ಪಾಲಕ್ಕಾಡ್ ಪುರಸಭೆ ಕಟ್ಟಡದ ಮೇಲೆ ಬ್ಯಾನರ್ 
ದೇಶ

ಕೇರಳ: ಪಾಲಕ್ಕಾಡ್ ಪುರಸಭೆ ಕಟ್ಟಡದ ಮೇಲೆ 'ಜೈ ಶ್ರೀ ರಾಮ್' ಬ್ಯಾನರ್, ಬಿಜೆಪಿ ಕಾರ್ಯಕರ್ತರ ವಿರುದ್ಧ ಕೇಸ್ ದಾಖಲು

ಇತ್ತೀಚಿಗೆ ನಡೆದ ಪಲಕ್ಕಾಡ್ ಪುರಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸಿದ ನಂತರ ಪುರಸಭೆ ಕಚೇರಿ ಮೇಲೆ ಜೈ ಶ್ರೀ ರಾಮ್' ಮತ್ತು 'ವಂದೇ ಮಾತರಂ' ಎಂಬ ಘೋಷಣೆ ಇರುವ ಎರಡು ಬ್ಯಾನರ್ ಗಳನ್ನು ಹಾಕಿದ್ದ ಆರೋಪದ ಮೇರೆಗೆ ಕೆಲ ಬಿಜೆಪಿ ಕಾರ್ಯಕರ್ತರ ವಿರುದ್ಧ ಪೊಲೀಸರು ಕೇಸ್ ದಾಖಲಿಸಿದ್ದಾರೆ.

ಪಲಕ್ಕಾಡ್: ಇತ್ತೀಚಿಗೆ ನಡೆದ ಪಾಲಕ್ಕಾಡ್ ಪುರಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸಿದ ನಂತರ ಪುರಸಭೆ ಕಚೇರಿ ಮೇಲೆ ಜೈ ಶ್ರೀ ರಾಮ್' ಮತ್ತು 'ವಂದೇ ಮಾತರಂ' ಎಂಬ ಘೋಷಣೆ ಇರುವ ಎರಡು ಬ್ಯಾನರ್ ಗಳನ್ನು ಹಾಕಿದ್ದ ಆರೋಪದ ಮೇರೆಗೆ ಕೆಲ ಬಿಜೆಪಿ ಕಾರ್ಯಕರ್ತರ ವಿರುದ್ಧ ಪೊಲೀಸರು ಕೇಸ್ ದಾಖಲಿಸಿದ್ದಾರೆ.

ಪುರಸಭೆ ಕಾರ್ಯದರ್ಶಿ ದೂರು ದಾಖಲಿಸಿದ ನಂತರ ಕೇಸ್ ನ್ನು ದಾಖಲಿಸಲಾಗಿದೆ. ಕೋಮು ಸೌಹಾರ್ದತೆಯನ್ನು ಹಾಳು ಮಾಡುವ ಪ್ರಯತ್ನ ನಡೆದಿದೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಬುಧವಾರ ಸಂಜೆ ಪುರಸಭೆ ಎದುರು ನಡೆದ ವಿಜಯೋತ್ಸವದ ಸಂದರ್ಭದಲ್ಲಿ, ಪುರಸಭೆ ಕಟ್ಟಡ ಮೇಲೆ ಮಲಯಾಳಂನಲ್ಲಿ ಬರೆದ 'ಜೈ ಶ್ರೀ ರಾಮ್' ಮತ್ತು ಕಟ್ಟಡದ ಮೇಲ್ಬಾಗದಲ್ಲಿ ಹಾಕಲಾದ ಛತ್ರಪತಿ ಶಿವಾಜಿ ಮಹಾರಾಜ್ ಅವರ ಬೃಹತ್ ಚಿತ್ರದೊಂದಿಗೆ ಕೆಲ ಬಿಜೆಪಿ ಕಾರ್ಯಕರ್ತರು ಇರುವುದು ವಿಡಿಯೋದಲ್ಲಿ ಕಂಡುಬಂದಿದೆ. ಈ ಬಿಜೆಪಿ ಕಾರ್ಯಕರ್ತರು ಪ್ರಧಾನಿ ನರೇಂದ್ರ ಮೋದಿ ಮತ್ತು ಅಮಿತ್ ಶಾ ಇರುವ ಮತ್ತೊಂದು ಬ್ಯಾನರ್ ವೊಂದನ್ನು ಸಹ ಅನಾವರಣಗೊಳಿಸಿರುವುದಾಗಿ ಪೊಲೀಸರು ಹೇಳಿದ್ದಾರೆ.

ಈ ಘಟನೆಗೆ ಸಂಬಂಧಿಸಿದಂತೆ ವರದಿ ಸಲ್ಲಿಸುವಂತೆ ವಿಶೇಷ ವಿಭಾಗದ ಉಪ ಮಹಾನಿರ್ದೇಶಕರು ಸೂಚಿಸಿರುವುದಾಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುಜಿತ್ ದಾಸ್ ಎಸ್ ಸುದ್ದಿಸಂಸ್ಥೆಯೊಂದಕ್ಕೆ ತಿಳಿಸಿದ್ದಾರೆ. ಇತ್ತೀಚಿಗೆ ನಡೆದ ಪುರಸಭೆ ಚುನಾವಣೆಯಲ್ಲಿ 52 ವಾರ್ಡ್ ಗಳ ಪೈಕಿಯಲ್ಲಿ 28 ರಲ್ಲಿ ಬಿಜೆಪಿ ಗೆಲುವು ಸಾಧಿಸಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮೈಸೂರಿನಲ್ಲಿ ರಾಹುಲ್ ಗಾಂಧಿ ಜತೆ ಸಿದ್ದರಾಮಯ್ಯ, ಡಿಕೆಸಿ ಮಹತ್ವದ ಚರ್ಚೆ; ಬಳಿಕ ಸಿಎಂ ಹೇಳಿದ್ದೇನು? Video

'Ground Ops ಗಾಗಿ ಭಾರತೀಯ ಸೇನೆ ಸಂಪೂರ್ಣ ಸಜ್ಜು: ಪಾಕ್ ಗೆ ವಾರ್ನಿಂಗ್ ನೀಡಿದ ಸೇನಾ ಮುಖ್ಯಸ್ಥ ದ್ವಿವೇದಿ!

ಬ್ಲಿಂಕಿಟ್, ಸ್ವಿಗ್ಗಿ, ಜೆಪ್ಟೊಗೆ 10 ನಿಮಿಷಗಳ ಡೆಲಿವರಿ ಸೇವೆ ನಿಲ್ಲಿಸುವಂತೆ ಸರ್ಕಾರ ಸೂಚನೆ; ಯಾಕೆ ಗೊತ್ತಾ?

'ಹಾವು ಕಚ್ಚಿದೆ ಬೇಗ ಚಿಕಿತ್ಸೆ ಕೊಡಿ'; ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂದ ಆಟೋ ಚಾಲಕ, Video

ಜಮ್ಮು-ಕಾಶ್ಮೀರ: ಇದೇ ಮೊದಲು, ಮಸೀದಿಯ ಇಮಾಮ್ ಸೇರಿದಂತೆ ಎಲ್ಲರ ವೈಯಕ್ತಿಕ ಮಾಹಿತಿ ಕಲೆ ಹಾಕುತ್ತಿರುವ ಪೊಲೀಸರು! ಕಾರಣವೇನು ಗೊತ್ತಾ?

SCROLL FOR NEXT