ಊರ್ಮಿಳಾ ಮಾತೋಂಡ್ಕರ್ 
ದೇಶ

ನಟಿ, ರಾಜಕಾರಣಿ ಊರ್ಮಿಳಾ ಮಾತೋಂಡ್ಕರ್ ಇನ್ಸ್ಟಾಗ್ರಾಮ್ ಖಾತೆ ಹ್ಯಾಕ್

ನಟಿ, ರಾಜಕಾರಣಿ ಊರ್ಮಿಳಾ ಮಾತೋಂಡ್ಕರ್ ತಮ್ಮ ಇನ್ಸ್ಟಾಗ್ರಾಮ್ ಖಾತೆ ಹ್ಯಾಕ್ ಆಗಿದೆ ಎಂದು ಹೇಳಿದ್ದು ಈ ಸಂಬಂಧ ಮಹಾರಾಷ್ಟ್ರ ಸೈಬರ್ ಅಪರಾಧ ದಳದ ಅಧಿಕಾರಿಗಳಲ್ಲಿ ಎಫ್ಐಆರ್ ಸಲ್ಲಿಸಿದ್ದಾರೆ.

ಮುಂಬೈ: ನಟಿ, ರಾಜಕಾರಣಿ ಊರ್ಮಿಳಾ ಮಾತೋಂಡ್ಕರ್ ತಮ್ಮ ಇನ್ಸ್ಟಾಗ್ರಾಮ್ ಖಾತೆ ಹ್ಯಾಕ್ ಆಗಿದೆ ಎಂದು ಹೇಳಿದ್ದು ಈ ಸಂಬಂಧ ಮಹಾರಾಷ್ಟ್ರ ಸೈಬರ್ ಅಪರಾಧ ದಳದ ಅಧಿಕಾರಿಗಳಲ್ಲಿ ಎಫ್ಐಆರ್ ಸಲ್ಲಿಸಿದ್ದಾರೆ.

ಫೋಟೋ-ವಿಡಿಯೋ ಹಂಚಿಕೆ ಅಪ್ಲಿಕೇಶನ್‌ನಲ್ಲಿ ನೇರ ಸಂದೇಶಕ್ಕೆ(ಡೈರೆಕ್ಟ್ ಮೆಸೇಜ್) ಪ್ರತಿಕ್ರಿಯಿಸಿದ ನಂತರ ತನ್ನ ಇನ್‌ಸ್ಟಾಗ್ರಾಮ್ ಪ್ರೊಫೈಲ್ ಹ್ಯಾಕ್ ಮಾಡಲಾಗಿದೆ ಎಂದು ಮಾತೋಂಡ್ಕರ್ ಟ್ವಿಟ್ಟರ್ ನಲ್ಲಿ ಹೇಳಿದ್ದಾರೆ.

"ನನ್ನ ಇನ್‌ಸ್ಟಾಗ್ರಾಮ್ ಖಾತೆಯನ್ನು ಹ್ಯಾಕ್‌ ಮಾಡಲಾಗಿದೆ  @instagram. ಮೊದಲು ಅವರು ನಿಮ್ಮ ಖಾತೆಯಿಂದ ಕೆಲ ಡೈರೆಕ್ಟ್ ಮೆಸೇಜ್ ಕಳಿಸಿ ಕೆಲ ಸ್ಟೆಪ್ ಗಳನ್ನು ಅನುಸರಿಸಲು ಮತ್ತು ಖಾತೆಯನ್ನು ಪರಿಶೀಲಿಸಲು ಕೇಳುತ್ತಾರೆ ಮತ್ತು ನಂತರ ಅದು ಹ್ಯಾಕ್ ಆಗುತ್ತದೆ. ನಿಜವೆ?#NotDone," ಎಂದು ಮಾತೋಂಡ್ಕರ್ ಮೈಕ್ರೋಬ್ಲಾಗಿಂಗ್ ಸೈಟ್‌ನಲ್ಲಿ ಬರೆದಿದ್ದಾರೆ .

ನಂತರದ ಟ್ವೀಟ್‌ನಲ್ಲಿ, ಅಕೌಂಟ್ ಹ್ಯಾಕ್ ಬಗ್ಗೆ ತಾನು ಮಹಾರಾಷ್ಟ್ರ ಸೈಬರ್‌ ಅಧಿಕಾರಿಗಳಿಗೆ ಪ್ರಥಮ ಮಾಹಿತಿ ವರದಿ (ಎಫ್‌ಐಆರ್) ಸಲ್ಲಿಸಿದ್ದೇನೆ, ಮಹಿಳೆಯರು "ಸೈಬರ್ ಅಪರಾಧಗಳನ್ನು" ಲಘುವಾಗಿ ತೆಗೆದುಕೊಳ್ಳಬಾರದು ಎಂದು ಹೇಳಿದ್ದಾರೆ.

ಮಾತೋಂಡ್ಕರ್ ಅವರ ಇನ್‌ಸ್ಟಾಗ್ರಾಮ್ ಖಾತೆಯ ಪೋಸ್ಟ್‌ಗಳನ್ನು ಅಳಿಸಿಹಾಕಲಾಗಿದ್ದು, ಡಿಸ್ಪ್ಲೆ ನೇಮ್ ಅನ್ನು "ಇನ್‌ಸ್ಟಾಗ್ರಾಮ್ ಸಪೋರ್ಟ್" ಎಂದು ಬದಲಿಸಲಾಗಿದೆ.

"ಇದು ನಿಮಗೆ ಕಳುಹಿಸಲಾದ ಸ್ವಯಂಚಾಲಿತ ಸಂದೇಶವಾಗಿದೆ. ನೀವು ಹಕ್ಕುಸ್ವಾಮ್ಯವನ್ನು ಉಲ್ಲಂಘಿಸಿದ್ದರೆ, ನೀವು ಸ್ವಯಂಚಾಲಿತ ಸಂದೇಶವನ್ನು ಸ್ವೀಕರಿಸುತ್ತೀರಿ" ಎಂದ್ಯ್ ಮೆಸೇಜ್ ಒಂದು ಆಕೆಯ ಪ್ರೊಫೈಲ್‌ನಲ್ಲಿ ಕಾಣಿಸಿದೆ. ಕಾಂಗ್ರೆಸ್ ಅಭ್ಯರ್ಥಿಯಾಗಿ ಉತ್ತರ ಮುಂಬೈ ಕ್ಷೇತ್ರದಿಂದ 2019 ರ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಮಾತೋಂಡ್ಕರ್ ಇತ್ತೀಚೆಗೆ ಕೈ ಪಕ್ಷ ತೊರೆದು ಶಿವಸೇನೆ ಸೇರಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT