ರೈತರ ಪ್ರತಿಭಟನೆ 
ದೇಶ

ಅಸ್ಸಾಂ: ಆರ್ ಎಸ್ಎಸ್ ನ ಸಹ ಸಂಘಟನೆಯಿಂದ ರೈತರ ಪ್ರತಿಭಟನೆಗೆ ಬೆಂಬಲ!

ಅಸ್ಸಾಂ ನಲ್ಲಿ ಆರ್ ಎಸ್ಎಸ್ ನ ಸಹ ಸಂಘಟನೆಯಾಗಿರುವ ಕೃಷಿ ವಿಭಾಗದ ಭಾರತೀಯ ಕಿಸಾನ್ ಸಂಘ್ (ಬಿಕೆಎಸ್) ದೆಹಲಿ ಗಡಿ ಭಾಗದಲ್ಲಿ ರೈತರು ನಡೆಸುತ್ತಿರುವ ಪ್ರತಿಭಟನೆಗೆ ಬೆಂಬಲ ವ್ಯಕ್ತಪಡಿಸಿದೆ. 

ಗುವಾಹಟಿ: ಅಸ್ಸಾಂ ನಲ್ಲಿ ಆರ್ ಎಸ್ಎಸ್ ನ ಸಹ ಸಂಘಟನೆಯಾಗಿರುವ ಕೃಷಿ ವಿಭಾಗದ ಭಾರತೀಯ ಕಿಸಾನ್ ಸಂಘ್ (ಬಿಕೆಎಸ್) ದೆಹಲಿ ಗಡಿ ಭಾಗದಲ್ಲಿ ರೈತರು ನಡೆಸುತ್ತಿರುವ ಪ್ರತಿಭಟನೆಗೆ ಬೆಂಬಲ ವ್ಯಕ್ತಪಡಿಸಿದೆ. 

ಕೃಷಿ ಉತ್ಪನ್ನಗಳಿಗೆ ಕನಿಷ್ಟ ಬೆಂಬಲ ಬೆಲೆ (ಎಂಎಸ್ ಪಿ) ನೀಡುವ ಕಾನೂನು ಜಾರಿಗೆ ತರಬೇಕೆಂಬ ಬೇಡಿಕೆ ಮುಂದಿಟ್ಟು ಬಿಕೆಎಸ್ ರೈತರ ಪ್ರತಿಭಟನೆಗೆ ಬೆಂಬಲ ಸೂಚಿಸಿದೆ.

ಬಿಜೆಪಿಯನ್ನು ಬೆಂಬಲಿಸುವ ಸಂಘ, ಕೇಂದ್ರ ಸರ್ಕಾರ ಹೊಸ ಕೃಷಿ ಕಾನೂನನ್ನು ಹಿಂಪಡೆಯುವುದರತ್ತ ಒಲವು ತೋರದೇ ಇದ್ದರೂ ಎಂಎಸ್ ಪಿ ಹಾಗೂ ಖರೀದಿ ಸಂಸ್ಥೆಗಳಿಂದ ರೈತರಿಗೆ ಬ್ಯಾಂಕ್ ಖಾತ್ರಿಯನ್ನು ನೀಡುವುದನ್ನು ಕಡ್ಡಾಯಗೊಳಿಸುವುದಕ್ಕೆ ಒತ್ತಾಯಿಸುತ್ತಿದೆ.

ಈಗ ರೈತರ ಪ್ರತಿಭಟನೆಗೆ ಬಗ್ಗಿರುವ ಕೇಂದ್ರ ಸರ್ಕಾರ ಕೆಲವು ಬದಲಾವಣೆಗಳನ್ನು ಮಾಡಲು ಒಪ್ಪಿಗೆ ಸೂಚಿಸಿದೆಯಾದರೂ ದೊಡ್ಡ ಕಾರ್ಪೊರೇಟ್ ಗಳು ಹಾಗೂ ವ್ಯಾಪಾರಿಗಳಿಂದ ರೈತರಿಗೆ ಅಪಾಯ ಎದುರಾಗಂತೆ ಬ್ಯಾಂಕ್ ಸುರಕ್ಷತೆ ಹಾಗೂ ಎಂಎಸ್ ಪಿ ಜಾರಿಗೆ ತರಲೇಬೇಕೆಂದು ಅಸ್ಸಾಂ ಬಿಕೆಎಸ್ ನ ಸಂಘಟನಾ ಕಾರ್ಯದರ್ಶಿ ಕೃಷ್ಣ ಕಾಂತ್ ಬೋರಾ ಹೇಳಿದ್ದಾರೆ.

ಕಂಪನಿಗಳು ರೈತರಿಗೆ ಭರವಸೆ ನೀಡುವ ಮೊತ್ತವನ್ನು ಪಾವತಿ ಮಾಡದೇ ಇದ್ದಲ್ಲಿ ಸರ್ಕಾರ ಅದನ್ನು ರೈತರಿಗೆ ಸಿಗುವಂತೆ ವಸೂಲಿ ಮಾಡುವುದಕ್ಕೆ ಕಂಪನಿಗಳಿಂದ ಬ್ಯಾಂಕ್ ಭದ್ರತೆಯನ್ನು ಒದಗಿಸಬೇಕು, ಖರೀದಿದಾರರ ಬಗ್ಗೆ ರೈತರಿಗೆ ಮಾಹಿತಿ ನೀಡುವ ಡಾಟಾ ಪೋರ್ಟಲ್ ಜಾರಿಗೆ ಬರಬೇಕೆಂದು ಬೋರಾ ಆಗ್ರಹಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

'ಧಮ್ ಇದ್ರೆ.. ಸನಾತನಧರ್ಮ, ಬಿಹಾರಿಗಳ ಕುರಿತ ಹೇಳಿಕೆ ಮತ್ತೆ ಹೇಳ್ತೀರಾ?': MK Stalin ಗೆ ಬಿಜೆಪಿ-ಜೆಡಿಯು ಸವಾಲು!

Video: 80 ಸಾವಿರ ಹಣವಿದ್ದ ಬ್ಯಾಗ್ ನಾಪತ್ತೆ, ಮೇಲಿಂದ ಕೋತಿಯಿಂದ ಹಣದ ಸುರಿಮಳೆ! ಸಿಕ್ಕಿದೆಷ್ಟು ಗೊತ್ತಾ?

Dharmasthala: Mahesh Shetty Thimarodi ಮನೆ ಮಹಜರು, ಪತ್ನಿ-ಮಕ್ಕಳ ಮೊಬೈಲ್ ವಶಕ್ಕೆ, 3 ತಲ್ವಾರ್ ಕೂಡ ಪತ್ತೆ!

SCROLL FOR NEXT