ಸಾಂದರ್ಭಿಕ ಚಿತ್ರ 
ದೇಶ

ಮದುವೆ ಪಾರ್ಟಿ ಕೊಡದ ವರನನ್ನೇ ಇರಿದು ಕೊಂದ ಸ್ನೇಹಿತರು!

ಮದುವೆಯಾದ ಖುಷಿಗೆ ಎಣ್ಣೆ ಪಾರ್ಟಿ ಕೊಡಲಿಲ್ಲ ಎಂದು ಸ್ನೇಹತನನ್ನೇ ಕೊಂದು ಹಾಕಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.

ಅಲಿಘಡ: ಮದುವೆಯಾದ ಖುಷಿಗೆ ಎಣ್ಣೆ ಪಾರ್ಟಿ ಕೊಡಲಿಲ್ಲ ಎಂದು ಸ್ನೇಹತನನ್ನೇ ಕೊಂದು ಹಾಕಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.

ಉತ್ತರ ಪ್ರದೇಶದ ಅಲಿಘಡದ ಪಲಿಮುಕಿಮ್ ಪುರ್ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಮದುವೆ ಆಗಿದ್ದ ಖುಷಿಗೆ ಪಾರ್ಟಿ ನೀಡದ ಗೆಳೆಯನನ್ನೇ ಆತನ ಸ್ನೇಹಿತರು ಕೊಂದು ಹಾಕಿದ್ದಾರೆ. ಮೃತ ಸಂತ್ರಸ್ಥನನ್ನು 28 ವರ್ಷದ ಬಬ್ಲು ಸೂರ್ಯವಂಶಿ ಎಂದು ಗುರುತಿಸಲಾಗಿದೆ. ಮೂಲಗಳ ಪ್ರಕಾರ  ಪಶು ವ್ಯಾಪಾರಿಯಾಗಿದ್ದ ಬಬ್ಲು ಮದುವೆಯ ಬಳಿಕ ಪತ್ನಿಯನ್ನು ಮನೆಗೆ ಕರೆ ತಂದಿದ್ದನು. ಪತ್ನಿ ಆಗಮನದ ಹಿನ್ನೆಲೆ ಬಬ್ಲು ಸಹ ಖುಷಿಯಲ್ಲಿದ್ದನು. ವಧು ಬಂದ ಮರುದಿನ ಬಬ್ಲು ಗೆಳೆಯನ ಮನೆಗೆ ಹೋಗಿದ್ದಾನೆ. ನಾಲ್ವರು ಗೆಳೆಯರು ಮದುವೆಯಾದ ಖುಷಿಗೆ ಮದ್ಯದ ಪಾರ್ಟಿ ನೀಡಬೇಕೆಂದು  ಒತ್ತಾಯಿಸಿದ್ದಾರೆ. ಅದಾಗಲೇ ಮದ್ಯದ ನಷೆಯಲ್ಲಿದ್ದ ಸ್ನೇಹಿತರನ್ನು ಕಂಡ ಬಬ್ಲು ಮತ್ತೆ ಮದ್ಯ ತಂದು ಕೊಡಲು ನಿರಾಕರಿಸಿದ್ದಾನೆ.

ಬಬ್ಲು ಪಾರ್ಟಿ ನೀಡಲು ಒಪ್ಪದಿದ್ದಾಗ ಗೆಳೆಯರ ನಡುವೆ ಗಲಾಟೆ ನಡೆದಿದೆ. ಕೊನೆಗೆ ಗೆಳೆಯರೆಲ್ಲರೂ ಸೇರಿ ಚಾಕುವಿನಿಂದ ಬಬ್ಲುವಿನ ಕತ್ತು ಕೊಯ್ದು ಎಸ್ಕೇಪ್ ಆಗಿದ್ದಾರೆ. ನಂತರ ಬಬ್ಲು ಕುಟುಂಬಸ್ಥರಿಗೆ ಫೋನ್ ಮಾಡಿ ವಿಷಯ ತಿಳಿಸಿದ್ದಾರೆ. ವಿಷಯ ತಿಳಿದ ಕುಟುಂಬಸ್ಥರು ಬಬ್ಲುನನ್ನು  ಅಲಿಗಢ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ದಾಖಲಿಸಿದ್ದಾರೆ.

ಆಸ್ಪತ್ರೆಯಲ್ಲಿ ಬಬ್ಲುನನ್ನು ಪರೀಕ್ಷಿಸಿದ ವೈದ್ಯರು ಆತ ಮೃತಪಟ್ಟಿರುವುದನ್ನು ಖಚಿತ ಪಡಿಸಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿದ ಪೊಲೀಸರು ಕುಟುಂಬಸ್ಥರಿಂದ ಮಾಹಿತಿ ಕಲೆ ಹಾಕಿ, ಮೃತದೇಹವನ್ನ ಮರಣೋತ್ತರ ಶವ ಪರೀಕ್ಷೆಗಾಗಿ ಸರ್ಕಾರಿ ಆಸ್ಪತ್ರೆಗೆ ರವಾನಿಸಿದ್ದಾರೆ. ಇತ್ತ ಪರಾರಿಯಾಗಿದ್ದ ಪ್ರಮುಖ ಆರೋಪಿ ರಾಮ್ ಖಿಲಾಡಿ ಯನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದು, ಪರಾರಿಯಾಗಿರುವ ನಾಲ್ವರಿಗಾಗಿ ಶೋಧ ನಡೆಸುತ್ತಿದ್ದೇವೆ ಎಂದು ಸಿಐ ನರೇಶ್ ಸಿಂಗ್ ಹೇಳಿದ್ದಾರೆ.
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Nepal Floods: ಸಾವಿನ ಸಂಖ್ಯೆ 359ಕ್ಕೆ ಏರಿಕೆ; 288 ಭಾರತೀಯರು ಸೇರಿ 826 ಮಂದಿ ನಾಪತ್ತೆ; ಮತ್ತೆ ಪ್ರವಾಹ ಭೀತಿ! ಹೊಸ ಸರೋವರ ಪತ್ತೆ!

Nepal Floods: ಭೀಕರ ಪ್ರವಾಹದಲ್ಲಿ 30 ದೇಶಗಳ ನಾಗರೀಕರು ನಾಪತ್ತೆ, ಅಮೆರಿಕದವರೇ ಅತಿ ಹೆಚ್ಚು!

ಭಾರತ-ಶ್ರೀಲಂಕಾ 2ನೇ ಟೆಸ್ಟ್ ಡ್ರಾದಲ್ಲಿ ಅಂತ್ಯ; WTC ಪಾಯಿಂಟ್ಸ್‌ ಟೇಬಲ್‌ನಲ್ಲಿ ಟೀಂ ಇಂಡಿಯಾಗೆ ಭಾರೀ ಹೊಡೆತ!

ಪಕ್ಷದ ಹಿತಕ್ಕಾಗಿ ನಾಗೇಂದ್ರ ಯಾವುದೇ ತ್ಯಾಗಕ್ಕೂ ಸಿದ್ಧ, ಆದ್ರೆ...: ಹೈಕಮಾಂಡ್ ಭೇಟಿ ಬಳಿಕ CM ಶಿವಕುಮಾರ್

CSK ಯಲ್ಲಿ ಶೇ. 25 ರಷ್ಟು ಪಾಲು ಕೇಳಿದ್ದಾರೆಯೇ ಧೋನಿ? 3,820 ಕೋಟಿ ರೂ ಕ್ಲೈಮ್ ಹಿಂದಿರುವ ಸತ್ಯವೇನು?