ಹತ್ರಾಸ್ ಪ್ರಕರಣ 
ದೇಶ

ಹತ್ರಾಸ್ ಸಾಮೂಹಿಕ ಅತ್ಯಾಚಾರ, ಕೊಲೆ ಪ್ರಕರಣ: ಚಾರ್ಜ್ ಶೀಟ್ ದಾಖಲಿಸಿದ ಸಿಬಿಐ

ಹತ್ರಾಸ್ ಸಾಮೂಹಿಕ ಅತ್ಯಾಚಾರ, ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ಸಿಬಿಐ ಚಾರ್ಜ್ ಶೀಟ್ ದಾಖಲಿಸಿದೆ. 

ಲಖನೌ: ಹತ್ರಾಸ್ ಸಾಮೂಹಿಕ ಅತ್ಯಾಚಾರ, ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ಸಿಬಿಐ ಚಾರ್ಜ್ ಶೀಟ್ ದಾಖಲಿಸಿದೆ. 

ಹೌದು.. ಉತ್ತರಪ್ರದೇಶದ ಹತ್ರಾಸ್ ಎಂಬಲ್ಲಿ ಯುವತಿಯೋರ್ವಳನ್ನು ಸಾಮೂಹಿಕ ಅತ್ಯಾಚಾರ ಮಾಡಿ ಕೊಲೆಗೈಯಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ಸಿಬಿಐ ವರದಿ ಸಲ್ಲಿಸಿದೆ. ಪ್ರಕರಣ ನಡೆದು ಮೂರು ತಿಂಗಳಾದ ಬಳಿಕ ಸಿಬಿಐ ಈ ಕುರಿತು ಚಾರ್ಜ್ ಶೀಟ್  ಸಲ್ಲಿಸಿದ್ದು, ಯುವತಿಯನ್ನು ಸಾಮೂಹಿಕ ಅತ್ಯಾಚಾರ ಮಾಡಿ ಕೊಲೆಗೈಯಲಾಗಿದೆ ಎಂದು  ಚಾರ್ಜ್ ಶೀಟ್ ನಲ್ಲಿ ಆರೋಪಿಸಲಾಗಿದೆ.

ಯುವತಿಯನ್ನು ದಾಖಲಿಸಲಾಗಿದ್ದ ಆಸ್ಪತ್ರೆಯ ವೈದ್ಯರ ಹೇಳಿಕೆಗಳನ್ನೂ ಪಡೆದು, ಫೊರೆನ್ಸಿಕ್ ಪರೀಕ್ಷೆಗಳನ್ನೂ (ವಿಧಿ ವಿಜ್ಞಾನ ಪ್ರಯೋಗಾಲಯ) ನಡೆಸಿರುವ ತನಿಖಾ ತಂಡವು ದೆಹಲಿಯಿಂದ 200ಕಿ.ಮೀ ದೂರದಲ್ಲಿರುವ ಹತ್ರಾಸ್ ನ ನ್ಯಾಯಾಲಯದಲ್ಲಿ ಚಾರ್ಜ್ ಶೀಟ್ ಸಲ್ಲಿಸಿದೆ.  ಆರೋಪಿಗಳ ವಿರುದ್ಧ ಪರಿಶಿಷ್ಟ ಜಾತಿ/ಪಂಗಡ ದೌಜರ್ನ್ಯ ಕಾಯ್ದೆಯಡಿ ಪ್ರಕರಣವನ್ನು ದಾಖಲಿಸಲಾಗಿದ್ದು, ಚಾರ್ಜ್ ಶೀಟ್ ನಲ್ಲಿ ಸಂದೀಪ್, ಲವಕುಶ್, ರವಿ ಮತ್ತು ರಾಮು ಎಂಬುವವರ ಹೆಸರು ಉಲ್ಲೇಖಿಸಲಾಗಿದೆ.

ಸೆ.14ರಂದು ಮೇಲ್ಜಾತಿಗೆ ಸೇರಿದ ನಾಲ್ವರು ಯುವಕರು ಯುವತಿಯೋರ್ವಳನ್ನು ಅತ್ಯಾಚಾರ ಮಾಡಿದ್ದರು. ಸೆ.29ರಂದು ಯುವತಿ ಸಫ್ಜರ್ ಜಂಗ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದರು.  ಕೊಲೆಗೈದಿದ್ದರು. ಯುವತಿಯು ಬಳಿಕ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಳು. ಮೃತಪಟ್ಟ  ಯುವತಿಯ ಮೃತದೇಹವನ್ನು ಪೊಲೀಸರು ಅದೇ ದಿನದ ರಾತ್ರಿ ಅಂದರೆ ಸೆ.30ರಂದು ತರಾತುರಿಯಲ್ಲಿ ಕುಟುಂಬದ ಅನುಮತಿಯನ್ನೂ ಪಡೆಯದೇ ಸಂಸ್ಕಾರ ಮಾಡಿದ್ದರು ಎಂದು ಆರೋಪಿಸಲಾಗಿದೆ. ಈ ಪ್ರಕರಣ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿತ್ತು. 

ಆದಾಗ್ಯೂ, ಸ್ಥಳೀಯ ಪೊಲೀಸ್ ಅಧಿಕಾರಿಗಳು "ಕುಟುಂಬದ ಇಚ್ಛೆಯಂತೆ" ಅಂತ್ಯಕ್ರಿಯೆ ನಡೆಸಲಾಗಿದೆ ಎಂದು ಹೇಳಿದ್ದರು. ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಂದೀಪ್, ಲವ್ಕುಶ್, ರವಿ ಮತ್ತು ರಾಮು ಅವರ ಪಾತ್ರವನ್ನು ಸಂಸ್ಥೆ ಪರಿಶೀಲಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದರು.  ಗಾಂಧಿನಗರದ ವಿಧಿವಿಜ್ಞಾನ ವಿಜ್ಞಾನ ಪ್ರಯೋಗಾಲಯದಲ್ಲಿ ವಿವಿಧ ವಿಧಿವಿಜ್ಞಾನ ಪರೀಕ್ಷೆಗಳ ಮೂಲಕ ಅವರನ್ನು ಇರಿಸಲಾಗಿತು ಎಂದು ಅವರು ಹೇಳಿದರು. ಸಿಬಿಐ ತನಿಖಾಧಿಕಾರಿಗಳು ಜವಾಹರಲಾಲ್ ನೆಹರು ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ವೈದ್ಯರನ್ನು ಭೇಟಿ ಮಾಡಿದ್ದರು,

ಈ ಪ್ರಕರಣ ಉತ್ತರ ಪ್ರದೇಶ ಸರ್ಕಾರಕ್ಕೆ ತೀವ್ರ ಮುಜುಗರವನ್ನುಂಟು ಮಾಡಿತ್ತು. ತೀವ್ರ ಪ್ರತಿಭಟನೆ ಬಳಿಕ ಈ ಪ್ರಕರಣದ ತನಿಖಾ ಮೇಲ್ವಿಚಾರಣೆಯನ್ನು ಸಿಬಿಐಗೆ ವಹಿಸಲಾಗಿತ್ತು.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT