ಡಿಕೆ.ಶಿವಕುಮಾರ್ 
ದೇಶ

ಖಾಸಗಿ ಮುದ್ರಣಾಲಯದಲ್ಲಿ ಮತದಾರರ ಪಟ್ಟಿ ಮುದ್ರಿಸದಂತೆ ಚುನಾವಣಾ ಆಯೋಗಕ್ಕೆ ಡಿಕೆಶಿ ಪತ್ರ

ಮತದಾರರ ಪಟ್ಟಿಯನ್ನು ಸರ್ಕಾರಿ ಮುದ್ರಣಾಲಯಗಳಲ್ಲಿಯೇ ಮುದ್ರಿಸುವಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ರಾಜ್ಯ ಮುಖ್ಯ ಚುನಾವಣಾಧಿಕಾರಿಗೆ ಪತ್ರ ಬರೆದಿದ್ದಾರೆ.

ಬೆಂಗಳೂರು: ಮತದಾರರ ಪಟ್ಟಿಯನ್ನು ಸರ್ಕಾರಿ ಮುದ್ರಣಾಲಯಗಳಲ್ಲಿಯೇ ಮುದ್ರಿಸುವಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ರಾಜ್ಯ ಮುಖ್ಯ ಚುನಾವಣಾಧಿಕಾರಿಗೆ ಪತ್ರ ಬರೆದಿದ್ದಾರೆ.

ಚುನಾವಣಾ ಸಂದರ್ಭದಲ್ಲಿ ಕೆಲವು ವರ್ಗಗಳ ಮತದಾರರ ಹೆಸರು ಮತದಾರರ ಪಟ್ಟಿಯಿಂದ ಬಿಟ್ಟು ಹೋಗುವ ಘಟನೆಗಳು ನಡೆಯುತ್ತವೆ. ರಾಜಕೀಯ ಪಕ್ಷದ ಅಂಗ ಸಂಸ್ಥೆಗಳಿಂದ ಮುದ್ರಣ ಮಾಡಿಸುವುದರಿಂದ ಈ ರೀತಿಯ ಘಟನೆಗಳು ನಡೆಯುತ್ತವೆ. ಕೊನೆ ಗಳಿಗೆಯಲ್ಲಿ ಆಗುವ ಪ್ರಮಾದವನ್ನು ಸರಿ ಪಡಿಸಲು ಬೇರೆ ರಾಜಕೀಯ ಪಕ್ಷಗಳಿಗೆ ಅವಕಾಶ ಸಿಗುವುದಿಲ್ಲ. ಅಷ್ಟರಲ್ಲಿ ಚುನಾವಣೆ ಮುಗಿದು ಹೋಗುತ್ತದೆ ಎಂದಿದ್ದಾರೆ.

ಖಾಸಗಿ ಮುದ್ರಣಾಲಯಗಳಲ್ಲಿ ಮುದ್ರಿಸುವುದರಿಂದ ಇಂತಹ ಪ್ರಮಾದಗಳಿಗೆ ಅವಕಾಶ ಕಲ್ಪಿಸಿದಂತಾಗುತ್ತದೆ. ಪಾರದರ್ಶಕತೆ ಇರುವುದಿಲ್ಲ. ತಪ್ಪಿತಸ್ಥರ ವಿರುದ್ಧ ಶಿಸ್ತು ಕ್ರಮ ಹಾಗೂ ಕಾನೂನು ಕ್ರಮ ಕೈಗೊಳ್ಳಲು ಅವಕಾಶ ಇರುವುದಿಲ್ಲ. ಹೀಗಾಗಿ ಮತದಾರರ ಪಟ್ಟಿಯನ್ನು ತಯಾರಿಸಲು ಖಾಸಗಿ ಸಂಸ್ಥೆಗಳಿಗೆ ನೀಡದೆ ಸರ್ಕಾರಿ ಮುದ್ರಣಾಲಯದಲ್ಲಿಯೇ ಮುದ್ರಿಸುವಂತೆ ಡಿಕೆಶಿ ಮನವಿ ಮಾಡಿದ್ದಾರೆ.

ಇನ್ನೇನು ಕೆಲವೇ ದಿನಗಳಲ್ಲಿ ಗ್ರಾಮ ಪಂಚಾಯತ್ ಚುನಾವಣೆ ನಡೆಯುತ್ತಿದ್ದು, ಪಂಚಾಯತ್ ಮಟ್ಟದಲ್ಲಿ ಎಲ್ಲಾ ತಯಾರಿಗಳು ನಡೆಯುತ್ತಿವೆ. ಹಾಗಾಗಿ ಮತದರಾರ ಪಟ್ಟಿ ಮುದ್ರಣಕ್ಕೆ ಖಾಸಗಿ ಸಂಸ್ಥೆಗಳಿಗೆ ನೀಡಿದರೆ ಅಲ್ಲಿ ಅವ್ಯವಹಾರ ನಡೆಯುವ ಸಾಧ್ಯತೆ ಇದೆ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT