ವಿರುದ್ಧ CSK ಗೆ 23 ರನ್ ಗಳ ಭರ್ಜರಿ ಜಯ

ಖ್ಯಾತ ಗಾಯಕಿ ಆಶಾ ಭೋಸ್ಲೆಗೆ ಹೃದಯಾಘಾತ: ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು

IPL 2026: ಚೆನ್ನೈ ಪರ ಸಂಜು ಸ್ಯಾಮ್ಸನ್ ಸ್ಫೋಟಕ ಬ್ಯಾಟಿಂಗ್; MS ಧೋನಿ ದಾಖಲೆ ಪುಡಿ; ದಿಗ್ಗಜರ ಗುಂಪಿಗೆ ಸೇರ್ಪಡೆ

SCROLL FOR NEXT